ಬ್ರೇಕಿಂಗ್ ನ್ಯೂಸ್
27-03-26 09:32 pm HK News Staffer ಕ್ರೈಂ
ಉಳ್ಳಾಲ, ಮಾ.27: ಹೊಸ ಬಾವಿ ಕೊರೆಯುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕ್ರೇನ್ ನ ಕೊಕ್ಕೆಯಿಂದ ಬೇರ್ಪಟ್ಟ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ ಮೂವತ್ತು ಅಡಿ ಎತ್ತರದಿಂದ ತಲೆಯ ಮೇಲೆ ಬಿದ್ದ ಪರಿಣಾಮ ವಲಸೆ ಕಾರ್ಮಿಕನೋರ್ವ ದಾರುಣ ಮೃತಪಟ್ಟ ದುರ್ಘಟನೆ ಇಂದು ಸಂಜೆ ಕುತ್ತಾರು ಪದವಿನ ಸಲಾತ್ ನಗರ ಎಂಬಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಮಲ್ಲಾಪುರ ನಿವಾಸಿ ಶಿವಕುಮಾರ ಜಿ.ಕೆ ( 30)ಮೃತ ವ್ಯಕ್ತಿ. ಉಳ್ಳಾಲ ತಾಲೂಕಿನ ಕುತ್ತಾರುವಿನ ಸಲಾತ್ ನಗರದ ಖಾಲಿ ಸೈಟೊಂದರಲ್ಲಿ ಹೊಸ ಬಾವಿ ಅಗೆಯುತ್ತಿದ್ದ ವೇಳೆ ಶುಕ್ರವಾರ ಸಂಜೆ 4.30 ರ ವೇಳೆಗೆ ದುರ್ಘಟನೆ ನಡೆದಿದೆ. ಒಟ್ಟು ಆರು ಜನ ಕೂಲಿ ಕಾರ್ಮಿಕರಲ್ಲಿ ಶಿವಕುಮಾರ್ ಸೇರಿ ಮೂವರು ಕಾರ್ಮಿಕರು ಮೂವತ್ತು ಅಡಿ ಆಳದ ಬಾವಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕ್ರೇನ್ ಮೂಲಕ ಕಬ್ಬಿಣದ ಬಕೆಟಲ್ಲಿ ಮಣ್ಣನ್ನು ಮೇಲಕ್ಕೆತ್ತುತ್ತಿದ್ದ ಸಂಧರ್ಭ ಕ್ರೇನಿನ ಕೊಕ್ಕೆಯಿಂದ ಬೇರ್ಪಟ್ಟ ಮಣ್ಣು ತುಂಬಿದ ಬಕೆಟ್ ನೇರವಾಗಿ ಕಾರ್ಮಿಕ ಶಿವ ಕುಮಾರ್ ಅವರ ತಲೆಯ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಶಿವಕುಮಾರ್ ನನ್ನು ಮೇಲಕ್ಕೆತ್ತಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯದಲ್ಲಿಯೇ ಅವರು ಮೃತಪಟ್ಟಿದ್ದಾರೆ.


ಬಾವಿಯೊಳಗಿದ್ದ ಇತರ ಇಬ್ಬರು ಕಾರ್ಮಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಕುಮಾರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮೃತ ಶಿವಕುಮಾರ್ ವಿವಾಹಿತರಾಗಿದ್ದು ತನ್ನ ಪತ್ನಿ ಮತ್ತು ಮೂರು ವರ್ಷದ ಗಂಡು ಮತ್ತು ಒಂದು ವರ್ಷದ ಹೆಣ್ಣು ಮಗಳೊಂದಿಗೆ ತೊಕ್ಕೊಟ್ಟಿನ ಬಾಡಿಗೆ ಮನೆಯಲ್ಲಿ ವಾಸವಿದ್ದರು. ನಿನ್ನೆಯಷ್ಟೆ ಪತ್ನಿ ಮತ್ತು ಮಕ್ಕಳನ್ನ ಅವರು ಊರಿಗೆ ಕಳುಹಿಸಿಕೊಟ್ಟಿದ್ದರಂತೆ. ಶಿವಕುಮಾರ್ ಅವರು ಎರಡು ವಾರಗಳ ಹಿಂದಷ್ಟೆ ತನ್ನ ಕಿರಿಯ ಮಗಳ ಮೊದಲ ವರ್ಷದ ಹುಟ್ಟಿದ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am