ಬ್ರೇಕಿಂಗ್ ನ್ಯೂಸ್
21-04-26 03:13 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 21: ರಾಜ್ಯ ಪೊಲೀಸ್ ಇಲಾಖೆಯ ಡಿಜಿಪಿ ಡಾ.ಎಂ.ಎ. ಸಲೀಂ ಮಂಗಳೂರಿಗೆ ಆಗಮಿಸಿದ್ದು ಮಂಗಳೂರು ಕಮಿಷನರ್ ಕಚೇರಿಯಲ್ಲಿ ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾರೆ.
ಇದೇ ವೇಳೆ, ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ಗಳಿಗೆ ಹತ್ತು ವರ್ಷದ ಸೇವೆ ಬಳಿಕ ವರ್ಗಾವಣೆಗೆ ಆದೇಶ ಆಗಿದ್ದರೂ, ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ರಿಲೀವ್ ಮಾಡದೇ ಇರುವುದರ ಬಗ್ಗೆ ಪೊಲೀಸ್ ಸಿಬಂದಿ ಕುಟುಂಬಸ್ಥರು ಡಿಜಿಪಿ ಸಲೀಂ ಅವರಿಗೆ ಮನವಿ ನೀಡಿ ಅಳಲು ಹೇಳಿಕೊಂಡಿದ್ದಾರೆ.
'ಕೋಮುಗಲಭೆ ಕಾರಣ ಕೊಟ್ಟು ಕಮಿಷನರ್ ಇಲ್ಲಿಂದ ರಿಲೀವ್ ಮಾಡಿಲ್ಲ. ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಬಂದು 10 ವರ್ಷದಿಂದ ಇದ್ದೀವಿ. ಊರಿನಲ್ಲಿ ವಯಸ್ಸಾದವರಿದ್ದಾರೆ. ನಮ್ಮನ್ನೇ ನಂಬಿಕೊಂಡವರು ಇದ್ದಾರೆ. ವರ್ಗಾವಣೆ ಆಗಿ ನಾಲ್ಕು ತಿಂಗಳಾದ್ರೂ ಬಿಟ್ಟುಕೊಟ್ಟಿಲ್ಲ. ಈಗ ಮಕ್ಕಳ ಸ್ಕೂಲ್ ಅಡ್ಮಿಷನ್ ಮಾಡಿಸಬೇಕಾ, ಬೇಡ್ವಾ ಅನ್ನುವ ಪರಿಸ್ಥಿತಿ ಇದೆ. ನಮಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಡಿಜಿಯವರಿಗೆ ಮನವಿ ಮಾಡಿದ್ದೇವೆ' ಎಂದು ಪೊಲೀಸ್ ಸಿಬಂದಿ ಕುಟುಂಬ ಸದಸ್ಯರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮನ್ನು ರಿಲೀವ್ ಮಾಡದೇ ಇದ್ರೆ ಪ್ರತಿಭಟನೆ ನಡೆಸುವುದಾಗಿ ಹೇಳಿದ ಅವರು, ಇಲ್ಲಿಂದ ಪಾದಯಾತ್ರೆ ಮೂಲಕ ತೆರಳಿ ಮತ್ತೆ ಡಿಜಿಪಿ, ಗೃಹ ಸಚಿವರನ್ನು ಭೇಟಿ ಆಗುತ್ತೇವೆ ಎಂದೂ ಹೇಳಿದರು.


ಜಿಲ್ಲೆಯ ಪೊಲೀಸ್ ಪ್ರಗತಿ ಪರಿಶೀಲನೆ ಬಳಿಕ ಮಾಧ್ಯಮಕ್ಕೆ ಮಾತನಾಡಿದ ಡಿಜಿಪಿ ಸಲೀಂ, ಕಳೆದ ಒಂದು ವರ್ಷದಿಂದ ಇಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಇದನ್ನೇ ಮುಂದುವರಿಸಿಕೊಂಡು ಹೋಗಿ ಅಂತ ಹೇಳಿದ್ದೇನೆ. ಉತ್ತರ ಕರ್ನಾಟಕ ಭಾಗದವರು ವರ್ಗಾವಣೆ ವಿಚಾರದಲ್ಲಿ ಮನವಿ ನೀಡಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. 15 ಶೇಕಡಾದಂತೆ ಹಂತ ಹಂತವಾಗಿ ರಿಲೀವ್ ಮಾಡಿ ಅಂತ ಹೇಳಿದ್ದೇನೆ ಎಂದು ಹೇಳಿದರು.
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ವಿರುದ್ಧ ಡಿಸಿಆರ್ ಇ ವಿಭಾಗದ ಎಸ್ಪಿ ಎಸ್.ಎಸ್.ಕಾಶಿ ದೂರು ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಡಿಜಿ ಸಲೀಂ ಉತ್ತರಿಸದೇ ಹೊರಟು ಹೋದರು.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm