ಬ್ರೇಕಿಂಗ್ ನ್ಯೂಸ್
16-04-26 12:35 pm HK News Staffer ಕ್ರೈಂ
ಬೆಂಗಳೂರು, ಎಪ್ರಿಲ್ 16: ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ವೃದ್ಧ ತಾಯಿಯನ್ನು ಬಹುಮಹಡಿ ಕಟ್ಟಡದ ಮೇಲಿನಿಂದ ತಳ್ಳಿ ಕೊಲೆ ಮಾಡಿರುವ ಕರುಣಾಜನಕ ಘಟನೆ ರಾಜರಾಜೇಶ್ವರಿ ನಗರದ ಬೆಮಲ್ ಲೇಔಟ್ನಲ್ಲಿ ಬುಧವಾರ ನಡೆದಿದೆ.
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಳಲುತ್ತಿದ್ದ ಸಾವಿತ್ರಮ್ಮ (72) ಎಂಬವರನ್ನು ನಾಲ್ಕು ವರ್ಷಗಳಿಂದ ನೋಡಿಕೊಂಡಿದ್ದ ಮಗನೇ ಬೇಸತ್ತು ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ. ಮಗ ವೆಂಕಟೇಶ್ (42) ನನ್ನು ಆರ್ಆರ್ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಹಾಸಿಗೆ ಹಿಡಿದಿದ್ದ ಅವರಿಗೆ ಮಗ ವೆಂಕಟೇಶ್ ಆರೈಕೆ ಮಾಡುತ್ತಿದ್ದ.
ಪ್ರಾಥಮಿಕ ತನಿಖೆಯ ಪ್ರಕಾರ, ಬುಧವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವೆಂಕಟೇಶ್ ತನ್ನ ತಾಯಿಯನ್ನು ಕಟ್ಟಡದ ಮೂರನೇ ಮಹಡಿಯಿಂದ ಕೆಳಕ್ಕೆ ತಳ್ಳಿದ್ದಾನೆ. ತೀವ್ರ ರಕ್ತಸ್ರಾವದಿಂದ ಸಾವಿತ್ರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಚಾರಣೆಯ ವೇಳೆ ಆರೋಪಿ ವೆಂಕಟೇಶ್, “ತಾಯಿ ಪಡುತ್ತಿದ್ದ ದೈಹಿಕ ನೋವು ಮತ್ತು ನರಕಯಾತನೆಯನ್ನು ನೋಡಲು ಸಾಧ್ಯವಾಗದೆ, ಅವರಿಗೆ ಈ ಅವಸ್ಥೆಯಿಂದ ಮುಕ್ತಿ ನೀಡಲು ಈ ಕೃತ್ಯ ಎಸಗಿದ್ದೇನೆ” ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.
ಘಟನಾ ಸ್ಥಳಕ್ಕೆ ಆರ್ಆರ್ ನಗರ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಆರೋಪಿ ವೆಂಕಟೇಶ್ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ ಪ್ರಕರಣ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm