ಬ್ರೇಕಿಂಗ್ ನ್ಯೂಸ್
23-02-26 07:35 pm HK News Desk ಕ್ರೈಂ
ತುಮಕೂರು, ಫೆ.23 : ಗೃಹ ಸಚಿವರ ತವರು ಜಿಲ್ಲೆಯಾದ ತುಮಕೂರಿನಲ್ಲಿ ದರೋಡೆಕೋರರನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಘಟನೆ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಬೆಂಚ್ ಗೇಟ್ ಬಳಿ ಇರುವ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಖತರ್ನಾಕ್ ಗ್ಯಾಂಗ್ ಖಾರದ ಪುಡಿ ಎರಚಿ ಬರೋಬ್ಬರಿ 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿತ್ತು. ಆದರೆ ದರೋಡೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಸ್ಥಾನ ಮೂಲದ ಅರವಿಂದ್, ದುಂಗರ್ ಸಿಂಗ್, ಮಹೇಂದ್ರ ಸಿಂಗ್ ಮತ್ತು ಮಧು ಸಿಂಗ್ ಬಂಧಿತ ಆರೋಪಿಗಳು. ಕಳೆದ 3 ರಿಂದ 4 ದಿನಗಳಿಂದ ತುಮಕೂರಿನಲ್ಲಿ ವಾಸ್ತವ್ಯ ಹೂಡಿದ್ದ ಈ ಗ್ಯಾಂಗ್, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜ್ಯುವೆಲರಿ ಅಂಗಡಿಗಳನ್ನು ಟಾರ್ಗೆಟ್ ಮಾಡಿಕೊಂಡಿತ್ತು. ಮೊದಲೇ ಯೋಜನೆಯಂತೆ ಬೊಲೆರೋ ಕಾರಿನಲ್ಲಿ ಬಂದ ಆರೋಪಿಗಳು ಹಾಡಹಗಲೇ ಅಂಗಡಿಗೆ ನುಗ್ಗಿ ಖಾರದ ಪುಡಿ ಎರಚಿ, ಬಳಿಕ ಶಟರ್ ಮುಚ್ಚಿ ದರೋಡೆ ನಡೆಸಿದ್ದಾರೆ. ಅಂಗಡಿಯಲ್ಲಿ ಇದ್ದ 100 ಗ್ರಾಂ ಚಿನ್ನ ಹಾಗೂ ಸುಮಾರು 1.5 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 26 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಕದ್ದೊಯ್ದಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ದಿನೇಶ್ ಮತ್ತು ಅವರ ಅಜ್ಜಿ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.


ಘಟನೆ ಕುರಿತು ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ಅಲರ್ಟ್ ಆಗಿದ್ದಾರೆ. ಬೊಲೆರೋ ವಾಹನದ ಮಾಹಿತಿ ಆಧರಿಸಿ ಶಿರಾ ಡಿವೈಎಸ್ಪಿ ಶೇಖರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮೊದಲಿಗೆ ಟೋಲ್ ಗೇಟ್ ಬಳಿ ಕಾರು ಪತ್ತೆಯಾದ ಬಳಿಕ ಆರೋಪಿಗಳ ವಾಹನವನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಅಂತಿಮವಾಗಿ ಹುಯಿಲು ದೊರೆ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಕದ್ದೊಯ್ದಿದ್ದ ಸಂಪೂರ್ಣ ಚಿನ್ನಾಭರಣವನ್ನು ವಶಪಡಿಸಲಾಗಿದೆ. ಪ್ರಕರಣವನ್ನು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am