ಬ್ರೇಕಿಂಗ್ ನ್ಯೂಸ್
23-02-26 09:15 pm HK News Desk ಕ್ರೈಂ
ನವದೆಹಲಿ, ಫೆ.23: ಹರಿಯಾಣದ ಗುರುಗ್ರಾಮ್ ನಗರದಲ್ಲಿ ಲಿವ್ ಇನ್ ಸಂಬಂಧದ ಹೆಸರಿನಲ್ಲಿ ಯುವತಿಯ ಮೇಲೆ ಪ್ರಿಯಕರನಿಂದಲೇ ಅಮಾನುಷ ಹಲ್ಲೆ ಕೃತ್ಯ ನಡೆದಿದ್ದು ಆಘಾತ ಮೂಡಿಸಿದೆ. ತ್ರಿಪುರಾ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ತನ್ನ ಸಂಗಾತಿಯಿಂದಲೇ ಗಂಭೀರ ಹಲ್ಲೆಗೀಡಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಸೆಕ್ಟರ್ 69 ರ ಪಿಜಿಯಲ್ಲಿ ವಾಸವಾಗಿದ್ದ ಸಂತ್ರಸ್ತೆ ಬಯೋಟೆಕ್ನಾಲಜಿ ಅಧ್ಯಯನ ಮಾಡುತ್ತಿದ್ದಳು. ಕಳೆದ ಸೆಪ್ಟೆಂಬರ್ನಲ್ಲಿ ಮೊಬೈಲ್ ಆ್ಯಪ್ ಮೂಲಕ ದೆಹಲಿಯ ನರೇಲಾ ಮೂಲದ ಶಿವಂ ಎಂಬಾತನ ಪರಿಚಯವಾಗಿತ್ತು. ಮದುವೆಯ ಭರವಸೆ ನೀಡಿದ ಶಿವಂ, ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಬಳಿಕ ಗುರುಗ್ರಾಮದ ಫ್ಲಾಟ್ನಲ್ಲಿ ಲಿವ್ ಇನ್ ಸಂಬಂಧ ಆರಂಭಿಸಿದ್ದ.
ಇತ್ತೀಚೆಗೆ ಇಬ್ಬರ ನಡುವೆ ಉಂಟಾದ ವೈಯಕ್ತಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆ, ಶಿವಂ ಯುವತಿಯ ಮೇಲೆ ಸತತ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದನೆಂಬ ಆರೋಪ ಕೇಳಿಬಂದಿದೆ. ಫೆಬ್ರವರಿ 16 ರಂದು ಹಿಂಸೆ ಮಿತಿಮೀರಿದ್ದು, ಯುವತಿಯ ತಲೆಯನ್ನು ಗೋಡೆಗೆ ಹೊಡೆದು, ಸ್ಟೀಲ್ ಬಾಟಲಿ ಹಾಗೂ ಮಣ್ಣಿನ ಮಡಕೆಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಯುವತಿಯ ಖಾಸಗಿ ಅಂಗಗಳಿಗೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಯುವತಿಯ ಕಾಲುಗಳಿಗೆ ಚಾಕುವಿನಿಂದ ಇರಿದು, ಮುಂದೆ ನಡೆಯಲು ಅಥವಾ ತಾಯಿಯಾಗಲು ಸಾಧ್ಯವಾಗದಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ತನ್ನ ಅಮಾನುಷ ಕೃತ್ಯದ ದೃಶ್ಯಗಳನ್ನು ಆರೋಪಿ ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿ ಯುವತಿಗೆ ಹಿಂಸೆ ನೀಡುತ್ತಿದ್ದ.
ಆತನ ಕಾಟ ತಾಳಲಾರದೆ ಯುವತಿ ಫೆಬ್ರವರಿ 18 ರಂದು ಆರೋಪಿಯ ಫೋನ್ ಬಳಸಿ ತಾಯಿಗೆ ಸ್ಥಳೀಯ ಭಾಷೆಯಲ್ಲಿ ಮಾಹಿತಿ ನೀಡಿದ್ದಾಳೆ. ವಿಷಯದ ಗಂಭೀರತೆ ಅರಿತ ತಾಯಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿರುವ ಗುರುಗ್ರಾಮ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಘಟನೆ ಮಹಿಳೆಯರ ಭದ್ರತೆ ಹಾಗೂ ಲಿವ್ ಇನ್ ಸಂಬಂಧಗಳ ಕುರಿತು ಕಳವಳ ಹುಟ್ಟುಹಾಕಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm