ಬ್ರೇಕಿಂಗ್ ನ್ಯೂಸ್
27-03-26 09:32 pm HK News Staffer ಕ್ರೈಂ
ಉಳ್ಳಾಲ, ಮಾ.27: ಹೊಸ ಬಾವಿ ಕೊರೆಯುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕ್ರೇನ್ ನ ಕೊಕ್ಕೆಯಿಂದ ಬೇರ್ಪಟ್ಟ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ ಮೂವತ್ತು ಅಡಿ ಎತ್ತರದಿಂದ ತಲೆಯ ಮೇಲೆ ಬಿದ್ದ ಪರಿಣಾಮ ವಲಸೆ ಕಾರ್ಮಿಕನೋರ್ವ ದಾರುಣ ಮೃತಪಟ್ಟ ದುರ್ಘಟನೆ ಇಂದು ಸಂಜೆ ಕುತ್ತಾರು ಪದವಿನ ಸಲಾತ್ ನಗರ ಎಂಬಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಮಲ್ಲಾಪುರ ನಿವಾಸಿ ಶಿವಕುಮಾರ ಜಿ.ಕೆ ( 30)ಮೃತ ವ್ಯಕ್ತಿ. ಉಳ್ಳಾಲ ತಾಲೂಕಿನ ಕುತ್ತಾರುವಿನ ಸಲಾತ್ ನಗರದ ಖಾಲಿ ಸೈಟೊಂದರಲ್ಲಿ ಹೊಸ ಬಾವಿ ಅಗೆಯುತ್ತಿದ್ದ ವೇಳೆ ಶುಕ್ರವಾರ ಸಂಜೆ 4.30 ರ ವೇಳೆಗೆ ದುರ್ಘಟನೆ ನಡೆದಿದೆ. ಒಟ್ಟು ಆರು ಜನ ಕೂಲಿ ಕಾರ್ಮಿಕರಲ್ಲಿ ಶಿವಕುಮಾರ್ ಸೇರಿ ಮೂವರು ಕಾರ್ಮಿಕರು ಮೂವತ್ತು ಅಡಿ ಆಳದ ಬಾವಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕ್ರೇನ್ ಮೂಲಕ ಕಬ್ಬಿಣದ ಬಕೆಟಲ್ಲಿ ಮಣ್ಣನ್ನು ಮೇಲಕ್ಕೆತ್ತುತ್ತಿದ್ದ ಸಂಧರ್ಭ ಕ್ರೇನಿನ ಕೊಕ್ಕೆಯಿಂದ ಬೇರ್ಪಟ್ಟ ಮಣ್ಣು ತುಂಬಿದ ಬಕೆಟ್ ನೇರವಾಗಿ ಕಾರ್ಮಿಕ ಶಿವ ಕುಮಾರ್ ಅವರ ತಲೆಯ ಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡಿದ್ದ ಶಿವಕುಮಾರ್ ನನ್ನು ಮೇಲಕ್ಕೆತ್ತಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯದಲ್ಲಿಯೇ ಅವರು ಮೃತಪಟ್ಟಿದ್ದಾರೆ.


ಬಾವಿಯೊಳಗಿದ್ದ ಇತರ ಇಬ್ಬರು ಕಾರ್ಮಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಕುಮಾರ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮೃತ ಶಿವಕುಮಾರ್ ವಿವಾಹಿತರಾಗಿದ್ದು ತನ್ನ ಪತ್ನಿ ಮತ್ತು ಮೂರು ವರ್ಷದ ಗಂಡು ಮತ್ತು ಒಂದು ವರ್ಷದ ಹೆಣ್ಣು ಮಗಳೊಂದಿಗೆ ತೊಕ್ಕೊಟ್ಟಿನ ಬಾಡಿಗೆ ಮನೆಯಲ್ಲಿ ವಾಸವಿದ್ದರು. ನಿನ್ನೆಯಷ್ಟೆ ಪತ್ನಿ ಮತ್ತು ಮಕ್ಕಳನ್ನ ಅವರು ಊರಿಗೆ ಕಳುಹಿಸಿಕೊಟ್ಟಿದ್ದರಂತೆ. ಶಿವಕುಮಾರ್ ಅವರು ಎರಡು ವಾರಗಳ ಹಿಂದಷ್ಟೆ ತನ್ನ ಕಿರಿಯ ಮಗಳ ಮೊದಲ ವರ್ಷದ ಹುಟ್ಟಿದ ಹಬ್ಬವನ್ನ ಸಂಭ್ರಮದಿಂದ ಆಚರಿಸಿದ್ದರು.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am