ಬ್ರೇಕಿಂಗ್ ನ್ಯೂಸ್
17-04-26 06:48 pm HK News Staffer ಕ್ರೈಂ
ಮುಂಬೈ, ಎಪ್ರಿಲ್ 17: ನಾಸಿಕ್ ಟಿಸಿಎಸ್ ಐಟಿ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್, ಮತಾಂತರ ಚಟುವಟಿಕೆ ವಿವಾದ ತೀವ್ರ ಸ್ವರೂಪ ಪಡೆದಿದ್ದು, ವಿಶೇಷ ತನಿಖಾ ತಂಡದ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಬೆನ್ನುಬಿದ್ದಿದ್ದಾರೆ. ಇದೇ ವೇಳೆ, ಆರೋಪಿಗಳಲ್ಲಿ ಒಬ್ಬಳಾಗಿರುವ ನಿದಾ ಖಾನ್ ಎಂಬ ಯುವತಿ ತಾನು ಗರ್ಭಿಣಿಯಾಗಿದ್ದು ಬಂಧನ ಕ್ರಮದಿಂದ ವಿನಾಯ್ತಿ ನೀಡಬೇಕೆಂದು ನಿರೀಕ್ಷಣಾ ಜಾಮೀನು ಸಲ್ಲಿಸಿದ್ದಾರೆ.
ನಿದಾ ಖಾನ್ 2021ರಲ್ಲಿ ಟಿಸಿಎಸ್ ಕಂಪನಿ ಸೇರಿದ್ದು, ಈಗ 25ರ ಹರೆಯದ ಯುವತಿ. ಸಹೋದ್ಯೋಗಿ ಹಿಂದು ಯುವತಿಯರನ್ನು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಳೆಂದು ಹಲವರು ದೂರು ನೀಡಿದ್ದರಿಂದ ಒಂಬತ್ತು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಲೈಂಗಿಕ ಕಿರುಕುಳ, ಬ್ಲಾಕ್ಮೇಲ್, ಮತಾಂತರಕ್ಕೆ ಒತ್ತಡ ಇತ್ಯಾದಿ ಅಂಶಗಳಿದ್ದು, 2022ರ ಫೆಬ್ರವರಿಯಿಂದ 2026ರ ಮಾರ್ಚ್ ನಡುವೆ ಕೃತ್ಯ ಆಗಿರುವುದಾಗಿ ಹೇಳಿದ್ದಾರೆ.
ಎಚ್ಆರ್ ವಿಭಾಗದ ಹೆಡ್ ಅಶ್ವಿನಿ ಚೈನಾನಿ, ಸೀನಿಯರ್ ಉದ್ಯೋಗಿಗಳಾದ ಡ್ಯಾನಿಶ್ ಶೇಖ್, ತೌಸಿಫ್ ಅತ್ತಾರ್, ರಜಾ ಮೆಮನ್, ಶಾರುಕ್ ಖುರೇಷಿ, ಶಫಿ ಶೇಕ್, ಆಸಿಫ್ ಅಫ್ತಾಬ್ ಅನ್ಸಾರಿ ಎಂಬ ಏಳು ಮಂದಿಯನ್ನು ಬಂಧಿಸಲಾಗಿದ್ದು, ಇತರೇ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಕೆಲವು ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಇರಿಸಿಕೊಂಡು ವಂಚಿಸಿದ್ದರು. ಇನ್ನು ಕೆಲವರನ್ನು ಅಸಭ್ಯವಾಗಿ ಮುಟ್ಟುವುದು, ಅಶ್ಲೀಲವಾಗಿ ನಿಂದಿಸುವುದು ಮಾಡುತ್ತಿದ್ದರು. ಈ ಬಗ್ಗೆ ಎಚ್ಆರ್ ವಿಭಾಗಕ್ಕೆ ದೂರು ನೀಡಿದ್ದರೂ, ಕ್ರಮ ಕೈಗೊಳ್ಳುತ್ತಿರಲಿಲ್ಲ ಎಂದು ದೂರಿನಲ್ಲಿ ಹೇಳಿಕೊಂಡಿದ್ದರು.
ಕೆಲವು ಮುಸ್ಲಿಂ ಸೀನಿಯರ್ ಉದ್ಯೋಗಿಗಳು ತಮ್ಮ ಜೊತೆಗೆ ನಮಾಜ್ ಮಾಡುವಂತೆಯೂ ಒತ್ತಡ ಹೇರುತ್ತಿದ್ದರು ಎಂದೂ ಯುವತಿಯರು ಆರೋಪಿಸಿದ್ದಾರೆ. ಘಟನೆ ಬೆಳಕಿಗೆ ಬರುತ್ತಲೇ ಆರೋಪ ಹೊತ್ತ ಉದ್ಯೋಗಿಗಳನ್ನು ಟಿಸಿಎಸ್ ಕಂಪನಿ ಕೆಲಸದಿಂದ ವಜಾ ಮಾಡಿದ್ದು ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದೆ. ಇದಲ್ಲದೆ, ಗಂಭೀರ ಆರೋಪ ಎದುರಾಗಿದ್ದರಿಂದ ನಾಸಿಕ್ ಕಚೇರಿಯ ಎಲ್ಲ ಉದ್ಯೋಗಿಗಳಿಗೂ ವರ್ಕ್ ಫ್ರಂ ಹೋಮ್ ಕೆಲಸ ಮಾಡುವಂತೆ ಸೂಚಿಸಿದೆ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 09:10 pm
HK News Staffer
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm
ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದ ಪ್ರವಾಸಿಗರ ಜೀಪ...
17-05-26 08:14 pm
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ; ಎಸಿ ಕೋಚ...
17-05-26 05:51 pm
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm