ಬ್ರೇಕಿಂಗ್ ನ್ಯೂಸ್
03-04-26 11:00 pm HK News Staffer ಕ್ರೈಂ
ಹೈದರಾಬಾದ್, ಏಪ್ರಿಲ್ 3 : ತೆಲಂಗಾಣದ ಹನ್ಮಕೊಂಡ ಜಿಲ್ಲೆ, ಐನವೋಲು ಮಂಡಲದ ಪುನ್ನೇಲು ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. ಪತಿಯೋರ್ವ ಗರ್ಭಿಣಿ ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಆದರೆ ಪತ್ನಿಯ ಕುಟುಂಬಸ್ಥರ ಅನುಮಾನದಿಂದ ಇದೀಗ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಫರ್ಹತ್ ಮತ್ತು ಆಕೆಯ ಇಬ್ಬರು ಮಕ್ಕಳಾದ ಉಮೇರಾ (8), ಆಯೇಷಾ (6) ಮೃತ ದುರ್ದೈವಿಗಳು. ಆರೋಪಿ ಅಜರುದ್ದೀನ್ಗೆ ಈ ಮೊದಲು ಉಮೇರಾ ಹಾಗೂ ಆಯೇಷಾ ಹೆಸರಿನ ಇಬ್ಬರು ಹೆಣ್ಣು ಮಕ್ಕಳಿದ್ದು ಪತ್ನಿ ಫರ್ಹತ್ ಮೂರನೇ ಭಾರಿಗೆ ಗರ್ಭಿಣಿಯಾಗಿದ್ದಳು. ಆದರೆ ಈ ಬಾರಿಯೂ ಪತ್ನಿಗೆ ಹೆಣ್ಣು ಮಗುವಾಗುತ್ತದೆ ಎಂಬ ಭಯದಿಂದ ಆತಂಕಗೊಂಡಿದ್ದ ಅಜರುದ್ದೀನ್ ಫರ್ಹತ್ಗೆ ಗರ್ಭಪಾತ ಮಾಡಲು ಒತ್ತಾಯಿಸಿದ್ದ. ಆದರೆ ಇದಕ್ಕೆ ಪತ್ನಿ ಒಪ್ಪಿರಲಿಲ್ಲ.
ಹೆಂಡತಿಯ ಈ ನಿರ್ಧಾರದಿಂದ ಅಜರುದ್ದೀನ್ ಕೋಪಗೊಂಡಿದ್ದ. ಹೀಗಾಗಿ ವಾರಂಗಲ್-ಖಮ್ಮಮ್ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ತಾನು ಕೆಲಸ ಮಾಡುತ್ತಿದ್ದ ಈಜು ಕೊಳಕ್ಕೆ ಹೆಂಡತಿ ಮತ್ತು ಮಕ್ಕಳನ್ನು ಕರೆದುಕೊಂಡು ಹೋಗಿದ್ದ. ಬಳಿಕ ಮೂವರನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾನೆ. ಆ ಬಳಿಕ ಇದೊಂದು ಆಕಸ್ಮಿಕ ಸಾವು ಎಂದು ಎಲ್ಲರನ್ನು ನಂಬಿಸಿದ್ದ. ಆದರೆ ಮೃತ ಮಹಿಳೆಯ ಕುಟುಂಬಸ್ಥರ ಅನುಮಾನದಿಂದಾಗಿ ಪೊಲೀಸರು ಅಜರುದ್ದೀನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿ ಕೃತ್ಯ ಬೆಳಕಿಗೆ ಬಂದಿದೆ.
ಇದೇ ರೀತಿ ಈ ಹಿಂದೆಯೂ ಎರಡು ಬಾರಿ ಪತ್ನಿಗೆ ಹೆಣ್ಣು ಮಗುವಾಗುವ ಭಯದಿಂದ ಅಜರುದ್ದೀನ್ ಗರ್ಭಪಾತ ಮಾಡಿಸಿದ್ದ. ಅದಾದ 4 ವರ್ಷಗಳ ನಂತರ ಆಕೆ ಮತ್ತೆ ಗರ್ಭಿಣಿಯಾಗಿದ್ದರು. ಆದರೆ ಈ ಬಾರಿಯೂ ಪತ್ನಿಗೆ ಹೆಣ್ಣು ಮಗುವೇ ಆಗುತ್ತದೆ ಎಂದು ಅನಿಸತೊಡಗಿತ್ತು. ಹೀಗಾಗಿ ಗರ್ಭಪಾತಕ್ಕೆ ಒತ್ತಾಯಿಸಿದ್ದು ಪತ್ನಿ ಒಪ್ಪದೇ ಇದ್ದುದಕ್ಕೆ ಅಜರುದ್ದೀನ್ ಭೀಕರ ಕೃತ್ಯ ಎಸಗಿದ್ದು ಪೊಲೀಸರ ತನಿಖೆಯ ವೇಳೆ ತಿಳಿದುಬಂದಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am