ಬ್ರೇಕಿಂಗ್ ನ್ಯೂಸ್
08-04-26 04:29 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 8: ಮಂಗಳೂರಿನಿಂದ ಮೂಡುಬಿದ್ರೆ ತೆರಳುತ್ತಿದ್ದ ಕೆಕೆಬಿ ಟ್ರಾವೆಲ್ಸ್ ಹೆಸರಿನ ಎಕ್ಸ್ಪ್ರೆಸ್ ಬಸ್ ಮತ್ತು ಕಂಟೇನರ್ ಲಾರಿ ಗುರುಪುರ ಹೆದ್ದಾರಿ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು ಚಾಲಕರಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಹಲವು ಪ್ರಯಾಣಿಕರಿಗೂ ಗಾಯಗಳಾಗಿವೆ.
ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಓವರ್ ಟೇಕ್ ಮಾಡಲು ಬಂದ ಬಸ್ಸಿಗೆ ಕಂಟೇನರ್ ಲಾರಿ ಡಿಕ್ಕಿಯಾಗಿದ್ದು ಮುಂಭಾಗ ನಜ್ಜುಗುಜ್ಜಾಗಿದೆ. ಅಲ್ಲದೆ, ಲಾರಿಯ ಚಾಲಕ ಎಡೆಯಲ್ಲಿ ಸಿಕ್ಕಿಕೊಂಡು ಸ್ಥಳೀಯರ ಹರಸಾಹಸದ ಬಳಿಕ ಹೊರ ತೆಗೆಯಲಾಯಿತು.
ಇತರೇ ವಾಹನಗಳ ಚಾಲಕರು, ಪ್ರಯಾಣಿಕರು, ಸ್ಥಳೀಯರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಲ್ಲಿದ್ದ ಏಳು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಬಸ್ ಚಾಲಕ ಮತ್ತು ಲಾರಿಯ ಚಾಲಕರಿಗೆ ಕಾಲು ಮತ್ತು ಕೈಗೆ ಹೆಚ್ಚು ಪೆಟ್ಟು ಬಿದ್ದಿದೆ. ಹುಬ್ಬಳ್ಳಿ ಮೂಲದ ಕಂಟೇನರ್ ಲಾರಿಯಲ್ಲಿ ಭಾರೀ ಸರಕು ತುಂಬಿಕೊಂಡಿದ್ದು ಬಸ್ಸಿಗೆ ಗುದ್ದಿ ನಿಂತುಬಿಟ್ಟಿದೆ. ಇದರಿಂದಾಗಿ ಎರಡೂ ವಾಹನಗಳ ಮುಂಭಾಗ ಒಂದಕ್ಕೊಂದು ಅಂಟಿಕೊಂಡು ಜಖಂ ಆಗಿತ್ತು.
ಮಂಗಳೂರು- ಮೂಡುಬಿದ್ರೆ ನಡುವೆ ಚಲಿಸುವ ಖಾಸಗಿ ಬಸ್ಸುಗಳನ್ನು ಅತಿ ವೇಗದಿಂದ ಚಲಾಯಿಸುವುದು, ಪ್ರಯಾಣಿಕರ ಜೀವದ ಜೊತೆಗೆ ಚೆಲ್ಲಾಟ ಆಡುವ ರೀತಿ ಚಾಲಕರು ವರ್ತಿಸುತ್ತಿದ್ದಾರೆ. ಟೈಮ್ ಕೀಪಿಂಗ್ ಹೆಸರಲ್ಲಿ ಬಸ್ಸುಗಳ ಧಾವಂತಕ್ಕೆ ರಸ್ತೆಯಲ್ಲಿರುವ ಇತರೇ ವಾಹನಗಳು ಸೈಡ್ ಬಿಟ್ಟು ಕೊಡಲೇಬೇಕಾದ ಸ್ಥಿತಿಗೆ ಬರುತ್ತವೆ. ಈ ಧಾವಂತದಿಂದಾಗಿಯೇ ಈ ಅಪಘಾತ ಆಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm