ಬ್ರೇಕಿಂಗ್ ನ್ಯೂಸ್
24-02-26 01:50 pm HK News Desk ಕ್ರೈಂ
ಲಕ್ನೋ, ಫೆ 25: ನಗರದ ಆಶಿಯಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕಾಣೆಯಾದರೆಂದು ದೂರು ನೀಡಿದ್ದ ಮಗನೇ ತನ್ನ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂಬ ಸಂಗತಿ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ನೀರು ತುಂಬಿಸುವ ಡ್ರಮ್ ಒಳಗೆ ಪತ್ತೆಯಾದ ಶಿರಚ್ಛೇದಿತ ಅರ್ಧ ದೇಹ ನೋಡಿ ಪೊಲೀಸರೇ ದಿಗ್ಭ್ರಮೆಗೊಂಡಿದ್ದಾರೆ.
ಹತ್ಯೆಗೊಳಗಾದ ವ್ಯಕ್ತಿಯನ್ನು ವರ್ಧಮಾನ ಪ್ಯಾಥಾಲಜಿ ಮಾಲೀಕ ಮನ್ವೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 20ರಿಂದ ಮನ್ವೇಂದ್ರ ಸಿಂಗ್ ಕಾಣೆಯಾಗಿದ್ದಾರೆ ಎಂದು ಪುತ್ರ ಅಕ್ಷತ್ ಪೊಲೀಸರಿಗೆ ದೂರು ನೀಡಿದ್ದ. ಆದರೆ ಘಟನೆ ನಡೆದ ಎರಡೇ ದಿನಗಳಲ್ಲಿ ಪ್ರಕರಣ ತೀವ್ರ ತಿರುವು ಪಡೆದುಕೊಂಡಿತ್ತು.
ಅಕ್ಷತ್ ಮೊದಲಿಗೆ, “ತಂದೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಹೇಳಿ ಬೆಳಿಗ್ಗೆ ಮನೆಯಿಂದ ಹೊರಟಿದ್ದರು. ಮರುದಿನ ವಾಪಸ್ ಬರುತ್ತೇನೆ ಎಂದರೂ ಬಂದಿಲ್ಲ. ಅವರ ಮೂರು ಮೊಬೈಲ್ಗಳು ಸ್ವಿಚ್ ಆಫ್ ಆಗಿವೆ,” ಎಂದು ಹೇಳಿದ್ದ. ಫೋನ್ ಕೊನೆಯ ಲೊಕೇಶನ್ ಕಾಕೋರಿ ಪ್ರದೇಶದಲ್ಲಿ ಪತ್ತೆಯಾದರೂ ಮೊಬೈಲ್ ಸಿಕ್ಕಿರಲಿಲ್ಲ. ಅನುಮಾನಗೊಂಡ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದಾಗ, ಪಾಪಿ ಮಗ ಸತ್ಯ ಒಪ್ಪಿಕೊಂಡಿದ್ದಾನೆ.
ಫೆಬ್ರವರಿ 20ರಂದು ಬೆಳಿಗ್ಗೆ ಸುಮಾರು 4:30ರ ಸುಮಾರಿಗೆ ತಂದೆ-ಮಗನ ನಡುವೆ ಜಗಳ ಉಂಟಾಗಿದ್ದು, ಪರವಾನಗಿ ಪಡೆದ ಬಂದೂಕಿನಿಂದ ತಂದೆಯ ತಲೆಗೆ ಗುಂಡು ಹಾರಿಸಿದ್ದಾಗಿ ಅಕ್ಷತ್ ಒಪ್ಪಿಕೊಂಡಿದ್ದಾನೆ. ಗುಂಡು ತಾಗುತ್ತಿದ್ದಂತೆ ಮನ್ವೇಂದ್ರ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ಶವವನ್ನು ಮೂರನೇ ಮಹಡಿಯಿಂದ ಕೆಳಗೆ ತಂದು ಕತ್ತರಿಸಿ, ಕೆಲವು ಭಾಗಗಳನ್ನು ಕಾರಿನಲ್ಲಿ ತೆಗೆದುಕೊಂಡು ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾನೆ. ಉಳಿದ ಭಾಗವನ್ನು ಮನೆಯಲ್ಲೇ ನೀಲಿ ಡ್ರಮ್ನಲ್ಲಿ ಮುಚ್ಚಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೆ ಕಾರಣವೇನು?
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ತಂದೆ ಒತ್ತಡ ಹೇರಿದ್ದರಿಂದ ಕೋಪಗೊಂಡ ಮಗ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಅಕ್ಷತ್ನ ತಂಗಿ ಈ ಘಟನೆಗೆ ಸಾಕ್ಷಿಯಾಗಿದ್ದರೂ, ಬೆದರಿಕೆ ಹಿನ್ನೆಲೆಯಲ್ಲಿ ವಿಷಯವನ್ನು ಬಹಿರಂಗಪಡಿಸಿರಲಿಲ್ಲ ಎನ್ನಲಾಗಿದೆ. ಸಾಕ್ಷ್ಯ ನಾಶಗೊಳಿಸಲು ಕಾರನ್ನು ಸ್ವಚ್ಛಗೊಳಿಸಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮನ್ವೇಂದ್ರ ಸಿಂಗ್ ಮೂಲತಃ ಜಲೌನ್ ಮೂಲದವರು. ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿಕಾಗಿದ್ದರು. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಧಿವಿಜ್ಞಾನ ತನಿಖೆ ಪ್ರಾರಂಭಿಸಿದ್ದಾರೆ. ಪ್ರಕರಣವು ನಗರದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಪೊಲೀಸ್ ಇಲಾಖೆ ಹೆಚ್ಚಿನ ವಿಚಾರಣೆ ನಡೆಸುತ್ತಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am