ಬ್ರೇಕಿಂಗ್ ನ್ಯೂಸ್
10-03-26 01:49 pm HK News Staffer ಕ್ರೈಂ
ಬಾಗಲಕೋಟೆ, ಮಾ.10: ಇತ್ತೀಚಿಗೆ ಬಾಲಾಪರಾಧಿಗಳ ಸಂಖ್ಯೆ ಹೆಚ್ಚುತ್ತಿದೆ. ಸಣ್ಣ ವಯಸ್ಸಿನಲ್ಲೇ ಕೊಲೆ ಸುಲಿಗೆಯಂತಹ ಕೃತ್ಯಗಳಲ್ಲಿ ಅಪ್ರಾಪ್ತರು ಭಾಗಿಯಾಗ್ತಿರುವ ವಿಚಾರ ಆಘಾತಕಾರಿಯಾಗಿದೆ. ಬಳ್ಳಾರಿ ಗುರುಕುಲದಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕನನ್ನ ಹತ್ಯೆಗೈದ ಪ್ರಕರಣ ಮಾಸುವ ಮುನ್ನವೇ ಬಾಗಲಕೋಟೆಯಲ್ಲಿ ಅಪ್ರಾಪ್ತ ಬಾಲಕನಿಂದ ಯುವಕನ ಕೊಲೆ ನಡೆದಿದೆ.
ಹೋಳಿ ಹಬ್ಬದಂದು ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಪರಿಚಿತರೇ ಆಗಿರೋ 16 ವರ್ಷದ ಅಪ್ರಾಪ್ತ ಬಾಲಕ ಹಾಗೂ ಕೊಲೆಯಾದ ರಾಹುಲ್ ಬಾಹುಬಲಿ ಸಪ್ತಸಾಗರ (19) ನಡುವೆ ಹೋಳಿ ಹಬ್ಬದಂದು ಜಗಳ ಶುರುವಾಗಿದೆ. ಜಗಳದಲ್ಲಿ ರಾಹುಲ್ ತನ್ನನ್ನು ಹೊಡೆದಿರುವುದಾಗಿ ಬಾಲಕ ತನ್ನ ಸ್ನೇಹಿತೆ ಹಾಗೂ ಗೆಳೆಯರ ಮುಂದೆ ಹೇಳಿಕೊಂಡಿದ್ದನಂತೆ. ಬಳಿಕ ಬಾಲಕನ ಬಿಲ್ಡಪ್ ವಿಚಾರ ಯುವಕನ ಕೋಪಕ್ಕೆ ಕಾರಣವಾಗಿದೆ.
ಮಾತುಕತೆ ವೇಳೆ ಇಬ್ಬರ ನಡುವೆ ವಾಗ್ವಾದ;
ಹೊಡೆದಿರೋದಾಗಿ ಹೇಳಿಕೊಂಡು ಓಡಾಡ್ತಿದ್ದ ಬಾಲಕನನ್ನ ಯುವಕ ರಾಹುಲ್ ಕಳೆದ ರಾತ್ರಿ ಮಾತಾಡಬೇಕು ಎಂದು ದೇವಸ್ಥಾನದ ಬಳಿ ಕರೆದಿದ್ದ. ಮಾತುಕತೆ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಇದೇ ವೇಳೆ ಇಬ್ಬರ ಜಗಳ ತಡೆಯಲು ಸ್ಥಳದಲ್ಲಿದ್ದ ಸ್ನೇಹಿತರು ಪ್ರಯತ್ನ ಮಾಡಿದ್ರು ಸಾಧ್ಯವಾಗಲಿಲ್ಲ.
ಕುತ್ತಿಗೆಗೆ ಇರಿದು ಕೊಲೆಗೈದ ಬಾಲಕ:
ಈ ವೇಳೆ ಬೈಕ್ ಕೀ ಚೈನ್ ನಲ್ಲಿದ್ದ ಚಾಕುವಿನಿಂದ ರಾಹುಲ್ ಕುತ್ತಿಗೆಗೆ ಇರಿದು ಬಾಲಕನೇ ಕೊಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಮೃತ ಯುವಕ ಸೆಕೆಂಡ್ ಇಯರ್ ಡಿಪ್ಲೋಮಾ ವಿದ್ಯಾರ್ಥಿ ಆಗಿದ್ದಾನೆ. ಇತ್ತ ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm