ಬ್ರೇಕಿಂಗ್ ನ್ಯೂಸ್
20-02-26 08:54 pm mangalore ಕ್ರೈಂ
ಶಿವಮೊಗ್ಗ, ಫೆ.20 ಗಂಡ ಸತ್ತ ಒಂದೇ ವಾರಕ್ಕೆ ಆತನ ಪತ್ನಿಯ ಹಿಂದೆ ಬಿದ್ದ ಕಾನ್ಸ್ ಟೇಬಲ್ ಒಬ್ಬಾತ ಮೆಸೇಜ್ ಮಾಡಿ ಪೀಡಿಸಿದ್ದಾನೆ. ಪೊಲೀಸ್ ಪೇದೆಯ ಕಿರುಕುಳ ತಾಳಲಾರದೇ ಮಹಿಳೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಸಿದ್ದಾಪುರದಲ್ಲಿ ನಡೆದಿದೆ.
ಫೆಬ್ರವರಿ 14ರಂದು ಕೆಎಸ್ ಐ ಎಸ್ ಎಫ್ ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಗದೀಶ್ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದರು. ಇದೇ ವೇಳೆ, ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ತೀರ್ಥಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮೋಹನ್, ಜಗದೀಶ್ ಅವರ ಪತ್ನಿ ಸ್ವಾತಿಗೆ ಮೆಸೇಜ್ ಮಾಡುತ್ತಿದ್ದರು. ಇದರಿಂದ ಕಿರಿಕಿರಿಗೊಂಡ ಸ್ವಾತಿ, ಪೊಲೀಸ್ ಪೇದೆಯ ಫೇಸ್ಬುಕ್ ಖಾತೆಯನ್ನು ಬ್ಲಾಕ್ ಮಾಡಿದ್ದರು.
ಇದರ ಬಳಿಕ ಸ್ವಾತಿಗೆ ಮತ್ತೊಂದು ಖಾತೆಯಿಂದ ಪೇದೆ ಮೋಹನ್ ಮೆಸೇಜ್ ಮಾಡತೊಡಗಿದ್ದರು. ಇದರಿಂದ ಬೇಸತ್ತ ಸ್ವಾತಿ, ಭದ್ರಾವತಿಯ ಹೊಸ ಸಿದ್ದಾಪುರದ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕು ಮುನ್ನ ಸ್ವಾತಿ ತನ್ನ ತಾಯಿಗೆ ವಾಟ್ಸ್ ಆಪ್ ಮೂಲಕ ಮೆಸೇಜ್ ಮಾಡಿದ್ದು, ತೀರ್ಥಹಳ್ಳಿಯ ಪೊಲೀಸ್ ಪೇದೆ ಮೋಹನ್ ಹೆಸರು ಉಲ್ಲೇಖಿಸಿದ್ದಾರೆ. ಫೇಸ್ ಬುಕ್ ನಲ್ಲಿ ಮೋಹನ್ ಎಂಬ ಪೊಲೀಸ್ ನನಗೆ ಮೆಸೇಜ್ ಮಾಡಿದ್ದರು. ಅದಕ್ಕೆ ನಾನು ಅವರನ್ನು ಬ್ಲಾಕ್ ಮಾಡಿದ್ದೆ. ಆತ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಸುಮ್ಮನೆ ಬಿಡಬೇಡಿ ಎಂಬುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.
ಮೃತ ಜಗದೀಶ್ ಹಾಗೂ ಸ್ವಾತಿ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇದೀಗ ತಂದೆ- ತಾಯಿ ಇಬ್ಬರನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಮೃತ ಸ್ವಾತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಭದ್ರಾವತಿ ತಾಲ್ಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident reported from Siddapur in Bhadravati town of Shivamogga district, a woman allegedly died by suicide following harassment by a police constable, just a week after her husband’s death.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am