ಬ್ರೇಕಿಂಗ್ ನ್ಯೂಸ್
18-04-26 03:50 pm HK News Staffer ಕ್ರೈಂ
ಮುಂಬೈ, ಎಪ್ರಿಲ್ 17: ನೂರಾರು ಹೆಣ್ಣು ಮಕ್ಕಳ ಲೈಂಗಿಕ ಶೋಷಣೆ ಮತ್ತು ಬ್ಲ್ಯಾಕ್ಮೇಲ್ ದಂಧೆ ನಡೆಸುತ್ತಿದ್ದ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು ಘಟನೆ ಸಂಬಂಧಿಸಿ ಪೊಲೀಸರು ಮೊಹಮ್ಮದ್ ತನ್ವೀರ್ (19) ಎಂಬಾತನನ್ನು ಬಂಧಿಸಿದ್ದಾರೆ.
180 ಅಪ್ರಾಪ್ತ ಬಾಲಕಿಯರನ್ನು ಜಾಲತಾಣದಲ್ಲಿ ಸಂಪರ್ಕಿಸಿ ಅವರನ್ನು ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕ ಮಾಡಿ ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡುತ್ತಿದ್ದರು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು 10 ಪೊಲೀಸ್ ಅಧಿಕಾರಿಗಳು ಮತ್ತು 36 ಸಿಬ್ಬಂದಿಯನ್ನು ಒಳಗೊಂಡಿದ್ದಾರೆ. ಘಟನೆ ಸಂಬಂಧಿಸಿ ಹಲವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಘಟನೆ ಬೆಳಕಿಗೆ ಬಂದಿತ್ತು.
ಮೂರು ದಿನಗಳ ಹಿಂದೆ ಒಮ್ಮಿಂದೊಮ್ಮೆಲೇ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ರಾಪ್ತ ಬಾಲಕಿಯರ ಅರೆನಗ್ನ ವಿಡಿಯೋಗಳು ವೈರಲ್ ಆಗಿದ್ದವು. ವಿಡಿಯೋ ಬರುತ್ತಲೇ ಅಚಲ್ಪುರ ಮತ್ತು ಪರತ್ವಾಡದಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಆರಂಭದಲ್ಲಿ ಸಂತ್ರಸ್ತರು ದೂರು ನೀಡಲು ಮುಂದೆ ಬರದೇ ಇದ್ದುದರಿಂದ, ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ವಾಟ್ಸಪ್ ಮತ್ತು ಸ್ನಾಪ್ ಚಾಟ್ ಮೂಲಕ ಆರೋಪಿಗಳು ಹರೆಯದ ಯುವತಿಯರನ್ನು ಸಂಪರ್ಕಿಸಿ ಪ್ರೀತಿಸುವ ನೆಪದಲ್ಲಿ ಜಾಲ ಬೀಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕೆಲವು ಹುಡುಗಿಯರನ್ನು ಮುಂಬೈ ಮತ್ತು ಪುಣೆಗೆ ಕರೆದೊಯ್ಯಲಾಗಿದೆ. ಬಿಜೆಪಿ ಸಂಸದ ಅನಿಲ್ ಬೋಂಡೆ, 180 ಯುವತಿಯರನ್ನು ಬಳಸಿ 350 ವಿಡಿಯೋಗಳನ್ನು ಮಾಡಿದ್ದು ಇದರ ಹಿಂದೆ ದೊಡ್ಡ ಜಾಲವೇ ಇದೆ, ಎಲ್ಲ ಆರೋಪಿಗಳನ್ನು ಬಂಧಿಸದೇ ಇದ್ದರೆ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ, ತನಿಖೆಗೆ ಎಸ್ಐಟಿ ರಚಿಸಿ ಆದೇಶ ಮಾಡಿತ್ತು.
ಇದೇ ವೇಳೆ, ಆರೋಪಿ ಮೊಹಮ್ಮದ್ ಅಯಾಜ್ ಮನೆ ಅಕ್ರಮ ಎಂಬುದು ಬಯಲಾಗಿದ್ದು ಪುರಸಭೆಯಿಂದ ಅಕ್ರಮ ತೆರವಿಗೆ ಕಾರ್ಯಾಚರಣೆ ನಡೆಸಲಾಗಿದೆ. ಮನೆ ಆವರಣದಲ್ಲಿ ಪೊಲೀಸ್ ಪಡೆಯನ್ನೂ ನಿಯೋಜಿಸಲಾಗಿದೆ. ಹೀಗಾಗಿ ಪ್ರಕರಣವು ರಾಜಕೀಯ ತಿರುವು ಪಡೆದಿದ್ದು ಆರೋಪಿ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷದಲ್ಲಿ ಸಕ್ರಿಯವಾಗಿದ್ದಾನೆ.
ಇದಲ್ಲದೆ, ಮಹಾರಾಷ್ಟ್ರ ಪೊಲೀಸರು ಉಜರ್ ಖಾನ್ ಎಂಬ ಮತ್ತೊಬ್ಬನನ್ನು ಬಂಧನ ಮಾಡಿದ್ದಾರೆ. ಪ್ರಮುಖ ಆರೋಪಿ ಅಯಾನ್ ಮೊಬೈಲ್ ಫೋನ್ನಿಂದ ವೀಡಿಯೊಗಳನ್ನು ಡೌನ್ಲೋಡ್ ಮಾಡಿ ನಂತರ ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದ ಎಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 09:10 pm
HK News Staffer
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm
ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದ ಪ್ರವಾಸಿಗರ ಜೀಪ...
17-05-26 08:14 pm
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ; ಎಸಿ ಕೋಚ...
17-05-26 05:51 pm
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm