ಬ್ರೇಕಿಂಗ್ ನ್ಯೂಸ್
27-03-26 09:34 pm HK News Staffer ಕ್ರೈಂ
ಬೆಂಗಳೂರು, ಮಾ. 27: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಡ್ರೀಫ್ಟ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಿಕ್ಕಿ ರೈ ವಿರುದ್ಧ ವಂಚನೆ ಕೇಸ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ರಿಕ್ಕಿ ರೈ ದೆಹಲಿಯಿಂದ ಖರೀದಿಸಿದ ದುಬಾರಿ ಲ್ಯಾಂಬೋರ್ಗಿನಿ ಕಾರನ್ನು ಬೆಂಗಳೂರಿನಲ್ಲಿ ರಿಜಿಸ್ಟರ್ ಮಾಡಿಸದೇ, ಲಕ್ಷಾಂತರ ರೂಪಾಯಿ ಟ್ಯಾಕ್ಸ್ ಕಟ್ಟದೇ, ಫ್ಯಾನ್ಸಿ ನಂಬರ್ ಪ್ಲೇಟ್ ಅಳವಡಿಸಿ ಓಡಿಸುತ್ತಿದ್ದಾರೆಯೆಂದು ವಿಚಾರಣೆ ವೇಳೆ ತಿಳಿದು ಬಂದಿದೆ.
ರಿಕ್ಕಿ ರೈ ಕಾರಿನ ಹೊಸ ಬಣ್ಣ ಮಾಡಿಸಿ ಬೆಂಗಳೂರಿಗೆ ತಂದು, ಆರ್ಟಿಒದಲ್ಲಿ ರಿಜಿಸ್ಟ್ರೇಶನ್ ಮಾಡಿಸದೇ, KA-05 NR 0009 ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದರು. ಕಾರಿನ ವಾಸ್ತವಿಕ ನೋಂದಣಿ DL 1 CT 1515 ಆಗಿದ್ದು ಗುಜರಾತ್ ಮೂಲದ ರಬಾರ ಭಾವನಾಬೆನ್ ವಿನೋದ್ ಕುಮಾರ್ ಅವರ ಹೆಸರಿನಲ್ಲಿ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ದಾಖಲೆ ಪರಿಶೀಲನೆ ವೇಳೆ ಈ ಅಕ್ರಮ ಬೆಳವಣಿಗೆ ಪತ್ತೆಯಾಗಿದ್ದು, ಹಿಂದೆ ಆರ್ಟಿಒ ಅಧಿಕಾರಿಗಳು ರಿಕ್ಕಿ ರೈ ಅವರನ್ನು ಎರಡು ಬಾರಿ ದಂಡಿಸಿದರೂ, ಅವರು ಟ್ಯಾಕ್ಸ್ ಕಟ್ಟದೆ ಮತ್ತು ರಿಜಿಸ್ಟ್ರೇಷನ್ ಮಾಡಿಸದೇ ಕಾರು ಓಡಿಸುತ್ತಿದ್ದರು ಎಂದು ತಿಳಿಸಿದ್ದಾರೆ.
ರಿಕ್ಕಿ ರೈ ಕಾರನ್ನು ಎರಡು ಸ್ಥಳಗಳಲ್ಲಿ ಡ್ರೀಫ್ಟ್ ಮಾಡಿದ್ದು ವಿಡಿಯೋ ದೃಶ್ಯಗಳಿಂದ ಗೊತ್ತಾಗಿದೆ. ಮೊದಲು ಅನಿಲ್ ಕುಂಬ್ಳೆ ಸರ್ಕಲ್, ನಂತರ ಕಬ್ಬನ್ ಸರ್ಕಲ್. ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧಿಕಾರಿಗಳು ರಿಕ್ಕಿ ರೈಗೆ ನೋಟಿಸ್ ನೀಡಿದ್ದಾರೆ. ರಿಕ್ಕಿ ರೈ ತಾತ್ಕಾಲಿಕವಾಗಿ “ಹೊರ ರಾಜ್ಯದಲ್ಲಿದ್ದೇನೆ, ಬರುತ್ತೇನೆ” ಎಂದು ಪ್ರತಿಕ್ರಿಯಿಸಿದ್ದಾರೆ, ಆದರೆ ಎರಡು ದಿನಗಳಿಂದ ಸರಿಯಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಕಾರು ಪ್ರಸ್ತುತ ಪೊಲೀಸ್ ವಶದಲ್ಲಿರಿಸಲಾಗಿದೆ.
ಪೊಲೀಸರು ಈಗ ಡ್ರೀಫ್ಟ್ ಪ್ರಕರಣದ ಜೊತೆಗೆ ವಂಚನೆ ಪ್ರಕರಣಕ್ಕೂ ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ. ಐಷಾರಾಮಿ ಕಾರಿನ ನಕಲಿ ನೋಂದಣಿ ಮತ್ತು ಟ್ಯಾಕ್ಸ್ ತಪ್ಪಿಸುವ ಪ್ರಕರಣವು ಸಾರ್ವಜನಿಕರ ಗಮನ ಸೆಳೆದಿದ್ದು, ಇದು ಬೆಂಗಳೂರಿನ ಸಂಚಾರ ನಿಯಮ ಉಲ್ಲಂಘನೆಯ ಹೊಸ ಬೆಳವಣಿಗೆ ಎಂದು ಚಿತ್ರಿಸಲಾಗಿದೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am