ಬ್ರೇಕಿಂಗ್ ನ್ಯೂಸ್
19-04-26 10:20 am HK News Staffer ಕ್ರೈಂ
ಉಳ್ಳಾಲ, ಏ.19: ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದ ಬಾಲಕನೋರ್ವ ಪಕ್ಕದ ನಾಲೆಯೊಂದರ ಕೆಸರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ ನಡೆದಿದೆ.
ಅಂಬ್ಲಮೊಗರು ಗ್ರಾಮದ ಜರಿ ಹೌಸ್ ನಿವಾಸಿ ಶಿವರಾಮ್ ಅವರ ಪುತ್ರ ಸೃಜನ್(17) ಮೃತಪಟ್ಟ ಬಾಲಕ. ಸೃಜನ್ ಫ್ರಥಮ ಪಿಯುಸಿ ಮುಗಿಸಿದ್ದು ಬೇಸಿಗೆ ರಜೆ ಇದ್ದ ಕಾರಣ ಶನಿವಾರ ಮಧ್ಯಾಹ್ನ ತನ್ನ ಮೂವರು ಸ್ನೇಹಿತರೊಂದಿಗೆ ಅಂಬ್ಲಮೊಗರುವಿನ ಖಂಡಿಲ ಎಂಬಲ್ಲಿನ ಖಾಸಗಿ ವಿವಿಗೆ ಸೇರಿದ ಜಮೀನಿನ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದನೆನ್ನಲಾಗಿದೆ. ಬಳಿಕ ಕೈಕಾಲು ತೊಳೆಯಲು ಪಕ್ಕದ ನಾಲೆಯೊಂದಕ್ಕೆ ಸೃಜನ್ ಏಕಾಂಗಿಯಾಗಿ ಇಳಿದಿದ್ದು, ಈ ವೇಳೆ ಆತನ ಕಾಲುಗಳು ನಾಲೆಯ ಕೆಸರಿನಲ್ಲಿ ಮುಳುಗಿವೆ. ಸೃಜನ್ ನನ್ನು ಮತ್ತೋರ್ವ ಸ್ನೇಹಿತ ರಕ್ಷಿಸಲು ಪ್ರಯತ್ನಿಸಿದ್ದು ಆತನೂ ಕೆಸರಿನಲ್ಲಿ ಮುಳುಗುತ್ತಾನೆ ಎಂದಾಗ ಉಳಿದ ಸ್ನೇಹಿತರು ಆತನನ್ನ ಎಳೆದು ರಕ್ಷಿಸಿದ್ದಾರೆ.
ಘಟನೆಯಿಂದ ಆಘಾತಕ್ಕೊಳಗಾದ ಬಾಲಕರು ವಿಚಾರವನ್ನು ಯಾರಲ್ಲೂ ತಿಳಿಸದೆ ತಮ್ಮ ಮನೆ ಸೇರಿದ್ದರು. ರಾತ್ರಿ 8 ಗಂಟೆಯಾದರೂ ಸೃಜನ್ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿ ಸ್ನೇಹಿತರಲ್ಲಿ ವಿಚಾರಿಸಿದಾಗ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಲಭಿಸಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಕೊಣಾಜೆ ಪೊಲೀಸರು ಧಾವಿಸಿ ಸೃಜನ್ ಗಾಗಿ ನಾಲೆಯಲ್ಲಿ ಶೋಧ ನಡೆಸಿದ್ದಾರೆ. ನಾಲೆಯಲ್ಲಿ ಭಾರೀ ಹೂಳು ತುಂಬಿದ್ದರಿಂದ ರಕ್ಷಣಾ ಕಾರ್ಯವೂ ಕಷ್ಟವಾಗಿತ್ತು. ರಾತ್ರಿ ವೇಳೆ ನಿರ್ಜನ ಪ್ರದೇಶದಲ್ಲಿ ರಕ್ಷಣಾ ಕಾರ್ಯಕ್ಕೆ ಬೆಳಕಿನ ವ್ಯವಸ್ಥೆಯೂ ಇಲ್ಲದ ಕಾರಣ ಟಿಪ್ಪರ್ ಲಾರಿಗಳ ಹೆಡ್ ಲೈಟ್ ಸಹಾಯದಿಂದ ಮಧ್ಯರಾತ್ರಿ ವರೆಗೂ ಕಾರ್ಯಾಚರಣೆ ನಡೆಸಲಾಗಿತ್ತು. ಉತ್ತರ ಭಾರತದ ನುರಿತ ಕಾರ್ಮಿಕರು ಹರಸಾಹಸ ಪಟ್ಟು ಕೊನೆಗೂ ಮಧ್ಯರಾತ್ರಿ ಬಾಲಕನ ಮೃತದೇಹವನ್ನ ನಾಲೆಯಿಂದ ಮೇಲಕ್ಕೆತ್ತಿದ್ದಾರೆ.
ಮೃತ ಸೃಜನ್ ತಂದೆ ರಿಕ್ಷಾ ಚಾಲಕರಾಗಿದ್ದು, ತಾಯಿ ಜಯಲಕ್ಷ್ಮಿ ಅಂಬ್ಲಮೊಗರು ಗಾಂಧಿನಗರದ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿದ್ದಾರೆ. ದಂಪತಿಗೆ ಸೃಜನ್ ಹಿರಿಯ ಮಗನಾಗಿದ್ದು, ಮತ್ತೋರ್ವ ಮಗಳು ಇದ್ದಾಳೆ. ಕೊಣಾಜೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm