ಬ್ರೇಕಿಂಗ್ ನ್ಯೂಸ್
10-04-26 11:06 pm HK News Staffer ಕ್ರೈಂ
ಲಕ್ನೋ, ಎಪ್ರಿಲ್ 10: ಪ್ರಯಾಗ್ರಾಜ್ ಕುಂಭಮೇಳದಲ್ಲಿ ಮಾಲೆ ಮಾರುತ್ತಲೇ ಸೋಶಿಯಲ್ ಮೀಡಿಯಾದಿಂದಾಗಿ ರಾತ್ರೋರಾತ್ರಿ ಖ್ಯಾತಿ ಗಳಿಸಿದ್ದ ಉತ್ತರ ಪ್ರದೇಶದ ಯುವತಿ ಮೊನಾಲಿಸಾ ಭೋಂಸ್ಲೆ ಅವರು ಇತ್ತೀಚೆಗೆ ಕೇರಳದಲ್ಲಿ ನಟ ಫರ್ಮನ್ ಖಾನ್ ಎಂಬವರನ್ನು ಮದುವೆಯಾಗಿದ್ದರು. ಮುಸ್ಲಿಂ ವ್ಯಕ್ತಿಯನ್ನು ವಿವಾಹವಾಗಿದ್ದಕ್ಕೆ ಟೀಕೆಯೂ ವ್ಯಕ್ತವಾಗಿತ್ತು. ಇದೀಗ ಅಂತರ್ಧರ್ಮೀಯ ವಿವಾಹ ಕಾನೂನು ಸಂಕಷ್ಟಕ್ಕೆ ಸಿಲುಕಿದೆ.
ಪೊಲೀಸರ ತನಿಖೆಯಲ್ಲಿ ಮೊನಾಲಿಸಾ ಅಪ್ರಾಪ್ತೆ ಎಂದು ದೃಢಪಟ್ಟ ನಂತರ ಮಧ್ಯಪ್ರದೇಶ ಪೊಲೀಸರು ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ ಅಡಿಯಲ್ಲಿ ಕ್ರಿಮಿನಲ್ ಪಿತೂರಿ ಮತ್ತು ಕಾನೂನುಬಾಹಿರ ವಿವಾಹಕ್ಕೆ ಸಂಬಂಧಿಸಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯಡಿ ಫರ್ಮಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ ತನಿಖೆಯ ನಂತರ, ಮೊನಾಲಿಸಾ ಮದುವೆ ಸಮಯದಲ್ಲಿ ಅಪ್ರಾಪ್ತೆಯಾಗಿದ್ದರು ಎಂಬುದು ದೃಢಪಟ್ಟಿದೆ. ಮೊನಾಲಿಸಾ ಮತ್ತು ಫರ್ಮಾನ್ ಖಾನ್ ಇತ್ತೀಚೆಗಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದು ಲವ್ ಜಿಹಾದ್ ಎಂಬ ಆರೋಪಗಳು ಕೇಳಿಬಂದಿದವು. ಆಕೆಯ ಹೆತ್ತವರು ತಮ್ಮ ಅಪ್ರಾಪ್ತ ಮಗಳ ತಲೆಕೆಡಿಸಿ ಫರ್ಮಾನ್ ಮದುವೆಯಾಗಿದ್ದಾಗಿ ಆರೋಪಿಸಿ ದೂರನ್ನೂ ನೀಡಿದ್ದರು. ಇದನ್ನೇ ಆಧಾರವಾಗಿಟ್ಟು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ತನಿಖೆ ನಡೆಸಿತ್ತು.
ಆಸ್ಪತ್ರೆ ದಾಖಲೆಗಳ ಪ್ರಕಾರ, ಮೋನಾಲಿಸಾ ಪಾರಧಿ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದು, ಡಿಸೆಂಬರ್ 30, 2009 ರಂದು ಜನಿಸಿದ್ದಾರೆ. ಮಾರ್ಚ್ 11, 2026 ರಂದು ಮದುವೆಯಾದ ಸಮಯದಲ್ಲಿ ಆಕೆಗೆ ಕೇವಲ 16 ವರ್ಷ ತುಂಬಿತ್ತು. ಕೇರಳದಲ್ಲಿ ಮದುವೆ ನೋಂದಣಿ ಮಾಡುವಾಗ ಮೊನಾಲಿಸಾ ಅವರನ್ನು ವಯಸ್ಕಳೆಂದು ತೋರಿಸಲು ನಕಲಿ ಜನನ ಪ್ರಮಾಣಪತ್ರವನ್ನು ಬಳಸಲಾಗಿದೆ. ಆಕೆಯನ್ನು 18 ವರ್ಷ ಮೇಲ್ಪಟ್ಟವಳೆಂದು ಬಿಂಬಿಸಿದ್ದರು. ಇದನ್ನು ಆಧರಿಸಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm