ಬ್ರೇಕಿಂಗ್ ನ್ಯೂಸ್
26-02-26 11:04 pm mangalore ಕ್ರೈಂ
ಮಂಗಳೂರು, ಫೆ.26 ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ದುಡ್ಡು ದುಪ್ಪಟ್ಟು ಮಾಡಲು ಹೋದ 74 ವರ್ಷದ ವೃದ್ಧ ವ್ಯಕ್ತಿಯೊಬ್ಬರು ಬರೋಬ್ಬರಿ ಒಂದು ಕೋಟಿ 77 ಲಕ್ಷ ಹಣ ಕಳಕೊಂಡಿದ್ದು ವಂಚನೆ ಬಗ್ಗೆ ಮಂಗಳೂರಿನಲ್ಲಿ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವೃದ್ಧ ವ್ಯಕ್ತಿಗೆ 2025ರ ಡಿಸೆಂಬರ್ 24ರಂದು ಯಾರೋ ಅಪರಿಚಿತರು +447902527164 ನೇ ನಂಬ್ರದಿಂದ ಕರೆ ಮಾಡಿದ್ದಾರೆ. ಈ ವೇಳೆ Shoib ghauri from Ventrade ನಿಂದ ಕರೆ ಮಾಡುವುದಾಗಿ ಹೇಳಿ ಆನ್ ಲೈನ್ ನಲ್ಲಿ ಅಮೆರಿಕನ್ ಷೇರಿನ ಮೇಲೆ ಇನ್ವೆಸ್ಟ್ ಮಾಡಿದರೆ ಅಧಿಕ ಲಾಭ ಬರುವುದಾಗಿ ತಿಳಿಸಿದ್ದಾರೆ. ನೀವು ಭಾರತೀಯ ರುಪಾಯಿಯಲ್ಲಿ ಹಣ ವರ್ಗಾಯಿಸಿದರೆ ನಾವು ಅದನ್ನು ಅಮೇರಿಕನ್ ಡಾಲರ್ ಗೆ ಪರಿವರ್ತಿಸಿ ಇನ್ವೆಸ್ಟ್ ಮೆಂಟ್ ಮಾಡುವುದಾಗಿ ತಿಳಿಸಿದ್ದಾರೆ.
ಅಲ್ಲದೆ, ವೃದ್ದರ ಮೊಬೈಲ್ ಗೆ ಈ-ಮೇಲ್(shoaib.ghauri@ventratrade.com, aahan.shah@ventratrade.com), ವಾಟ್ಸಾಪ್ (+447902527164) ಹಾಗೂ ಫೋನ್ ಕರೆಯ (+447441930793, +447441958382) ಮೂಲಕ ಮಾತುಕತೆ ನಡೆಸಿದ್ದಾರೆ. ನಂಬಿಕೆ ಬರಲು ಮೊದಲು ಅಜ್ಜ ಹೂಡಿದ ಹಣಕ್ಕೆ ಸ್ವಲ್ಪಮಟ್ಟಿಗೆ ಲಾಭವನ್ನು ಹಿಂತಿರುಗಿಸಿದ್ದಾರೆ. ಇದನ್ನು ನಂಬಿದ ವ್ಯಕ್ತಿ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಅವರು ಹೇಳಿದ್ದನ್ನು ನಂಬಿದ್ದು ಜನವರಿ 05ರಿಂದ ಫೆ.2ರ ವರೆಗೆ ಅವರೇ ತಿಳಿಸಿದ ಬ್ಯಾಂಕ್ ಖಾತೆಗಳಿಗೆ RTGS & NEFT& IMPS ಮೂಲಕ ಒಟ್ಟು 1,77,64,668.22/- ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಆದರೆ ತಾನು ಹಾಕಿದ ಹಣ ರಿಟರ್ನ್ ಬಾರದೇ ಇದ್ದಾಗ ಮೋಸ ಹೋಗಿರುವುದು ಗೊತ್ತಾಗಿ ಇದೀಗ ಅಪರಿಚಿತ ವ್ಯಕ್ತಿ ಆನ್ ಲೈನ್ ಅಮೆರಿಕನ್ ಕೊಮೊಡಿಟಿಸ್ ಇನ್ ವೆಸ್ಟ್ ಮೆಂಟ್ ಹೆಸರಿನಲ್ಲಿ ಮೋಸದಿಂದ ಹಣ ವರ್ಗಾಯಿಸಿ ವಂಚನೆ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am