ಬ್ರೇಕಿಂಗ್ ನ್ಯೂಸ್
28-03-26 02:56 pm HK News Staffer ಕ್ರೈಂ
ಚಿಕ್ಕಮಗಳೂರು, ಮಾರ್ಚ್ 28 : ಹಣ ದುರ್ಬಳಕೆ ಆರೋಪ ಮತ್ತು ನಿರಂತರ ಕಿರುಕುಳದಿಂದ ಮನ ನೊಂದು ಮಹಿಳಾ ಸಹಕಾರ ಸಂಘದ ಕಾರ್ಯದರ್ಶಿಯೊಬ್ಬರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಜಿಲ್ಲೆಯ ತರೀಕೆರೆಯ ಹೆಚ್. ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಉಷಾ (45) ಆತ್ಮಹತ್ಯೆಗೆ ಶರಣಾದ ಮಹಿಳೆ.
ಆತ್ಮಹತ್ಯೆಗೂ ಮುನ್ನ ಉಷಾ ವಿಡಿಯೋ ಮಾಡಿದ್ದು, “ನನ್ನ ಮೇಲೆ ನಡೆಯುತ್ತಿರುವ ಕಿರುಕುಳವನ್ನು ಸಹಿಸಲು ಸಾಧ್ಯವಾಗುತ್ತಿಲ್ಲ” ಎಂದು ಮನಕಲುಕುವ ರೀತಿಯಲ್ಲಿ ಹೇಳಿಕೊಂಡಿದ್ದಾರೆ. ಲೆಕ್ಕಪತ್ರ ಪುಸ್ತಕ ಕಳೆದುಹೋಗಿರುವುದು ತನ್ನಿಂದಾದ ತಪ್ಪು ಎಂದು ಅವರು ವಿಡಿಯೋದಲ್ಲಿ ಒಪ್ಪಿಕೊಂಡಿದ್ದಾರೆ.
2010ರಲ್ಲಿ ಪ್ರಾರಂಭವಾದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಉಷಾ ಸುಮಾರು 10 ವರ್ಷಗಳಿಂದ ಕಾರ್ಯದರ್ಶಿಯಾಗಿದ್ದರು. ಆದರೆ ಕಳೆದ ಕೆಲವು ವರ್ಷಗಳಿಂದ ಸಂಘದಲ್ಲಿ ಹಣ ದುರ್ಬಳಕೆ ನಡೆದಿದೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬರುತ್ತಿತ್ತು. ಇತ್ತೀಚೆಗೆ, 2025ರಲ್ಲಿ ಹೊಸ ಸದಸ್ಯರು ಸಂಘಕ್ಕೆ ಸೇರ್ಪಡೆಯಾದ ನಂತರ ಲೆಕ್ಕಪತ್ರಗಳ ಕುರಿತು ಪ್ರಶ್ನೆಗಳು ತೀವ್ರಗೊಂಡಿದ್ದವು.
ಈ ಹಿನ್ನೆಲೆ ನಡೆದ ಪಂಚಾಯತಿಯಲ್ಲಿ ಲೆಕ್ಕಪತ್ರ ಮಿಸ್ಸಿಂಗ್ ಆಗಿರುವುದನ್ನು ಉಷಾ ಒಪ್ಪಿಕೊಂಡಿದ್ದರು ಎಂದು ತಿಳಿದುಬಂದಿದೆ. ಇದರ ಬಳಿಕ ಅವರ ಮೇಲೆ ಒತ್ತಡ ಮತ್ತು ಆರೋಪಗಳು ಹೆಚ್ಚಾಗಿದ್ದು, ಮಾನಸಿಕವಾಗಿ ಕುಗ್ಗಿದ್ದ ಉಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಉಷಾ ಅವರ ಪತಿ ತರೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪತ್ನಿಯ ಸಾವಿಗೆ ಕೆಲವರ ನಿರಂತರ ಕಿರುಕುಳವೇ ನೇರ ಕಾರಣ ಎಂದು ಆರೋಪಿಸಿದ್ದಾರೆ. ಪತ್ನಿ ಎಲ್ಲಾ ಲೆಕ್ಕಪತ್ರಗಳನ್ನು ನೀಡಿದ್ದರೂ ಸಹ ಕುಟುಂಬದ ಮೇಲೆ ಜೀವ ಬೆದರಿಕೆ ಹಾಕಲಾಗುತ್ತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಉಷಾ ತಮ್ಮ ವಿಡಿಯೋದಲ್ಲೇ ಸುಮಾರು 10 ಮಂದಿಯ ಹೆಸರನ್ನು ಉಲ್ಲೇಖಿಸಿದ್ದು, ಹೆಚ್. ಮಲ್ಲೇನಹಳ್ಳಿ ಗ್ರಾಮದ ಎಚ್.ಎನ್. ಜಗದೀಶ್ (ದೊಡ್ಡೆರಿ), ದಕ್ಷಿಣಮೂರ್ತಿ, ಎಚ್.ಎಂ. ಯತೀಶ, ಲವಕುಮಾರ, ಕುಮಾರಸ್ವಾಮಿ, ವಿನಯ್ ಕುಮಾರ್, ದರ್ಶನ್ ಕುಮಾರ್ ಎಚ್.ಆರ್., ಮಂಜುನಾಥ, ರಾಜೇಶ್ ಬಿನ್ ಪಾಲಾಕ್ಷಿ ಸೇರಿದಂತೆ ಒಟ್ಟು 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ವಿಡಿಯೋ ಹಾಗೂ ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am