ಬ್ರೇಕಿಂಗ್ ನ್ಯೂಸ್
27-03-26 08:37 pm HK News Staffer ಕ್ರೈಂ
ಬೆಂಗಳೂರು, ಮಾ.27 : ಇತ್ತೀಚೆಗೆ ಸಾರ್ವಜನಿಕರು ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನೀಡುತ್ತಿರುವುದು ನೋಡಿದ್ದೇವೆ. ಆದರೆ ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಭಿನ್ನ ಘಟನೆಯೊಂದು ನಡೆದಿದೆ. ಇನ್ಸ್ಪೆಕ್ಟರ್ ರವಿ ಅವರ ಭ್ರಷ್ಟಾಚಾರವನ್ನು ತಾಳಲಾರದೆ, ಠಾಣೆಯ ಸಿಬ್ಬಂದಿಯೇ ನೇರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಇನ್ಸ್ಪೆಕ್ಟರ್ ರವಿ ಕಳೆದ ಎರಡೂವರೆ ವರ್ಷಗಳಲ್ಲಿ ಸುಮಾರು 15 ಕೋಟಿ ರೂಪಾಯಿಗೂ ಹೆಚ್ಚು ಲಂಚ ಪಡೆದಿದ್ದು, ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರತಿ FIR ಗೂ 25 ಸಾವಿರ ‘ರೇಟ್ ಫಿಕ್ಸ್’ !
ಸಿಬ್ಬಂದಿ ಆರೋಪದ ಪ್ರಕಾರ, ಪುಟ್ಟೇನಹಳ್ಳಿ ಠಾಣೆಯಲ್ಲಿ ಕಾನೂನು ಪಾಲನೆಗಿಂತ ಹೆಚ್ಚಾಗಿ ಹಣ ವಸೂಲಿಗೆ ಆದ್ಯತೆ ನೀಡಲಾಗುತ್ತಿದೆಯಂತೆ. ಯಾವುದೇ ಎಫ್ಐಆರ್ ದಾಖಲಿಸಬೇಕಾದರೆ ಇನ್ಸ್ಪೆಕ್ಟರ್ ರವಿಗೆ ಕನಿಷ್ಠ 25 ಸಾವಿರ ರೂ. ಲಂಚ ನೀಡಲೇಬೇಕು. ಹಣ ನೀಡಿ ಪ್ರಕರಣ ದಾಖಲಿಸದಂತೆ ಒತ್ತಡವನ್ನೂ ಹಾಕಲಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಡಿಸಿಎಂ ಹೆಸರು ದರ್ಬಳಕೆ:
ಕಳೆದ ಎರಡು ವರ್ಷಗಳಿಂದ ಇನ್ಸ್ಪೆಕ್ಟರ್ ಹೆಚ್.ಕೆ. ರವಿಕುಮಾರ್ ಪುಟ್ಟೇನಹಳ್ಳಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಸ್ಟೇಷನ್ ಇನ್ಸಪೆಕ್ಟರ್ ನವೀನ್ ಅವರನ್ನು ಪುಟ್ಟೇನ ಹಳ್ಳಿ ಠಾಣೆಗೆ ವರ್ಗಾವಣೆ ಮಾಡಿಕೊಳ್ಳಲು ಇಬ್ಬರು ಸೇರಿಕೊಂಡು ಈಗಾಗಲೆ DCM ಅವರಿಗೆ 1 ಕೋಟಿ ಹಣ ಕೊಟ್ಟಿದಾರಂತೆ. ಇನ್ನೂ ಹಣ ಹೊಂದಿಸಬೇಕು ಎಂದು ಸಿಬ್ಬಂದಿಗೆ ಹೇಳುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವರ್ಗಾವಣೆ ದಂಧೆ, ವಸೂಲಿ:
ಇನ್ಸ್ಪೆಕ್ಟರ್ ಮತ್ತು ಪಿಎಸ್ಐ ಸಹ, ಚಿಕ್ಕ ಟೀ ಸ್ಟಾಲ್ಗಳಿಂದ ಹಿಡಿದು ದೊಡ್ಡ ಬಾರ್, ಪಬ್ಗಳ ವರೆಗೂ ವಸೂಲಿ ಮಾಡುತ್ತಿದ್ದರು. ಕೆಲವು ಪ್ರಕರಣಗಳಲ್ಲಿ ರೌಡಿಶೀಟರ್ ಹೆಸರನ್ನು ಪಟ್ಟಿಯಿಂದ ತೆಗೆಯಲು ಲಕ್ಷಾಂತರ ರೂ. ಮುಂಗಡ ಪಡೆಯುವ ಕೆಲಸ ನಡೆಸುತ್ತಿದ್ದಾರೆ. ಉದಾಹರಣೆಗೆ ಲೇಡಿ ರೌಡಿಶೀಟರ್ ಯಶಸ್ವಿನಿ ಗೌಡಳ ಪತಿ ಮಹೇಶ್ ಅಲಿಯಾಸ್ ದಡಿಯ ಮಹೇಶ್ ಹೆಸರನ್ನು ಪಟ್ಟಿಯಿಂದ ತೆಗೆಯಲು 20 ಲಕ್ಷ ರೂ. ಲಂಚ, 2 ಲಕ್ಷ ಬೆಲೆ ಬಾಳುವ LED TV ಮತ್ತು INNOVA Cresta ಕಾರ್ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ.
ತಿಂಗಳಿಗೆ 25 ಲಕ್ಷ ‘ಮಾಮೂಲಿ’ ವಸೂಲಿ:
ಇನ್ಸ್ಪೆಕ್ಟರ್ ನೇರವಾಗಿ ಹಣ ವಸೂಲಿ ಮಾಡದೆ, ತಮ್ಮ SB ಮತ್ತು ಅಧಿಕೃತ ಡ್ರೈವರ್ ಮೂಲಕ ತಿಂಗಳಿಗೆ ಸರಾಸರಿ 25 ಲಕ್ಷ ರೂ. ಸಂಗ್ರಹಿಸುತ್ತಿದ್ದಾರೆ. ಸಬ್ ಇನ್ಸ್ಪೆಕ್ಟರ್ ಮಟ್ಟದ ಅಧಿಕಾರಿಗಳು ಅಕ್ರಮ ಪ್ರಕರಣಗಳಿಗೆ ದಾಳಿ ಮಾಡಿದರೆ, ಮಧ್ಯಪ್ರವೇಶಿಸಿ ಹಣ ವಸೂಲಿ ಮಾಡಿ ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ. ಪ್ರಾಮಾಣಿಕ ವರದಿಗಳನ್ನು ನೀಡಿದ ಸಿಬ್ಬಂದಿಯನ್ನು ಟಾರ್ಗೆಟ್ ಮಾಡುವುದಕ್ಕೂ ಹೇಸಲ್ಲ. ಇದರ ಬಗ್ಗೆಯೂ ಆರೋಪಗಳಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am