ಬ್ರೇಕಿಂಗ್ ನ್ಯೂಸ್
16-02-26 04:01 pm HK News Desk ಕ್ರೈಂ
ಮಂಗಳೂರು, ಫೆ.16: ದಾವಣಗೆರೆ ಬೆನ್ನಲ್ಲೇ ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೂ ಕಿಡಿಗೇಡಿಗಳು ಬಾಂಬ್ ಬೆದರಿಕೆಯ ಇ-ಮೇಲ್ ಕಳಿಸಿದ್ದಾರೆ. RDX , IED ರೀತಿಯ ಸ್ಫೋಟಕ ಬಳಸಿ ಕೋರ್ಟನ್ನು ಸ್ಪೋಟಿಸುವ ಬೆದರಿಕೆ ಹಾಕಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಸೋಮವಾರ ಮಧ್ಯಾಹ್ನ ಎಂದಿನಂತೆ ಕೋರ್ಟ್ ಕಲಾಪ ನಡೆಯುತ್ತಿದ್ದಾಗಲೇ ವಿಷಯ ಗೊತ್ತಾಗಿದ್ದು ಪೊಲೀಸರು ದೌಡಾಯಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳವೂ ಬಂದು ಪರಿಶೀಲನೆ ಕೈಗೊಂಡಿದೆ. ಪಾರ್ಕಿಂಗ್, ಕೋರ್ಟ್ ಆವರಣ ಸೇರಿದಂತೆ ನ್ಯಾಯಾಲಯದ ಒಳಗಡೆ ತಪಾಸಣೆ ನಡೆಸಿದ್ದಾರೆ. ಮಂಗಳೂರು ಪೊಲೀಸರು ತಪಾಸಣೆ ಕೈಗೊಂಡಿದ್ದು ಯಾವುದೇ ಸ್ಫೋಟಕ ಮಾದರಿ ಪತ್ತೆಯಾಗಿಲ್ಲ. ಈ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಬೆದರಿಕೆ ಸಂದೇಶದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕೋರ್ಟಿಗೂ ಸೋಮವಾರ ಬೆಳಗ್ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು. ಬೆಳಗ್ಗೆ 8.30ರ ವೇಳೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು ಕೂಡಲೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಬಂದು ತಪಾಸಣೆ ನಡೆಸಿದೆ. ಶೋಧ ಕಾರ್ಯದ ಬಳಿಕ ಯಾವುದೇ ಅಸಹಜ ವಸ್ತುಗಳು ಸಿಗದ ಕಾರಣ ಅದೊಂದು ಹುಸಿ ಬಾಂಬ್ ಕರೆಯೆಂದು ಪೊಲೀಸರು ನಿರ್ಧರಿಸಿದ್ದು ಕೋರ್ಟ್ ಆವರಣದಲ್ಲಿ ಬಂದೋಬಸ್ತ್ ಹೆಚ್ಚಿಸಿದ್ದಾರೆ.

ಗುಜರಾತಿನ 13 ಶಾಲೆಗಳಿಗೆ ಬೆದರಿಕೆ ಸಂದೇಶ
ಇದೇ ವೇಳೆ, ಗುಜರಾತಿನ ವಡೋದರಾ ಮತ್ತು ಅಹ್ಮದಾಬಾದ್ ನಗರದಲ್ಲಿ 13 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ಹೆಸರನ್ನು ಉಲ್ಲೇಖಿಸಿ, ಗುಜರಾತ್ ಮುಂದೆ ಖಲೀಸ್ತಾನ್ ಆಗಲಿದೆ, ಹಿಂದುಸ್ತಾನ್ ಎರಡಾಗಿ ವಿಭಜನೆ ಆಗಲಿದೆ ಎಂದು ಬರೆಯಲಾಗಿದೆ. ಶಾಲೆಗಳ ಆವರಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಭಯೋತ್ಪಾದಕ ಸಂಘಟನೆ ಕೈವಾಡ ಇದೆಯೇ, ಕಿಡಿಗೇಡಿ ಕೃತ್ಯವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
An anonymous email threatening a bomb blast was sent to the District Court premises in Mangaluru on Monday, triggering a major security alert. The email warned of an explosion using RDX and IEDs, prompting immediate action by the police. Security personnel rushed to the spot and launched an extensive search operation across the court complex.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am