ಬ್ರೇಕಿಂಗ್ ನ್ಯೂಸ್
20-04-26 09:35 pm HK News Staffer ಕ್ರೈಂ
ಬೀದರ್, ಎಪ್ರಿಲ್ 20: ಬಿರು ಬಿಸಿಲಿನ ಝಳಕ್ಕೆ ಬೀದರ್ನಲ್ಲಿ 20 ವರ್ಷದ ಯುವಕನೊಬ್ಬ ಬಲಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಿಸಿಲಿನ ತಾಪಮಾನ ತಾಳಲಾರದೇ ಉತ್ತರ ಪ್ರದೇಶ ಮೂಲದ ಮಹ್ಮದ್ (20) ಎಂಬ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಬೀದರ್ ಜಿಲ್ಲೆಯ ಕಮಲಾನಗರ ಪಟ್ಟಣದಲ್ಲಿ ಎಪ್ರಿಲ್ 14ರಂದು ಘಟನೆ ನಡೆದಿದೆ. ಡಿಗ್ಗಿ - ಕಮಲಾನಗರ ರಸ್ತೆ ಮಧ್ಯೆ ಬಿರು ಬಿಸಿಲಿಗೆ ತಲೆಯೊಡ್ಡಿ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸಿಪಿಐ ಶ್ರೀಕಾಂತ್ ಅಲ್ಲಾಪುರೆ, ಪಿಎಸ್ಐ ಆಶಾ ರಾಠೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುಪಿ ಮೂಲದ ಮಿರ್ಜಾಪುರ ಪಲ್ಲಾದ ನಿವಾಸಿಯಾಗಿದ್ದು ನಡೆದುಕೊಂಡು ಹೋಗುವಾಗ ತಲೆ ಸುಸ್ತು ಬರುತ್ತಿದೆ ಎಂದು ದಾರಿಯಲ್ಲಿದ್ದ ಮೆಕ್ಯಾನಿಕ್ ಅಂಗಡಿಯಲ್ಲಿ ನೀರು ಕೇಳಿ ಕುಡಿದಿದ್ದ. ಚಕ್ಕರ್ ಬರುತ್ತಿದೆ ಎಂದು ಕೆಲಹೊತ್ತು ವಿಶ್ರಾಂತಿ ಪಡೆದು, ನಂತರ ಡಿಗ್ಗಿ ಗ್ರಾಮದ ಕಡೆ ನಡೆದು ತೆರಳಿದ್ದ. ಮೃತ ಯುವಕನ ತಂದೆ ಲಯಿಕ್ ಅಹ್ಮದ್ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಎಪ್ರಿಲ್ 12ರಂದು ಕಮಲಾನಗರ ಪಟ್ಟಣಕ್ಕೆ ಬಂದಿದ್ದ. 14ರಂದು ತರಕಾರಿ ತರಲೆಂದು ತೆರಳಿದ್ದ ವೇಳೆ ನಾಪತ್ತೆಯಾಗಿದ್ದು, 15ರಂದು ರಸ್ತೆ ಬದಿ ಬಿದ್ದು ಶವವಾಗಿ ಪತ್ತೆಯಾಗಿದ್ದಾನೆ. ಬೀದರಿನಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು ಜನಸಾಮಾನ್ಯರು ಹೊರಕ್ಕೆ ಬರಲಾಗದ ಸ್ಥಿತಿಗೆ ತಲುಪಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm