ಬ್ರೇಕಿಂಗ್ ನ್ಯೂಸ್
20-02-26 02:31 pm Mangalore Correspondent ಕ್ರೈಂ
ಮಂಗಳೂರು, ಫೆ.20: ಬಿಎಸ್ಸೆನ್ನೆಲ್ ಸಂಸ್ಥೆಯ ವತಿಯಿಂದ ಸುಮಾರು 30-40 ವರ್ಷಗಳ ಹಿಂದೆ ಹಾಕಲಾಗಿದ್ದ ತಾಮ್ರದ ವೈರ್ ಗಳನ್ನು ಹೊಂದಿರುವ ಕೇಬಲನ್ನು ಮಣ್ಣಿನಡಿಯಿಂದ ತೆಗೆದು ಅಕ್ರಮವಾಗಿ ಮಾರಾಟ ಮಾಡಿದ ಕೃತ್ಯ ಬೆಳಕಿಗೆ ಬಂದಿದ್ದು, ಬಿಎಸ್ಸೆನ್ನೆಲ್ ಸಂಸ್ಥೆಗೆ ಸೇರಿದ ಮೂವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಪಾಂಡೇಶ್ವರ ಬಿಎಸ್ಸೆನ್ನೆಲ್ ಕಂಪನಿಯ ಕಚೇರಿಯಲ್ಲಿ ಟೆಲಿಕಾಂ ಟೆಕ್ನೀಶಿಯನ್ ಆಗಿರುವ ಕೆಕೆ ಚಾಮಿ(55), ಕಚೇರಿಯಲ್ಲಿ ಸಹಾಯಕ ಅಧೀಕ್ಷಕ ಹುದ್ದೆಯಲ್ಲಿದ್ದ ತನ್ವೀರ್ ಪಾಷಾ)48) ಮತ್ತು ಕೇಬಲ್ ಆಪರೇಟರ್ ಗುತ್ತಿಗೆ ನೌಕರನಾಗಿರುವ ಮಂಜುನಾಥ್ (35) ಎಂಬವರನ್ನು ಬಂಧಿಸಲಾಗಿದೆ. ಮಂಜುನಾಥ್ ಬಿಎಸ್ಸೆನ್ನೆಲ್ ಕಂಪನಿಯಲ್ಲಿ ಗುತ್ತಿಗೆ ನೌಕರನಾಗಿದ್ದು, ಎಲ್ ಅಂಡ್ ಟಿ ಕಂಪನಿಯಲ್ಲು ಕೇಬಲ್ ಜಾಯಿಂಟರ್ ಆಗಿ ಕೆಲಸ ಮಾಡುತ್ತಿದ್ದ.
ಹಿಂದೆ ಬಿಎಸ್ಸೆನ್ನೆಲ್ ಲ್ಯಾಂಡ್ ಫೋನ್ ಬಳಕೆಯಲ್ಲಿದ್ದಾಗ ಕೇಬಲನ್ನು ಭೂಗತವಾಗಿ ಹಾಕಲಾಗಿತ್ತು. ಪ್ರತಿ ಬಳಕೆದಾರನಿಗೂ ಪ್ರತ್ಯೇಕ ತಾಮ್ರದ ಕೇಬಲ್ ವೈರನ್ನು ಒಂದೇ ಪೈಪ್ ಒಳಗಡೆ ಹಾಕಿ ಸಂಪರ್ಕ ನೀಡಲಾಗುತ್ತಿತ್ತು. ಆದರೆ ಈಗ ಮೊಬೈಲ್ ಇನ್ನಿತರ ಖಾಸಗಿ ಕಂಪನಿಗಳ ದೂರವಾಣಿ ಚಾಲ್ತಿಗೆ ಬಂದಿರುವುದರಿಂದ ಹಳೆ ಮಾದರಿಯ ಲ್ಯಾಂಡ್ ಫೋನ್ ಅಗತ್ಯವಿಲ್ಲದೆ ಅದರ ಬಳಕೆ ಇಲ್ಲವಾಗಿದೆ.
ಇದರ ಬಗ್ಗೆ ಮಾಹಿತಿಯಿದ್ದ ಬಿಎಸ್ಸೆನ್ನೆಲ್ ಸಂಸ್ಥೆಯ ಟೆಕ್ನೀಶಿಯನ್ ಕೆಕೆ ಚಾಮಿ ಮತ್ತು ಕಚೇರಿ ಅಧೀಕ್ಷಕ ತನ್ವೀರ್ ಪಾಷಾ, ಮಂಜುನಾಥ್ ಜೊತೆಗೂಡಿ ಹಳೆ ಕಾಲದ ತಾಮ್ರದ ಕೇಬಲನ್ನು ತೆಗೆದು ಮಾರಾಟ ಮಾಡುತ್ತಿದ್ದರು. ನೆಹರು ಮೈದಾನ ಆಸುಪಾಸಿನಲ್ಲಿ ಸೇರಿದಂತೆ ಹಲವೆಡೆ ಹಾಕಿದ್ದ ಕೇಬಲನ್ನು ಒಂದೂವರೆ ವರ್ಷಗಳಿಂದ ತೆಗೆದು ಮಾರಾಟ ಮಾಡಿದ್ದು, ಇದರ ಈಗಿನ ಮಾರುಕಟ್ಟೆ ಮೌಲ್ಯ 70 ಲಕ್ಷ ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಪಾಂಡೇಶ್ವರ ಬಿಎಸ್ಸೆನ್ನೆಲ್ ಕಚೇರಿಯ ಜೂನಿಯರ್ ಟೆಲಿಕಾಂ ಆಫೀಸರ್ ವಿನೋದ್ ಶೇಖರ್ ನಾಯ್ಕ್ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಅವರ ಬಳಿಯಿದ್ದ 45 ಕೇಜಿ ತಾಮ್ರದ ಕೇಬಲ್ ಮತ್ತು ಕೇಬಲ್ ಮಾರಾಟ ಮಾಡಿ ಬಂದಿದ್ದ 10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am