ಬ್ರೇಕಿಂಗ್ ನ್ಯೂಸ್
04-04-26 05:42 pm HK News Staffer ಕ್ರೈಂ
ನಾಸಿಕ್, ಏಪ್ರಿಲ್ 4: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ.
ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದರ್ಗುಡೆ ಕುಟುಂಬ, ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮಾರುತಿ XL6 ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡು ಬಾವಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ರೇಷ್ಮಾ ಸುನಿಲ್ ದರ್ಗುಡೆ (27), ಆಶಾ ಅನಿಲ್ ದರ್ಗುಡೆ (32), ಶ್ರಿಷ್ಟಿ ಅನಿಲ್ ದರ್ಗುಡೆ (14), ಶ್ರೇಯಸ್ ಅನಿಲ್ ದರ್ಗುಡೆ (11), ರಾಖಿ ಸುನಿಲ್ ದರ್ಗುಡೆ, ಶ್ರಾವಣಿ ಅನಿಲ್ ದರ್ಗುಡೆ (11), ಸಮೃದ್ಧಿ ರಾಜೇಂದ್ರ ದರ್ಗುಡೆ (7), ಮಾಧುರಿ ಅನಿಲ್ ದರ್ಗುಡೆ (13) ಮತ್ತು ಸುನಿಲ್ ದತ್ತು ದರ್ಗುಡೆ (32) ಮೃತಪಟ್ಟಿದ್ದಾರೆ. ಮೃತರೆಲ್ಲರೂ ದಿಂಡೋರಿ ತಾಲೂಕಿನ ಇಂದೋರ್ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡಗಳು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ಆರಂಭಿಸಿವೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ತಂಡವೂ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದೆ. ಆದರೆ ಸ್ಥಳದಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎನ್ನಲಾಗಿದೆ. ತಡರಾತ್ರಿ ವರೆಗೆ ರಕ್ಷಣಾ ಕಾರ್ಯಗಳು ಮುಂದುವರಿದಿದ್ದು, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ, ಕಾರು ನಿಯಂತ್ರಣ ಕಳೆದುಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಿಂಡೋರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm