ಬ್ರೇಕಿಂಗ್ ನ್ಯೂಸ್
20-04-26 03:44 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 20: ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಉಲ್ಲೇಖಿಸಿ ಡಿಸಿಐಆರ್ ಎಸ್ಪಿ ಎಸ್.ಎಸ್ ಕಾಶಿ ಅವರು ಡಿಜಿಪಿ ಸಲೀಂ ಅವರಿಗೆ ಲಿಖಿತ ದೂರು ನೀಡಿದ್ದಾರೆ. ಮಾನಸಿಕ ಕಿರುಕುಳ, ದರ್ಪ ಹಾಗೂ ತಾರತಮ್ಯ ಆರೋಪಗಳನ್ನು ಮಾಡಿ ದೂರು ಸಲ್ಲಿಸಿದ್ದಾರೆ.
"ನೀವು 30 ನಿಮಿಷ ಸಮಯ ನೀಡಿದರೆ ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿಯ ಎಲ್ಲ ಕರ್ಮಕಾಂಡವನ್ನು ಸಂಪೂರ್ಣ ಬಯಲು ಮಾಡುತ್ತೇನೆ” ಎಂದು ದೂರಿನಲ್ಲಿ ಹೇಳಿದ್ದು ಪ್ರಕರಣ ಕುತೂಹಲ ತಂದಿದೆ. ಇಲಾಖೆಯಲ್ಲಿ ಅಧೀನ ಅಧಿಕಾರಿಗಳು ತಮ್ಮ ಮಾತಿನಂತೆ ಕೆಲಸ ಮಾಡದಿದ್ದರೆ ಮೆಮೊ ನೀಡುವುದರ ಮೂಲಕ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಇದಲ್ಲದೆ, ಕನ್ನಡಿಗ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕಾಶಿ, ಈ ಕುರಿತು ಹಲವು ಬಾರಿ ಲಿಖಿತ ದೂರು ನೀಡಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಐಪಿಎಸ್ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿ ಕೆಳಹಂತದ ಸಿಬ್ಬಂದಿ ಮೇಲೆ ದರ್ಪ, ತಾರತಮ್ಯ ಹಾಗೂ ಸ್ವಜನಪಕ್ಷಪಾತ ತೋರಿಸುತ್ತಿದ್ದಾರೆ. ವಿಶೇಷವಾಗಿ ಹೊರ ರಾಜ್ಯಗಳಿಂದ ಬಂದು ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲ ಅಧಿಕಾರಿಗಳು ಕನ್ನಡಿಗ ಅಧಿಕಾರಿಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದೂ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರು ಕಮಿಷನರ್ ವಿರುದ್ಧದ ಆರೋಪಗಳು, ಅಧೀನ ಸಿಬ್ಬಂದಿಗೆ ನೀಡಿದ ಕಿರುಕುಳ ಹಾಗೂ ಇತರೇ ದೌರ್ಜನ್ಯಗಳ ಕುರಿತಾಗಿ ವಿವರವಾಗಿ ಹೇಳಲು ಒಂದು ವಾರದೊಳಗೆ ಭೇಟಿಗೆ ಅವಕಾಶ ನೀಡುವಂತೆ ಡಿಜಿಪಿಗೆ ಎಸ್ಪಿ ಕಾಶಿ ಮನವಿ ಮಾಡಿದ್ದಾರೆ. ಈ ಬೆಳವಣಿಗೆ ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳತ್ತ ಎಲ್ಲರ ಗಮನ ಸೆಳೆದಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm