ಬ್ರೇಕಿಂಗ್ ನ್ಯೂಸ್
14-04-26 11:16 pm HK News Desk ಕ್ರೈಂ
ಬೆಂಗಳೂರು, ಎಪ್ರಿಲ್ 14: ತಾಯಿಯೊಬ್ಬಳು ತನ್ನ ಮಗಳನ್ನು ಉಸಿರುಗಟ್ಟಿಸಿ ಸಾಯಿಸಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಸಮೀಪದ ಇಮ್ಮಡಿಹಳ್ಳಿಯಲ್ಲಿ ನಡೆದಿದೆ.
ಇಮ್ಮಡಿಹಳ್ಳಿಯ ನಿವಾಸಿ ಸುವರ್ಣ (40) ಹಾಗೂ ಅವರ ಪುತ್ರಿ ಕಾರುಣ್ಯ (14) ಮೃತಪಟ್ಟ ದುರ್ದೈವಿಗಳು. ಮಂಗಳವಾರ ಬೆಳಗ್ಗೆ ಸುಮಾರು 11 ಗಂಟೆಯ ಸುಮಾರಿಗೆ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ವೇಳೆ ಸುವರ್ಣ ಅವರ ಅತ್ತೆ ಮತ್ತು ಮಾವ ಮನೆಯಲ್ಲೇ ಇದ್ದರು. ಮಗಳನ್ನು ಕೊಠಡಿಯೊಳಗೆ ಕರೆದೊಯ್ದ ಸುವರ್ಣ, ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾರೆ. ಬಹಳ ಹೊತ್ತಾದರೂ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ವೈಟ್ಫೀಲ್ಡ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಸುವರ್ಣ ಅವರು ಮೊದಲು ಮಗಳು ಕಾರುಣ್ಯಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ, ನಂತರ ಅದೇ ಕೋಣೆಯಲ್ಲಿ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುವರ್ಣ ಅವರ ಪತಿ ವೃತ್ತಿಯಲ್ಲಿ ಚಾಲಕರಾಗಿದ್ದು, ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲವಾದರೂ, ಪೊಲೀಸರು ಸುವರ್ಣ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಸಮಸ್ಯೆ ಅಥವಾ ಮಾನಸಿಕ ಖಿನ್ನತೆಯೇ ಈ ಘಟನೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ವೈಟ್ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm