ಬ್ರೇಕಿಂಗ್ ನ್ಯೂಸ್
18-02-26 07:42 pm Mangaluru Staffer ಕ್ರೈಂ
ಮಂಗಳೂರು, ಫೆ.18: ಯುವಕನೊಬ್ಬ ತನ್ನ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕದ್ರಿ ಶಿವಭಾಗ್ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಪೆರುವಾಡ್ ನಿವಾಸಿ ರೋಶನ್ (22) ಮೃತಪಟ್ಟ ಯುವಕ. ಕದ್ರಿ ಪಾರ್ಕ್ ಬಳಿಯ ಐಸ್ ಕ್ರೀಂ ಅಂಗಡಿ ಒಂದರಲ್ಲಿ ಕೆಲಸಕ್ಕಿದ್ದ ರೋಶನ್ ನಾಲ್ಕು ತಿಂಗಳಿನಿಂದ ಅಪಾರ್ಟ್ಮೆಂಟಿನಲ್ಲಿ ಇತರೇ ಯುವಕರೊಂದಿಗೆ ಬಾಡಿಗೆಗೆ ನೆಲೆಸಿದ್ದ. ನಿನ್ನೆ ರಾತ್ರಿ ತನ್ನ ಕೈಯನ್ನು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದು ಕೊಠಡಿಯಲ್ಲಿ ರಕ್ತದ ಕೋಡಿಯೇ ಹರಿದಿದೆ. ಬಳಿಕ ನೇಣು ಬಿಗಿದುಕೊಂಡಿರುವ ಸಾಧ್ಯತೆಯಿದೆ. ಕೊಠಡಿಯಲ್ಲಿ ಮದ್ಯದ ಬಾಟಲಿಯೂ ಪತ್ತೆಯಾಗಿದೆ. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಕೊಠಡಿಯಿಂದ ಹೊರಗಡೆ ಬರದೇ ಇದ್ದುದರಿಂದ ಇತರರು ಬಾಗಿಲು ತೆಗೆದು ನೋಡಿದಾಗ ಸಾವಿಗೆ ಶರಣಾಗಿದ್ದು ಕಂಡುಬಂದಿದೆ.





ಸ್ಥಳದಲ್ಲಿ ರಕ್ತದಲ್ಲೇ ಹುಡುಗಿಯೊಬ್ಬಳ ಹೆಸರನ್ನು ಬರೆದಿದ್ದು ಪತ್ತೆಯಾಗಿದೆ. ಇದಲ್ಲದೆ, ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಇದು ನನ್ನ ಕೊನೆಯ ಸ್ಟೇಟಸ್ ಅಂತಲೂ ಬರೆದುಕೊಂಡಿದ್ದಾನೆ. ಪ್ರೇಮ ವೈಫಲ್ಯದಿಂದ ಸಾವಿಗೆ ಶರಣಾಗಿದ್ದಾನೆಯೇ ಎಂಬ ಅನುಮಾನ ಇದೆ. ಏಳು ತಿಂಗಳ ಹಿಂದೆ ರೋಶನ್ ತನ್ನ ಊರಿನಲ್ಲಿಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ಆತನ ಮನೆಯವರಿಂದ ಪೊಲೀಸರಿಗೆ ತಿಳಿದುಬಂದಿದೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A 22-year-old man from Kerala was found dead in a rented apartment near Kadri Shivabhag in Mangaluru on Tuesday. The deceased, Roshan, a native of Kumbla in Kasaragod district, had been working at an ice cream shop in the city and was staying with friends. He was found unresponsive inside his room after he failed to come out in the morning.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am