ಬ್ರೇಕಿಂಗ್ ನ್ಯೂಸ್
20-02-26 02:31 pm Mangalore Correspondent ಕ್ರೈಂ
ಮಂಗಳೂರು, ಫೆ.20: ಬಿಎಸ್ಸೆನ್ನೆಲ್ ಸಂಸ್ಥೆಯ ವತಿಯಿಂದ ಸುಮಾರು 30-40 ವರ್ಷಗಳ ಹಿಂದೆ ಹಾಕಲಾಗಿದ್ದ ತಾಮ್ರದ ವೈರ್ ಗಳನ್ನು ಹೊಂದಿರುವ ಕೇಬಲನ್ನು ಮಣ್ಣಿನಡಿಯಿಂದ ತೆಗೆದು ಅಕ್ರಮವಾಗಿ ಮಾರಾಟ ಮಾಡಿದ ಕೃತ್ಯ ಬೆಳಕಿಗೆ ಬಂದಿದ್ದು, ಬಿಎಸ್ಸೆನ್ನೆಲ್ ಸಂಸ್ಥೆಗೆ ಸೇರಿದ ಮೂವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಪಾಂಡೇಶ್ವರ ಬಿಎಸ್ಸೆನ್ನೆಲ್ ಕಂಪನಿಯ ಕಚೇರಿಯಲ್ಲಿ ಟೆಲಿಕಾಂ ಟೆಕ್ನೀಶಿಯನ್ ಆಗಿರುವ ಕೆಕೆ ಚಾಮಿ(55), ಕಚೇರಿಯಲ್ಲಿ ಸಹಾಯಕ ಅಧೀಕ್ಷಕ ಹುದ್ದೆಯಲ್ಲಿದ್ದ ತನ್ವೀರ್ ಪಾಷಾ)48) ಮತ್ತು ಕೇಬಲ್ ಆಪರೇಟರ್ ಗುತ್ತಿಗೆ ನೌಕರನಾಗಿರುವ ಮಂಜುನಾಥ್ (35) ಎಂಬವರನ್ನು ಬಂಧಿಸಲಾಗಿದೆ. ಮಂಜುನಾಥ್ ಬಿಎಸ್ಸೆನ್ನೆಲ್ ಕಂಪನಿಯಲ್ಲಿ ಗುತ್ತಿಗೆ ನೌಕರನಾಗಿದ್ದು, ಎಲ್ ಅಂಡ್ ಟಿ ಕಂಪನಿಯಲ್ಲು ಕೇಬಲ್ ಜಾಯಿಂಟರ್ ಆಗಿ ಕೆಲಸ ಮಾಡುತ್ತಿದ್ದ.
ಹಿಂದೆ ಬಿಎಸ್ಸೆನ್ನೆಲ್ ಲ್ಯಾಂಡ್ ಫೋನ್ ಬಳಕೆಯಲ್ಲಿದ್ದಾಗ ಕೇಬಲನ್ನು ಭೂಗತವಾಗಿ ಹಾಕಲಾಗಿತ್ತು. ಪ್ರತಿ ಬಳಕೆದಾರನಿಗೂ ಪ್ರತ್ಯೇಕ ತಾಮ್ರದ ಕೇಬಲ್ ವೈರನ್ನು ಒಂದೇ ಪೈಪ್ ಒಳಗಡೆ ಹಾಕಿ ಸಂಪರ್ಕ ನೀಡಲಾಗುತ್ತಿತ್ತು. ಆದರೆ ಈಗ ಮೊಬೈಲ್ ಇನ್ನಿತರ ಖಾಸಗಿ ಕಂಪನಿಗಳ ದೂರವಾಣಿ ಚಾಲ್ತಿಗೆ ಬಂದಿರುವುದರಿಂದ ಹಳೆ ಮಾದರಿಯ ಲ್ಯಾಂಡ್ ಫೋನ್ ಅಗತ್ಯವಿಲ್ಲದೆ ಅದರ ಬಳಕೆ ಇಲ್ಲವಾಗಿದೆ.
ಇದರ ಬಗ್ಗೆ ಮಾಹಿತಿಯಿದ್ದ ಬಿಎಸ್ಸೆನ್ನೆಲ್ ಸಂಸ್ಥೆಯ ಟೆಕ್ನೀಶಿಯನ್ ಕೆಕೆ ಚಾಮಿ ಮತ್ತು ಕಚೇರಿ ಅಧೀಕ್ಷಕ ತನ್ವೀರ್ ಪಾಷಾ, ಮಂಜುನಾಥ್ ಜೊತೆಗೂಡಿ ಹಳೆ ಕಾಲದ ತಾಮ್ರದ ಕೇಬಲನ್ನು ತೆಗೆದು ಮಾರಾಟ ಮಾಡುತ್ತಿದ್ದರು. ನೆಹರು ಮೈದಾನ ಆಸುಪಾಸಿನಲ್ಲಿ ಸೇರಿದಂತೆ ಹಲವೆಡೆ ಹಾಕಿದ್ದ ಕೇಬಲನ್ನು ಒಂದೂವರೆ ವರ್ಷಗಳಿಂದ ತೆಗೆದು ಮಾರಾಟ ಮಾಡಿದ್ದು, ಇದರ ಈಗಿನ ಮಾರುಕಟ್ಟೆ ಮೌಲ್ಯ 70 ಲಕ್ಷ ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಪಾಂಡೇಶ್ವರ ಬಿಎಸ್ಸೆನ್ನೆಲ್ ಕಚೇರಿಯ ಜೂನಿಯರ್ ಟೆಲಿಕಾಂ ಆಫೀಸರ್ ವಿನೋದ್ ಶೇಖರ್ ನಾಯ್ಕ್ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಅವರ ಬಳಿಯಿದ್ದ 45 ಕೇಜಿ ತಾಮ್ರದ ಕೇಬಲ್ ಮತ್ತು ಕೇಬಲ್ ಮಾರಾಟ ಮಾಡಿ ಬಂದಿದ್ದ 10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm