ಬ್ರೇಕಿಂಗ್ ನ್ಯೂಸ್
08-04-26 05:53 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 8: ಇದೇ ಮೊದಲ ಬಾರಿಗೆ ಮಂಗಳೂರು ಪೊಲೀಸರು ಐದು ಜನ ವಿದ್ಯಾರ್ಥಿಗಳನ್ನು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಿದ್ದಾರೆ. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ತಾವಾಗಿಯೇ ರೂಮ್ ಮಾಡಿಕೊಂಡಿದ್ದು, ಅಲ್ಲಿಗೆ ಬರುತ್ತಿದ್ದ ಇತರರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕಮಿಷನರ್ ಸುಧೀರ್ ರೆಡ್ಡಿ, ವಿದ್ಯಾರ್ಥಿಯೊಬ್ಬನ ತಾಯಿ ತನ್ನ ಮಗನ ಕೈಯಲ್ಲಿ ಗಾಂಜಾ ಪ್ಯಾಕೆಟ್ ಸಿಕ್ಕಿರುವ ಬಗ್ಗೆ ನೀಡಿರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ, ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ತಾವಾಗಿಯೇ ರೂಮ್ ಮಾಡಿಕೊಂಡು ಡ್ರಗ್ಸ್ ಪೂರೈಕೆ ವಹಿವಾಟು ಮಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಬಂಧನ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.
ತನಿಖೆಯ ವೇಳೆ ಐದು ಜನ ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ರೂಮ್ ಮಾಡಿಕೊಂಡು ಅಲ್ಲಿಯೇ ಡ್ರಗ್ಸ್ ತಂದು ಪ್ಯಾಕಿಂಗ್ ಮಾಡುವುದು, ಬೇರೆಯವರಿಗೆ ಪೂರೈಕೆ ಮಾಡುತ್ತಿರುವುದು ಗೊತ್ತಾಗಿದೆ. ಇವರು ಮಂಗಳೂರಿನ ಆರು ಕಾಲೇಜಿನ 40 ಜನ ವಿದ್ಯಾರ್ಥಿಗಳು, ಹತ್ತು ಜನ ಹೊರಗಿನವರಿಗೆ ಪೂರೈಕೆ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರಿಗೆ ಕೌನ್ಸೆಲಿಂಗ್ ಮಾಡಲಾಗುವುದು.
ಎಲ್ಲ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ಇಟ್ಟುಕೊಳ್ಳಬೇಕು. ಅವರ ನಡತೆಯಲ್ಲಿ ಬದಲಾವಣೆ ಕಂಡುಬಂದರೆ, ಏನಾದರೂ ಸಮಸ್ಯೆ ಇದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಬೇಕು. ಯಾವುದೇ ಮಾಹಿತಿ, ಅನುಮಾನಗಳಿದ್ದಲ್ಲಿ ಸ್ಥಳೀಯ ಠಾಣೆಗೆ ತಿಳಿಸಬೇಕು. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ಹೊರಗಡೆ ರೂಮ್ ಮಾಡಿಕೊಳ್ಳುವುದನ್ನು ಮಾಡಿದರೆ ಯಾಕೆಂದು ಚೆಕ್ ಮಾಡಬೇಕು. ಆಮೂಲಕ ಇಂತಹ ಚಟುವಟಿಕೆಯನ್ನು ಮೂಲದಲ್ಲೇ ಹತ್ತಿಕ್ಕಲು ಸಾಧ್ಯವಾಗುತ್ತದೆ ಎಂದು ಕಮಿಷನರ್ ಪೋಷಕರಿಗೂ ಕಿವಿಮಾತು ಹೇಳಿದ್ದಾರೆ.
ಈಗ ಬಂಧಿತರಾದ ಐವರು ವಿದ್ಯಾರ್ಥಿಗಳು ಮೇಜರ್ ಆಗಿದ್ದು ಪಿಯುಸಿ ಕಲಿಯುವವರಲ್ಲ. ಅವರನ್ನು ಸದ್ಯಕ್ಕೆ ಬಂಧಿಸಲಾಗಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ಮಾಹಿತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm