ಬ್ರೇಕಿಂಗ್ ನ್ಯೂಸ್
23-03-26 11:17 am HK News Staffer ಕ್ರೈಂ
ರಾಮನಗರ, ಮಾರ್ಚ್ 23: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಬಳಿ ನಡೆದಿದೆ. ಕೇರಳದಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫೆನ್ಸಿಂಗ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಪಿಕೆ ಟ್ರಾವೆಲ್ಸ್ಗೆ ಸೇರಿದ ಈ ಬಸ್ ತಡರಾತ್ರಿ ಕೇರಳದ ಕ್ಯಾಲಿಕಟ್ನಿಂದ ಹೊರಟಿದ್ದು, ಬೆಳಗಿನ ಜಾವ ಸುಮಾರು 4.10ಕ್ಕೆ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕ ನಿದ್ರೆ ಮಂಪರಿನಿಂದ ವಾಹನದ ನಿಯಂತ್ರಣ ಕಳೆದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಬಸ್ ಫೆನ್ಸಿಂಗ್ಗೆ ಡಿಕ್ಕಿ ಹೊಡೆದ ಬಳಿಕವೂ ಸುಮಾರು 100 ಮೀಟರ್ ದೂರ ಸಂಚರಿಸಿದೆ.

ಘಟನೆಯಲ್ಲಿ ಕೇರಳದ ಕಾಜೀಕೋಟೆಯ ಮೊಹಮ್ಮದ್ ಫರಾನ್ (22), ಸುಲ್ಫಿ (45) ಹಾಗೂ ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್ (45) ಮತ್ತು ಆಡುಗೋಡಿಯ ಸಾಕೇರ್ ಮೃತಪಟ್ಟಿದ್ದಾರೆ. ಇನ್ನೂ ಕೆಲ ಪ್ರಯಾಣಿಕರು ಗಾಯಗೊಂಡಿದ್ದು, ಕಣ್ಣೂರಿನ ಅಬ್ದುಲ್ ಮತ್ತು ಅಲೇನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ನಲ್ಲಿ ಒಟ್ಟು 42 ಮಂದಿ ಪ್ರಯಾಣಿಸುತ್ತಿದ್ದರು.
ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ರಿಯಾಜ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತಡೆಗೋಡೆ ಇಲ್ಲದೇ ಇದ್ದರೆ ಅಪಘಾತದ ಪ್ರಮಾಣ ಇನ್ನಷ್ಟು ಭೀಕರವಾಗಿರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಈ ಘಟನೆ ಮತ್ತೆ ರಸ್ತೆ ಸುರಕ್ಷತೆ ಮತ್ತು ದೀರ್ಘ ಪ್ರಯಾಣದ ವೇಳೆ ಚಾಲಕರ ಜಾಗೃತಿಯ ಅಗತ್ಯತೆಯನ್ನು ಒತ್ತಿಹೇಳಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am