ಬ್ರೇಕಿಂಗ್ ನ್ಯೂಸ್
22-02-26 09:32 pm HK News Desk ಕ್ರೈಂ
ನವದೆಹಲಿ, ಫೆ.22: ರಾಜಸ್ಥಾನದ ಜೋಧಪುರ ಜಿಲ್ಲೆಯ ಮನಾಯಿ ಗ್ರಾಮದಲ್ಲಿ ಮದುವೆ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ವಧುಗಳಿಬ್ಬರು ವಿಷ ಸೇವನೆಗೊಳಗಾಗಿ ನಿಗೂಢ ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ಶನಿವಾರ ವಿವಾಹವಾಗಬೇಕಿದ್ದ ಸೋದರಿಯರಾದ ಶೋಭಾ (25) ಮತ್ತು ವಿಮ್ಲಾ (23) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಸಂಭ್ರಮದ ಮನೆಯಲ್ಲಿ ಸೂತಕ ಆವರಿಸಿದೆ.
ಫೆಬ್ರವರಿ 21ರಂದು ಇಬ್ಬರು ಸಹೋದರಿಯರ ಮದುವೆ ಒಂದೇ ದಿನ ನಿಗದಿಯಾಗಿತ್ತು. ಫೆಬ್ರವರಿ 20ರ ರಾತ್ರಿ ವಿವಾಹ ಪೂರ್ವ ಕಾರ್ಯಕ್ರಮಗಳು ಸಂಭ್ರಮದಿಂದ ನಡೆದಿದ್ದವು. ಕುಟುಂಬಸ್ಥರು, ಬಂಧು ಬಳಗದವರ ಸಮ್ಮುಖದಲ್ಲಿ ಮನೆ ಸಂಭ್ರಮದ ವಾತಾವರಣದಲ್ಲಿತ್ತು. ಸಂಭ್ರಮ ಮುಗಿಸಿದ ಸಹೋದರಿಯರು ಮಧ್ಯರಾತ್ರಿ ಸುಮಾರಿಗೆ ತಮ್ಮ ಕೊಠಡಿಗೆ ವಿಶ್ರಾಂತಿಗೆ ತೆರಳಿದ್ದಾರೆ.
ಆದರೆ ಬೆಳಗಿನ ಜಾವ 4 ಗಂಟೆ ವೇಳೆಗೆ ಸಹೋದರಿಯರ ಆರೋಗ್ಯದಲ್ಲಿ ಆಕಸ್ಮಿಕವಾಗಿ ವೈಪರೀತ್ಯದ ಲಕ್ಷಣಗಳು ಗೋಚರಿಸಿವೆ. ತಕ್ಷಣವೇ ಕುಟುಂಬದವರು ಅವರನ್ನು ಜೋಧಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಇಬ್ಬರು ಸಹೋದರಿಯರು ವಿಷ ಪದಾರ್ಥ ಸೇವಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಆದರೆ ನಿಖರವಾದ ಸಾವಿನ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ದೃಢಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮೊದಲಿಗೆ ಪೊಲೀಸರಿಗೆ ತಿಳಿಸಿರಲಿಲ್ಲ. ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದ್ದ ವೇಳೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಂತ್ಯಕ್ರಿಯೆ ನಿಲ್ಲಿಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ನಂತರ ಕುಟುಂಬಕ್ಕೆ ಹಸ್ತಾಂತರಿಸಿದರು. ಘಟನೆಗೆ ಸಂಬಂಧಿಸಿದಂತೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ಕಾರಣವಾದ ಅಂಶಗಳ ಕುರಿತು ಕುಟುಂಬ ಸದಸ್ಯರು ಹಾಗೂ ಸ್ಥಳೀಯರನ್ನು ವಿಚಾರಣೆ ನಡೆಸಲಾಗುತ್ತಿದೆ. ಮದುವೆ ಸಂಭ್ರಮಕ್ಕೆ ಸಜ್ಜಾಗಿದ್ದ ಮನೆ ಒಂದೇ ಕ್ಷಣದಲ್ಲಿ ಶೋಕದಲ್ಲಿ ಮುಳುಗಿರುವ ಘಟನೆ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm