ಬ್ರೇಕಿಂಗ್ ನ್ಯೂಸ್
10-03-26 01:49 pm HK News Staffer ಕ್ರೈಂ
ಬಾಗಲಕೋಟೆ, ಮಾ.10: ಇತ್ತೀಚಿಗೆ ಬಾಲಾಪರಾಧಿಗಳ ಸಂಖ್ಯೆ ಹೆಚ್ಚುತ್ತಿದೆ. ಸಣ್ಣ ವಯಸ್ಸಿನಲ್ಲೇ ಕೊಲೆ ಸುಲಿಗೆಯಂತಹ ಕೃತ್ಯಗಳಲ್ಲಿ ಅಪ್ರಾಪ್ತರು ಭಾಗಿಯಾಗ್ತಿರುವ ವಿಚಾರ ಆಘಾತಕಾರಿಯಾಗಿದೆ. ಬಳ್ಳಾರಿ ಗುರುಕುಲದಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕನನ್ನ ಹತ್ಯೆಗೈದ ಪ್ರಕರಣ ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ ಅಪ್ರಾಪ್ತ ಬಾಲಕನಿಂದ ಯುವಕನ ಕೊಲೆ ನಡೆದಿದೆ.
ಹೋಳಿ ಹಬ್ಬದಂದು ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಪರಿಚಿತರೇ ಆಗಿರೋ 16 ವರ್ಷದ ಅಪ್ರಾಪ್ತ ಬಾಲಕ ಹಾಗೂ ಕೊಲೆಯಾದ ರಾಹುಲ್ ಬಾಹುಬಲಿ ಸಪ್ತಸಾಗರ (19) ನಡುವೆ ಹೋಳಿ ಹಬ್ಬದಂದು ಜಗಳ ಶುರುವಾಗಿದೆ. ಜಗಳದಲ್ಲಿ ರಾಹುಲ್ ತನ್ನನ್ನು ಹೊಡೆದಿರುವುದಾಗಿ ಬಾಲಕ ತನ್ನ ಸ್ನೇಹಿತೆ ಹಾಗೂ ಗೆಳೆಯರ ಮುಂದೆ ಹೇಳಿಕೊಂಡಿದ್ದನಂತೆ. ಬಳಿಕ ಬಾಲಕನ ಬಿಲ್ಡಪ್ ವಿಚಾರ ಯುವಕನ ಕೋಪಕ್ಕೆ ಕಾರಣವಾಗಿದೆ.
ಮಾತುಕತೆ ವೇಳೆ ಇಬ್ಬರ ನಡುವೆ ವಾಗ್ವಾದ;
ಹೊಡೆದಿರೋದಾಗಿ ಹೇಳಿಕೊಂಡು ಓಡಾಡ್ತಿದ್ದ ಬಾಲಕನನ್ನ ಯುವಕ ರಾಹುಲ್ ಕಳೆದ ರಾತ್ರಿ ಮಾತಾಡಬೇಕು ಎಂದು ದೇವಸ್ಥಾನದ ಬಳಿ ಕರೆದಿದ್ದ. ಮಾತುಕತೆ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಇದೇ ವೇಳೆ ಇಬ್ಬರ ಜಗಳ ತಡೆಯಲು ಸ್ಥಳದಲ್ಲಿದ್ದ ಸ್ನೇಹಿತರು ಪ್ರಯತ್ನ ಮಾಡಿದ್ರು ಸಾಧ್ಯವಾಗಲಿಲ್ಲ.
ಕುತ್ತಿಗೆಗೆ ಇರಿದು ಕೊಲೆಗೈದ ಬಾಲಕ:
ಈ ವೇಳೆ ಬೈಕ್ ಕೀ ಚೈನ್ ನಲ್ಲಿದ್ದ ಚಾಕುವಿನಿಂದ ರಾಹುಲ್ ಕುತ್ತಿಗೆಗೆ ಇರಿದು ಬಾಲಕನೇ ಕೊಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಮೃತ ಯುವಕ ಸೆಕೆಂಡ್ ಇಯರ್ ಡಿಪ್ಲೋಮಾ ವಿದ್ಯಾರ್ಥಿ ಆಗಿದ್ದಾನೆ. ಇತ್ತ ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 12:00 pm
HK News Staffer
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm