ಬ್ರೇಕಿಂಗ್ ನ್ಯೂಸ್
23-02-26 09:15 pm HK News Desk ಕ್ರೈಂ
ನವದೆಹಲಿ, ಫೆ.23: ಹರಿಯಾಣದ ಗುರುಗ್ರಾಮ್ ನಗರದಲ್ಲಿ ಲಿವ್ ಇನ್ ಸಂಬಂಧದ ಹೆಸರಿನಲ್ಲಿ ಯುವತಿಯ ಮೇಲೆ ಪ್ರಿಯಕರನಿಂದಲೇ ಅಮಾನುಷ ಹಲ್ಲೆ ಕೃತ್ಯ ನಡೆದಿದ್ದು ಆಘಾತ ಮೂಡಿಸಿದೆ. ತ್ರಿಪುರಾ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ತನ್ನ ಸಂಗಾತಿಯಿಂದಲೇ ಗಂಭೀರ ಹಲ್ಲೆಗೀಡಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಸೆಕ್ಟರ್ 69 ರ ಪಿಜಿಯಲ್ಲಿ ವಾಸವಾಗಿದ್ದ ಸಂತ್ರಸ್ತೆ ಬಯೋಟೆಕ್ನಾಲಜಿ ಅಧ್ಯಯನ ಮಾಡುತ್ತಿದ್ದಳು. ಕಳೆದ ಸೆಪ್ಟೆಂಬರ್ನಲ್ಲಿ ಮೊಬೈಲ್ ಆ್ಯಪ್ ಮೂಲಕ ದೆಹಲಿಯ ನರೇಲಾ ಮೂಲದ ಶಿವಂ ಎಂಬಾತನ ಪರಿಚಯವಾಗಿತ್ತು. ಮದುವೆಯ ಭರವಸೆ ನೀಡಿದ ಶಿವಂ, ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಬಳಿಕ ಗುರುಗ್ರಾಮದ ಫ್ಲಾಟ್ನಲ್ಲಿ ಲಿವ್ ಇನ್ ಸಂಬಂಧ ಆರಂಭಿಸಿದ್ದ.
ಇತ್ತೀಚೆಗೆ ಇಬ್ಬರ ನಡುವೆ ಉಂಟಾದ ವೈಯಕ್ತಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆ, ಶಿವಂ ಯುವತಿಯ ಮೇಲೆ ಸತತ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದನೆಂಬ ಆರೋಪ ಕೇಳಿಬಂದಿದೆ. ಫೆಬ್ರವರಿ 16 ರಂದು ಹಿಂಸೆ ಮಿತಿಮೀರಿದ್ದು, ಯುವತಿಯ ತಲೆಯನ್ನು ಗೋಡೆಗೆ ಹೊಡೆದು, ಸ್ಟೀಲ್ ಬಾಟಲಿ ಹಾಗೂ ಮಣ್ಣಿನ ಮಡಕೆಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಯುವತಿಯ ಖಾಸಗಿ ಅಂಗಗಳಿಗೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಯುವತಿಯ ಕಾಲುಗಳಿಗೆ ಚಾಕುವಿನಿಂದ ಇರಿದು, ಮುಂದೆ ನಡೆಯಲು ಅಥವಾ ತಾಯಿಯಾಗಲು ಸಾಧ್ಯವಾಗದಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ತನ್ನ ಅಮಾನುಷ ಕೃತ್ಯದ ದೃಶ್ಯಗಳನ್ನು ಆರೋಪಿ ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿ ಯುವತಿಗೆ ಹಿಂಸೆ ನೀಡುತ್ತಿದ್ದ.
ಆತನ ಕಾಟ ತಾಳಲಾರದೆ ಯುವತಿ ಫೆಬ್ರವರಿ 18 ರಂದು ಆರೋಪಿಯ ಫೋನ್ ಬಳಸಿ ತಾಯಿಗೆ ಸ್ಥಳೀಯ ಭಾಷೆಯಲ್ಲಿ ಮಾಹಿತಿ ನೀಡಿದ್ದಾಳೆ. ವಿಷಯದ ಗಂಭೀರತೆ ಅರಿತ ತಾಯಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿರುವ ಗುರುಗ್ರಾಮ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಘಟನೆ ಮಹಿಳೆಯರ ಭದ್ರತೆ ಹಾಗೂ ಲಿವ್ ಇನ್ ಸಂಬಂಧಗಳ ಕುರಿತು ಕಳವಳ ಹುಟ್ಟುಹಾಕಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am