ಬ್ರೇಕಿಂಗ್ ನ್ಯೂಸ್
22-02-26 09:32 pm HK News Desk ಕ್ರೈಂ
ನವದೆಹಲಿ, ಫೆ.22: ರಾಜಸ್ಥಾನದ ಜೋಧಪುರ ಜಿಲ್ಲೆಯ ಮನಾಯಿ ಗ್ರಾಮದಲ್ಲಿ ಮದುವೆ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ವಧುಗಳಿಬ್ಬರು ವಿಷ ಸೇವನೆಗೊಳಗಾಗಿ ನಿಗೂಢ ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ಶನಿವಾರ ವಿವಾಹವಾಗಬೇಕಿದ್ದ ಸೋದರಿಯರಾದ ಶೋಭಾ (25) ಮತ್ತು ವಿಮ್ಲಾ (23) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಸಂಭ್ರಮದ ಮನೆಯಲ್ಲಿ ಸೂತಕ ಆವರಿಸಿದೆ.
ಫೆಬ್ರವರಿ 21ರಂದು ಇಬ್ಬರು ಸಹೋದರಿಯರ ಮದುವೆ ಒಂದೇ ದಿನ ನಿಗದಿಯಾಗಿತ್ತು. ಫೆಬ್ರವರಿ 20ರ ರಾತ್ರಿ ವಿವಾಹ ಪೂರ್ವ ಕಾರ್ಯಕ್ರಮಗಳು ಸಂಭ್ರಮದಿಂದ ನಡೆದಿದ್ದವು. ಕುಟುಂಬಸ್ಥರು, ಬಂಧು ಬಳಗದವರ ಸಮ್ಮುಖದಲ್ಲಿ ಮನೆ ಸಂಭ್ರಮದ ವಾತಾವರಣದಲ್ಲಿತ್ತು. ಸಂಭ್ರಮ ಮುಗಿಸಿದ ಸಹೋದರಿಯರು ಮಧ್ಯರಾತ್ರಿ ಸುಮಾರಿಗೆ ತಮ್ಮ ಕೊಠಡಿಗೆ ವಿಶ್ರಾಂತಿಗೆ ತೆರಳಿದ್ದಾರೆ.
ಆದರೆ ಬೆಳಗಿನ ಜಾವ 4 ಗಂಟೆ ವೇಳೆಗೆ ಸಹೋದರಿಯರ ಆರೋಗ್ಯದಲ್ಲಿ ಆಕಸ್ಮಿಕವಾಗಿ ವೈಪರೀತ್ಯದ ಲಕ್ಷಣಗಳು ಗೋಚರಿಸಿವೆ. ತಕ್ಷಣವೇ ಕುಟುಂಬದವರು ಅವರನ್ನು ಜೋಧಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಇಬ್ಬರು ಸಹೋದರಿಯರು ವಿಷ ಪದಾರ್ಥ ಸೇವಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಆದರೆ ನಿಖರವಾದ ಸಾವಿನ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ದೃಢಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮೊದಲಿಗೆ ಪೊಲೀಸರಿಗೆ ತಿಳಿಸಿರಲಿಲ್ಲ. ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದ್ದ ವೇಳೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಂತ್ಯಕ್ರಿಯೆ ನಿಲ್ಲಿಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ನಂತರ ಕುಟುಂಬಕ್ಕೆ ಹಸ್ತಾಂತರಿಸಿದರು. ಘಟನೆಗೆ ಸಂಬಂಧಿಸಿದಂತೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ಕಾರಣವಾದ ಅಂಶಗಳ ಕುರಿತು ಕುಟುಂಬ ಸದಸ್ಯರು ಹಾಗೂ ಸ್ಥಳೀಯರನ್ನು ವಿಚಾರಣೆ ನಡೆಸಲಾಗುತ್ತಿದೆ. ಮದುವೆ ಸಂಭ್ರಮಕ್ಕೆ ಸಜ್ಜಾಗಿದ್ದ ಮನೆ ಒಂದೇ ಕ್ಷಣದಲ್ಲಿ ಶೋಕದಲ್ಲಿ ಮುಳುಗಿರುವ ಘಟನೆ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm