ಬ್ರೇಕಿಂಗ್ ನ್ಯೂಸ್
23-02-26 07:35 pm HK News Desk ಕ್ರೈಂ
ತುಮಕೂರು, ಫೆ.23 : ಗೃಹ ಸಚಿವರ ತವರು ಜಿಲ್ಲೆಯಾದ ತುಮಕೂರಿನಲ್ಲಿ ದರೋಡೆಕೋರರನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಘಟನೆ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಬೆಂಚ್ ಗೇಟ್ ಬಳಿ ಇರುವ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಖತರ್ನಾಕ್ ಗ್ಯಾಂಗ್ ಖಾರದ ಪುಡಿ ಎರಚಿ ಬರೋಬ್ಬರಿ 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿತ್ತು. ಆದರೆ ದರೋಡೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಸ್ಥಾನ ಮೂಲದ ಅರವಿಂದ್, ದುಂಗರ್ ಸಿಂಗ್, ಮಹೇಂದ್ರ ಸಿಂಗ್ ಮತ್ತು ಮಧು ಸಿಂಗ್ ಬಂಧಿತ ಆರೋಪಿಗಳು. ಕಳೆದ 3 ರಿಂದ 4 ದಿನಗಳಿಂದ ತುಮಕೂರಿನಲ್ಲಿ ವಾಸ್ತವ್ಯ ಹೂಡಿದ್ದ ಈ ಗ್ಯಾಂಗ್, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜ್ಯುವೆಲರಿ ಅಂಗಡಿಗಳನ್ನು ಟಾರ್ಗೆಟ್ ಮಾಡಿಕೊಂಡಿತ್ತು. ಮೊದಲೇ ಯೋಜನೆಯಂತೆ ಬೊಲೆರೋ ಕಾರಿನಲ್ಲಿ ಬಂದ ಆರೋಪಿಗಳು ಹಾಡಹಗಲೇ ಅಂಗಡಿಗೆ ನುಗ್ಗಿ ಖಾರದ ಪುಡಿ ಎರಚಿ, ಬಳಿಕ ಶಟರ್ ಮುಚ್ಚಿ ದರೋಡೆ ನಡೆಸಿದ್ದಾರೆ. ಅಂಗಡಿಯಲ್ಲಿ ಇದ್ದ 100 ಗ್ರಾಂ ಚಿನ್ನ ಹಾಗೂ ಸುಮಾರು 1.5 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 26 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಕದ್ದೊಯ್ದಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ದಿನೇಶ್ ಮತ್ತು ಅವರ ಅಜ್ಜಿ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.


ಘಟನೆ ಕುರಿತು ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ಅಲರ್ಟ್ ಆಗಿದ್ದಾರೆ. ಬೊಲೆರೋ ವಾಹನದ ಮಾಹಿತಿ ಆಧರಿಸಿ ಶಿರಾ ಡಿವೈಎಸ್ಪಿ ಶೇಖರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮೊದಲಿಗೆ ಟೋಲ್ ಗೇಟ್ ಬಳಿ ಕಾರು ಪತ್ತೆಯಾದ ಬಳಿಕ ಆರೋಪಿಗಳ ವಾಹನವನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಅಂತಿಮವಾಗಿ ಹುಯಿಲು ದೊರೆ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಕದ್ದೊಯ್ದಿದ್ದ ಸಂಪೂರ್ಣ ಚಿನ್ನಾಭರಣವನ್ನು ವಶಪಡಿಸಲಾಗಿದೆ. ಪ್ರಕರಣವನ್ನು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm