ಬ್ರೇಕಿಂಗ್ ನ್ಯೂಸ್
24-02-26 01:50 pm HK News Desk ಕ್ರೈಂ
ಲಕ್ನೋ, ಫೆ 25: ನಗರದ ಆಶಿಯಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕಾಣೆಯಾದರೆಂದು ದೂರು ನೀಡಿದ್ದ ಮಗನೇ ತನ್ನ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂಬ ಸಂಗತಿ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ನೀರು ತುಂಬಿಸುವ ಡ್ರಮ್ ಒಳಗೆ ಪತ್ತೆಯಾದ ಶಿರಚ್ಛೇದಿತ ಅರ್ಧ ದೇಹ ನೋಡಿ ಪೊಲೀಸರೇ ದಿಗ್ಭ್ರಮೆಗೊಂಡಿದ್ದಾರೆ.
ಹತ್ಯೆಗೊಳಗಾದ ವ್ಯಕ್ತಿಯನ್ನು ವರ್ಧಮಾನ ಪ್ಯಾಥಾಲಜಿ ಮಾಲೀಕ ಮನ್ವೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 20ರಿಂದ ಮನ್ವೇಂದ್ರ ಸಿಂಗ್ ಕಾಣೆಯಾಗಿದ್ದಾರೆ ಎಂದು ಪುತ್ರ ಅಕ್ಷತ್ ಪೊಲೀಸರಿಗೆ ದೂರು ನೀಡಿದ್ದ. ಆದರೆ ಘಟನೆ ನಡೆದ ಎರಡೇ ದಿನಗಳಲ್ಲಿ ಪ್ರಕರಣ ತೀವ್ರ ತಿರುವು ಪಡೆದುಕೊಂಡಿತ್ತು.
ಅಕ್ಷತ್ ಮೊದಲಿಗೆ, “ತಂದೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಹೇಳಿ ಬೆಳಿಗ್ಗೆ ಮನೆಯಿಂದ ಹೊರಟಿದ್ದರು. ಮರುದಿನ ವಾಪಸ್ ಬರುತ್ತೇನೆ ಎಂದರೂ ಬಂದಿಲ್ಲ. ಅವರ ಮೂರು ಮೊಬೈಲ್ಗಳು ಸ್ವಿಚ್ ಆಫ್ ಆಗಿವೆ,” ಎಂದು ಹೇಳಿದ್ದ. ಫೋನ್ ಕೊನೆಯ ಲೊಕೇಶನ್ ಕಾಕೋರಿ ಪ್ರದೇಶದಲ್ಲಿ ಪತ್ತೆಯಾದರೂ ಮೊಬೈಲ್ ಸಿಕ್ಕಿರಲಿಲ್ಲ. ಅನುಮಾನಗೊಂಡ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದಾಗ, ಪಾಪಿ ಮಗ ಸತ್ಯ ಒಪ್ಪಿಕೊಂಡಿದ್ದಾನೆ.
ಫೆಬ್ರವರಿ 20ರಂದು ಬೆಳಿಗ್ಗೆ ಸುಮಾರು 4:30ರ ಸುಮಾರಿಗೆ ತಂದೆ-ಮಗನ ನಡುವೆ ಜಗಳ ಉಂಟಾಗಿದ್ದು, ಪರವಾನಗಿ ಪಡೆದ ಬಂದೂಕಿನಿಂದ ತಂದೆಯ ತಲೆಗೆ ಗುಂಡು ಹಾರಿಸಿದ್ದಾಗಿ ಅಕ್ಷತ್ ಒಪ್ಪಿಕೊಂಡಿದ್ದಾನೆ. ಗುಂಡು ತಾಗುತ್ತಿದ್ದಂತೆ ಮನ್ವೇಂದ್ರ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ಶವವನ್ನು ಮೂರನೇ ಮಹಡಿಯಿಂದ ಕೆಳಗೆ ತಂದು ಕತ್ತರಿಸಿ, ಕೆಲವು ಭಾಗಗಳನ್ನು ಕಾರಿನಲ್ಲಿ ತೆಗೆದುಕೊಂಡು ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾನೆ. ಉಳಿದ ಭಾಗವನ್ನು ಮನೆಯಲ್ಲೇ ನೀಲಿ ಡ್ರಮ್ನಲ್ಲಿ ಮುಚ್ಚಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೆ ಕಾರಣವೇನು?
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ತಂದೆ ಒತ್ತಡ ಹೇರಿದ್ದರಿಂದ ಕೋಪಗೊಂಡ ಮಗ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಅಕ್ಷತ್ನ ತಂಗಿ ಈ ಘಟನೆಗೆ ಸಾಕ್ಷಿಯಾಗಿದ್ದರೂ, ಬೆದರಿಕೆ ಹಿನ್ನೆಲೆಯಲ್ಲಿ ವಿಷಯವನ್ನು ಬಹಿರಂಗಪಡಿಸಿರಲಿಲ್ಲ ಎನ್ನಲಾಗಿದೆ. ಸಾಕ್ಷ್ಯ ನಾಶಗೊಳಿಸಲು ಕಾರನ್ನು ಸ್ವಚ್ಛಗೊಳಿಸಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮನ್ವೇಂದ್ರ ಸಿಂಗ್ ಮೂಲತಃ ಜಲೌನ್ ಮೂಲದವರು. ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿಕಾಗಿದ್ದರು. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಧಿವಿಜ್ಞಾನ ತನಿಖೆ ಪ್ರಾರಂಭಿಸಿದ್ದಾರೆ. ಪ್ರಕರಣವು ನಗರದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಪೊಲೀಸ್ ಇಲಾಖೆ ಹೆಚ್ಚಿನ ವಿಚಾರಣೆ ನಡೆಸುತ್ತಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm