ಬ್ರೇಕಿಂಗ್ ನ್ಯೂಸ್
27-02-26 12:34 pm HK News Desk ಕ್ರೈಂ
ಶಿವಮೊಗ್ಗ, ಫೆ.27: ಸೈಬರ್ ಅಪರಾಧಗಳಿಗೆ ಬಳಕೆಯಾಗುತ್ತಿದ್ದ 15 ಬೇನಾಮಿ ಹೆಸರಿನಲ್ಲಿದ್ದ ಬ್ಯಾಂಕ್ ಖಾತೆಗಳನ್ನು ಪೊಲೀಸರು ಪತ್ತೆಹಚ್ಚಿದ್ದು ಮೂವರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶರಾವತಿ ನಗರದ ಜಗದೀಶ್ (43), ಚಿಕ್ಕಮಗಳೂರಿನ ಅರ್ಷಾದ್ (39), ಶಿವಮೊಗ್ಗ ಹೊಸಮನೆ ಬಡಾವಣೆಯ ಅನಂತ (34) ಬಂಧಿತರು.
ಆರೋಪಿಗಳು ವಿವಿಧ ಬೇನಾಮಿ ಹೆಸರಿನಲ್ಲಿದ್ದ 15 ಬ್ಯಾಂಕ್ ಖಾತೆಗಳನ್ನು ನಿರ್ವಹಿಸುತ್ತಿದ್ದರು. ಈ ಖಾತೆಗಳ ಮೇಲೆ ದೇಶಾದ್ಯಂತ 352 ಕ್ಕೂ ಹೆಚ್ಚು ಸೈಬರ್ ಸಂಬಂಧಿತ ಪ್ರಕರಣಗಳು ದಾಖಲಾಗಿದ್ದು ಕೋಟ್ಯಂತರ ರೂಪಾಯಿ ಹಣದ ವಹಿವಾಟು ನಡೆದಿದೆ. 15 ಅಕೌಂಟ್ ಗಳಲ್ಲಿ ಸುಮಾರು 82 ಕೋಟಿ ರೂ. ಹಣ ವಂಚನೆಯಾಗಿರುವ ಬಗ್ಗೆ ಮಾಹಿತಿ ಇದೆ. ಸದ್ಯಕ್ಕೆ ವಂಚನೆಗೆ ಬಳಸಿದ 15 ಖಾತೆಗಳಲ್ಲಿ ಒಟ್ಟು 14 ಕೋಟಿ 71 ಲಕ್ಷ ರೂ. ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ ಡ್ರಾ ಮಾಡಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಇದರಂತೆ, ಬ್ಯಾಂಕ್ ಖಾತೆಯನ್ನು ತೆರೆಮರೆಯಲ್ಲಿ ನಿಂತು ನಿರ್ವಹಣೆ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ 2 ಮೊಬೈಲ್, 11 ATM ಕಾರ್ಡ್, 9 QR Code Scanner, 15 Airtel SIM cards ವಶಕ್ಕೆ ಪಡೆಯಲಾಗಿದೆ. ವಿಲ್ಸನ್ ಎಂಬವರು ನೀಡಿದ್ದ ವಂಚನೆ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾಗ ಬೇನಾಮಿ ಖಾತೆಗಳ ಜಾಲ ಬಯಲಾಗಿದೆ. ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am