ಬ್ರೇಕಿಂಗ್ ನ್ಯೂಸ್
23-02-26 10:44 pm HK News Desk ಕ್ರೈಂ
ನವದೆಹಲಿ, ಫೆ.23: ಐಡಿಎಫ್ಸಿ ಫಸ್ಟ್ ಬ್ಯಾಂಕಿನ ಚಂಡೀಗಡ ಶಾಖೆಯಲ್ಲಿ 590 ಕೋಟಿ ರೂ. ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು ಇದರ ಬೆನ್ನಲ್ಲೇ ಬ್ಯಾಂಕಿನ ಷೇರು ಪಾತಾಳಕ್ಕೆ ಕುಸಿಯತೊಡಗಿದೆ. ಸೋಮವಾರ ಒಂದೇ ದಿನ ಷೇರುಬೆಲೆ ಶೇ. 20ರಷ್ಟು ಕುಸಿದಿದ್ದು ಹೂಡಿಕೆದಾರರಿಗೆ 14,000 ಕೋಟಿ ರೂ. ಅಧಿಕ ನಷ್ಟ ಉಂಟಾಗಿದೆ.
ಐಡಿಎಫ್ಸಿ ಫಸ್ಟ್ ಬ್ಯಾಂಕ್ನ ಚಂಡೀಗಡ ಶಾಖೆಯಲ್ಲಿ ಠೇವಣಿ ಹಣ ವಂಚನೆಯಾಗಿರುವ ಆರೋಪ ಭಾನುವಾರ ಬೆಳಕಿಗೆ ಬಂದಿತ್ತು. ಹರ್ಯಾಣ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಸಂಸ್ಥೆಗಳ ಠೇವಣಿ ಖಾತೆಗಳಲ್ಲಿ ಅನಧಿಕೃತ ವಹಿವಾಟುಗಳು ನಡೆದಿರುವುದು ಬೆಳಕಿಗೆ ಬಂದಿದೆ. ಸರ್ಕಾರವು ಈ ಅಕೌಂಟ್ಗಳನ್ನು ಮುಚ್ಚಲು ಹೋದಾಗ ಅಕೌಂಟ್ ಬ್ಯಾಲೆನ್ಸ್ನಲ್ಲಿ ಭಾರೀ ವ್ಯತ್ಯಾಸ ಪತ್ತೆಯಾಗಿತ್ತು. ಒಟ್ಟು 590 ಕೋಟಿಯಷ್ಟು ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಇಡೀ ಬ್ಯಾಂಕಿನ ಈ ಸಲದ ತ್ರೈಮಾಸಿಕ ಅವಧಿಯ ನಿವ್ವಳ ಲಾಭವೇ 503 ಕೋಟಿಯಾಗಿದ್ದರೆ, ಅದಕ್ಕಿಂತಲೂ ಹೆಚ್ಚಿನ ಮೊತ್ತದ ಅಕ್ರಮ ಆಗಿದೆಯೆಂಬ ಮಾಹಿತಿ ಬ್ಯಾಂಕಿನ ಷೇರು ದಿಢೀರ್ ಕುಸಿಯಲು ಕಾರಣವಾಗಿದೆ.
ಸಿಬಂದಿಯೇ ವಂಚಿಸಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಐವರನ್ನು ಸದ್ಯಕ್ಕೆ ಸಮಾನತು ಮಾಡಲಾಗಿದೆ. ಅಲ್ಲದೆ, ಹರ್ಯಾಣ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪ ಆಗಿದ್ದರಿಂದ ಸಮಗ್ರ ತನಿಖೆಗೆ ರಾಜ್ಯ ಸರ್ಕಾರ ಆದೇಶ ಮಾಡಿದೆ. ಅಕ್ರಮವಾಗಿ ನಡೆದಿರುವ ವಹಿವಾಟುಗಳನ್ನು ಟ್ರ್ಯಾಕ್ ಮಾಡಲಾಗುತ್ತಿದ್ದು ಶಾಖೆಯಿಂದ ವರ್ಗಾವಣೆ ಆಗಿರುವ ಹಣವನ್ನು ಫ್ರೀಜ್ ಮಾಡುವಂತೆ ಸಂಬಂಧಿಸಿದ ಬ್ಯಾಂಕುಗಳಿಗೆ ಮನವಿ ಮಾಡಲಾಗಿದೆ. ಹರ್ಯಾಣ ಸರ್ಕಾರವು ತನ್ನ ಠೇವಣಿ ಡಿಪಾಸಿಟ್ ಪಟ್ಟಿಯಿಂದ ಐಡಿಎಫ್ಸಿ ಫಸ್ಟ್ ಬ್ಯಾಂಕ್ ಅನ್ನು ತೆರವುಗೊಳಿಸಿದೆ. ಸರ್ಕಾರದ ಅಧೀನದ ಇಲಾಖೆಗಳು ಈ ಬ್ಯಾಂಕ್ನಲ್ಲಿ ಹೊಂದಿರುವ ಅಕೌಂಟ್ಗಳನ್ನು ಮುಚ್ಚುವಂತೆಯೂ ಸರ್ಕಾರ ಸೂಚಿಸಿದೆ.
ಅಕ್ರಮದ ಬಗ್ಗೆ ಬ್ಯಾಂಕ್ ಆಂತರಿಕ ತನಿಖೆ ನಡೆಸಿದ್ದು, ಐವರು ಬ್ಯಾಂಕ್ ಅಧಿಕಾರಿಗಳನ್ನು ಅಮಾನತಿನಲ್ಲಿಟ್ಟಿದೆ. ಪೊಲೀಸರಿಗೆ ದೂರು ನೀಡಿದ್ದು ಸರ್ಕಾರಿ ಆಡಿಟಿಂಗ್ಗೆ ಸೂಚಿಸಲಾಗಿದೆ. ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸುವಂತೆ ತಿಳಿಸಲಾಗಿದೆ ಎಂದು ಬ್ಯಾಂಕ್ ಹೇಳಿಕೊಂಡಿದೆ. ಆದರೆ ಷೇರು ಮಾರುಕಟ್ಟೆಯಲ್ಲಿ ಬ್ಯಾಂಕ್ ಭಾರೀ ಕುಸಿತ ದಾಖಲಿಸಿದ್ದು ಹೂಡಿಕೆದಾರರು ಇದರ ಷೇರನ್ನು ಮಾರಲು ತೊಡಗಿದ್ದಾರೆ. ಇದರಿಂದಾಗಿ ಬ್ಯಾಂಕ್ ಪಾಲಿಗೆ ಮತ್ತಷ್ಟು ನಷ್ಟ ಆಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm