ಬ್ರೇಕಿಂಗ್ ನ್ಯೂಸ್
20-02-26 02:31 pm Mangalore Correspondent ಕ್ರೈಂ
ಮಂಗಳೂರು, ಫೆ.20: ಬಿಎಸ್ಸೆನ್ನೆಲ್ ಸಂಸ್ಥೆಯ ವತಿಯಿಂದ ಸುಮಾರು 30-40 ವರ್ಷಗಳ ಹಿಂದೆ ಹಾಕಲಾಗಿದ್ದ ತಾಮ್ರದ ವೈರ್ ಗಳನ್ನು ಹೊಂದಿರುವ ಕೇಬಲನ್ನು ಮಣ್ಣಿನಡಿಯಿಂದ ತೆಗೆದು ಅಕ್ರಮವಾಗಿ ಮಾರಾಟ ಮಾಡಿದ ಕೃತ್ಯ ಬೆಳಕಿಗೆ ಬಂದಿದ್ದು, ಬಿಎಸ್ಸೆನ್ನೆಲ್ ಸಂಸ್ಥೆಗೆ ಸೇರಿದ ಮೂವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಪಾಂಡೇಶ್ವರ ಬಿಎಸ್ಸೆನ್ನೆಲ್ ಕಂಪನಿಯ ಕಚೇರಿಯಲ್ಲಿ ಟೆಲಿಕಾಂ ಟೆಕ್ನೀಶಿಯನ್ ಆಗಿರುವ ಕೆಕೆ ಚಾಮಿ(55), ಕಚೇರಿಯಲ್ಲಿ ಸಹಾಯಕ ಅಧೀಕ್ಷಕ ಹುದ್ದೆಯಲ್ಲಿದ್ದ ತನ್ವೀರ್ ಪಾಷಾ)48) ಮತ್ತು ಕೇಬಲ್ ಆಪರೇಟರ್ ಗುತ್ತಿಗೆ ನೌಕರನಾಗಿರುವ ಮಂಜುನಾಥ್ (35) ಎಂಬವರನ್ನು ಬಂಧಿಸಲಾಗಿದೆ. ಮಂಜುನಾಥ್ ಬಿಎಸ್ಸೆನ್ನೆಲ್ ಕಂಪನಿಯಲ್ಲಿ ಗುತ್ತಿಗೆ ನೌಕರನಾಗಿದ್ದು, ಎಲ್ ಅಂಡ್ ಟಿ ಕಂಪನಿಯಲ್ಲು ಕೇಬಲ್ ಜಾಯಿಂಟರ್ ಆಗಿ ಕೆಲಸ ಮಾಡುತ್ತಿದ್ದ.
ಹಿಂದೆ ಬಿಎಸ್ಸೆನ್ನೆಲ್ ಲ್ಯಾಂಡ್ ಫೋನ್ ಬಳಕೆಯಲ್ಲಿದ್ದಾಗ ಕೇಬಲನ್ನು ಭೂಗತವಾಗಿ ಹಾಕಲಾಗಿತ್ತು. ಪ್ರತಿ ಬಳಕೆದಾರನಿಗೂ ಪ್ರತ್ಯೇಕ ತಾಮ್ರದ ಕೇಬಲ್ ವೈರನ್ನು ಒಂದೇ ಪೈಪ್ ಒಳಗಡೆ ಹಾಕಿ ಸಂಪರ್ಕ ನೀಡಲಾಗುತ್ತಿತ್ತು. ಆದರೆ ಈಗ ಮೊಬೈಲ್ ಇನ್ನಿತರ ಖಾಸಗಿ ಕಂಪನಿಗಳ ದೂರವಾಣಿ ಚಾಲ್ತಿಗೆ ಬಂದಿರುವುದರಿಂದ ಹಳೆ ಮಾದರಿಯ ಲ್ಯಾಂಡ್ ಫೋನ್ ಅಗತ್ಯವಿಲ್ಲದೆ ಅದರ ಬಳಕೆ ಇಲ್ಲವಾಗಿದೆ.
ಇದರ ಬಗ್ಗೆ ಮಾಹಿತಿಯಿದ್ದ ಬಿಎಸ್ಸೆನ್ನೆಲ್ ಸಂಸ್ಥೆಯ ಟೆಕ್ನೀಶಿಯನ್ ಕೆಕೆ ಚಾಮಿ ಮತ್ತು ಕಚೇರಿ ಅಧೀಕ್ಷಕ ತನ್ವೀರ್ ಪಾಷಾ, ಮಂಜುನಾಥ್ ಜೊತೆಗೂಡಿ ಹಳೆ ಕಾಲದ ತಾಮ್ರದ ಕೇಬಲನ್ನು ತೆಗೆದು ಮಾರಾಟ ಮಾಡುತ್ತಿದ್ದರು. ನೆಹರು ಮೈದಾನ ಆಸುಪಾಸಿನಲ್ಲಿ ಸೇರಿದಂತೆ ಹಲವೆಡೆ ಹಾಕಿದ್ದ ಕೇಬಲನ್ನು ಒಂದೂವರೆ ವರ್ಷಗಳಿಂದ ತೆಗೆದು ಮಾರಾಟ ಮಾಡಿದ್ದು, ಇದರ ಈಗಿನ ಮಾರುಕಟ್ಟೆ ಮೌಲ್ಯ 70 ಲಕ್ಷ ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಪಾಂಡೇಶ್ವರ ಬಿಎಸ್ಸೆನ್ನೆಲ್ ಕಚೇರಿಯ ಜೂನಿಯರ್ ಟೆಲಿಕಾಂ ಆಫೀಸರ್ ವಿನೋದ್ ಶೇಖರ್ ನಾಯ್ಕ್ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಅವರ ಬಳಿಯಿದ್ದ 45 ಕೇಜಿ ತಾಮ್ರದ ಕೇಬಲ್ ಮತ್ತು ಕೇಬಲ್ ಮಾರಾಟ ಮಾಡಿ ಬಂದಿದ್ದ 10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm