ಬ್ರೇಕಿಂಗ್ ನ್ಯೂಸ್
14-02-26 10:47 pm HK Staffer ಕ್ರೈಂ
ನವದೆಹಲಿ, ಫೆ.14: ಪ್ರೇಮಿಗಳ ದಿನಾಚರಣೆ ದಿನವೇ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಜೋಡಿ ದುರಂತ ಅಂತ್ಯಕಂಡ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾದ ಸೆಕ್ಟರ್ 39ರಲ್ಲಿ ಪಾರ್ಕ್ ಮಾಡಿದ್ದ ಟಾಟಾ ಅಲ್ಟ್ರೋಜ್ ಕಾರಿನಲ್ಲಿ ಪ್ರೇಮಿಗಳಾದ ಸುಮಿತ್ ಹಾಗೂ ರೇಖಾ ಎಂಬಿಬ್ಬರ ಶವಗಳು ಪತ್ತೆಯಾಗಿವೆ. ತಮ್ಮ ಕೊನೆಯ ಕ್ಷಣಗಳನ್ನು ಈ ಜೋಡಿ ಇದೇ ಕಾರಿನಲ್ಲಿ ಕಳೆದಿದ್ದಾರೆ. ಸುಮಿತ್ ಹಾಗೂ ರೇಖಾ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇದರ ನಡುವೆ, ರೇಖಾಗೆ ಮನೆಯಲ್ಲಿ ಬೇರೆ ವರನನ್ನು ನೋಡಿದ್ದು, ಮದುವೆಗೆ ಮುಂದಾಗಿದ್ದರು. ಈ ವಿಷಯ ತಿಳಿದ ಸುಮಿತ್ ಕೊನೆಯದಾಗಿ ಭೇಟಿಯಾಗುವುದಾಗಿ ಹೇಳಿ ರೇಖಾಳ ಕರೆದಿದ್ದು, ಕಾರಿನಲ್ಲಿ ಕೂರಿಸಿಕೊಂಡು ಸೆಕ್ಟರ್ 39ರ ಬಳಿ ಬಂದಿದ್ದಾನೆ. ಬಳಿಕ ರಿವಾಲ್ವರ್ ತೆಗೆದು ಮೊದಲು ರೇಖಾ ಹಣೆಗೆ ಗುಂಡಿಕ್ಕಿದ್ದರೆ, ಬಳಿಕ ತನ್ನ ತಲೆಗೆ ಗುಂಡಿಕ್ಕಿ ದುರಂತ ಅಂತ್ಯ ಕಂಡಿದ್ದಾರೆ
ಸುಮಿತ್ ಕಳುಗಿಸಿದ ಮೆಸೇಜ್ನಲ್ಲಿ ಪ್ರೀತಿ, ಮದುವೆ ವಿಚಾರ ಹೇಳಿಕೊಂಡಿದ್ದ. ನನ್ನ ನಿರ್ಧಾರಕ್ಕೆ ರೇಖಾ ಕಾರಣ. ಕಳೆದ 15 ವರ್ಷದಿಂದ ನಾವು ಪ್ರೀತಿಸುತ್ತಿದ್ದೇವೆ. ಇದೀಗ ಆಕೆ ಬೇರೆಯೊಬ್ಬನ ಮದುವೆಯಾಗುತ್ತಿದ್ದಾಳೆ. ನನಗೆ ಮೋಸ ಮಾಡಿದ್ದಾಳೆ. ಇದು ನನಗೆ ಸಹಿಸಲು ಸಾಧ್ಯವಿಲ್ಲ. ಹೀಗಾಗಿ ಬದುಕು ಅಂತ್ಯಗೊಳಿಸುತ್ತಿದ್ದೇನೆ ಎಂದು ಮೆಸೇಜ್ ಮಾಡಿದ್ದಾನೆ.
ಶುಕ್ರವಾರ ರೇಖಾಳ ಜೊತೆ ತೆರಳಿದ್ದು ಇಬ್ಬರೂ ಮನೆಗೆ ಮರಳಿಲ್ಲ. ಗಾಬರಿಗೊಂಡ ಎರಡೂ ಮನೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಟವರ್ ಲೋಕೇಶನ್ ಪತ್ತೆಹಚ್ಚಿ ಹುಡುಕಿದಾಗ ಕಾರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಒಳಗಿನಿಂದ ಲಾಕ್ ಮಾಡಿಕೊಂಡು ಇಬ್ಬರೂ ದುರಂತ ಅಂತ್ಯ ಕಂಡಿದ್ದಾರೆ. ಮೇಲ್ನೋಟಕ್ಕೆ ಪ್ರೀತಿ ವಿಚಾರದಲ್ಲಿ ಬದುಕು ಅಂತ್ಯಗೊಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
A young couple was found dead inside a parked car in Sector 39 of Noida on Valentine’s Day, in a suspected case of murder-suicide, police said. The deceased have been identified as Sumit and Rekha, who were reportedly in a relationship for several years. Their bodies were discovered inside a Tata Altroz car that was locked from the inside.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am