ಬ್ರೇಕಿಂಗ್ ನ್ಯೂಸ್
02-01-21 01:12 pm Headline Karnataka News Network ಕ್ರೈಂ
ಕರ್ನೂಲ್, ಜ.2: ಅಂತರ್ಜಾತಿ ಮದುವೆಯಾಗಿದ್ದ 30 ವರ್ಷದ ದಲಿತ ಯುವಕನನ್ನು ಆತನ ಪತ್ನಿ ಮನೆಯವರೇ ಹೊಡೆದು ಕೊಂದು ಹಾಕಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಆಡಮ್ ಸ್ಮಿತ್ ಎಂದು ಗುರುತಿಸಲಾಗಿದೆ. ಸ್ಮಿತ್ ಕಳೆದ ಆರು ತಿಂಗಳ ಹಿಂದೆ ಮಹೇಶ್ವರಿ ಎನ್ನುವ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಹೈದರಾಬಾದಿನ ಆರ್ಯ ಸಮಾಜದಲ್ಲಿ ಮದುವೆ ನಡೆದಿತ್ತು. ಮದುವೆ ಬಳಿಕ ಯುವಕ ಮತ್ತು ಯುವತಿ ಕರ್ನೂಲ್ ಜಿಲ್ಲೆಯ ಆದೊನಿ ಪಟ್ಟಣದಲ್ಲಿ ವಾಸವಿದ್ದರು. ಯುವಕ ದಲಿತ ಸಮುದಾಯಕ್ಕೆ ಸೇರಿದವನಾಗಿದ್ದರೆ, ಯುವತಿ ಮೇಲ್ಜಾತಿಗೆ ಸೇರಿದ್ದಳು. ಆತನ ಜೊತೆ ಮದುವೆಯಾಗುವುದಕ್ಕೆ ಯುವತಿ ಮನೆಯವರ ಭಾರೀ ವಿರೋಧವಿತ್ತು.


ಆಡಮ್ ಸ್ಮಿತ್ ವೃತ್ತಿಯಲ್ಲಿ ಫಿಸಿಯೋಥೆರಪಿಸ್ಟ್ ಆಗಿದ್ದುದರಿಂದ ಯುವತಿ ಆತನನ್ನು ವರಿಸಲು ಮುಂದಾಗಿದ್ದಳು. ವಿರೋಧ ಮಧ್ಯೆಯೂ ಮದುವೆಯಾಗಿ ಜೊತೆಯಾಗಿದ್ದ ಜೋಡಿ, ಆದೊನಿ ಪಟ್ಟಣದಲ್ಲಿ ವಾಸಕ್ಕೆ ತೊಡಗಿದ್ದರು. ಆದರೆ, ಯುವತಿ ಮನೆಯವರು ಯುವಕನ ವಿರುದ್ಧ ಕತ್ತಿ ಮಸೆಯುತ್ತಲೇ ಇದ್ದರು. ಎರಡು ದಿನಗಳ ಹಿಂದೆ ಬೈಕಿನಲ್ಲಿ ಬರುತ್ತಿದ್ದ ಸ್ಮಿತ್ ನನ್ನು ಅಡ್ಡಹಾಕಿದ್ದ ದುಷ್ಕರ್ಮಿಗಳು ರಾಡ್ ನಲ್ಲಿ ಹೊಡೆದು ಕಲ್ಲು ಎತ್ತಿ ಹಾಕಿ ಕೊಂದಿದ್ದಾರೆ. ಕೊಲೆಗೆ ತಮ್ಮ ಮನೆಯವರೇ ಕಾರಣ ಎಂದು ಪತ್ನಿ ಮಹೇಶ್ವರಿ ದೂರಿದ್ದಾಳೆ. ಇದರಂತೆ, ಪೊಲೀಸರು ತನಿಖೆ ಆರಂಭಿಸಿದ್ದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A 30-year-old man was done to death, allegedly by his in-laws at Adoni on Thursday. The deceased has been identified as Adam Smith (30), a resident of the RTC colony in Adoni.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am