ಬ್ರೇಕಿಂಗ್ ನ್ಯೂಸ್
24-04-26 04:37 pm HK News Staffer ಕ್ರೈಂ
ಬೆಳ್ತಂಗಡಿ, ಎಪ್ರಿಲ್ 24: ಯುವಕನೊಬ್ಬ ತಡರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದೇವರ ಮೂರ್ತಿ ಭಗ್ನಗೊಳಿಸಿದ ಘಟನೆ ವೇಣೂರು ಬಳಿಯ ಬಳಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ.
ಬುಧವಾರ ನಸುಕಿನ ಜಾವ ಎರಡು ಗಂಟೆ ವೇಳೆಗೆ ಘಟನೆ ನಡೆದಿದ್ದು ಕೃತ್ಯ ಎಸಗಿದವನನ್ನು ಯಶಸ್ (28) ಎಂದು ಗುರುತಿಸಲಾಗಿದೆ. ದೇವಸ್ಥಾನಕ್ಕೆ ಸಂಬಂಧಪಟ್ಟ ವ್ಯಕ್ತಿಯೊಬ್ಬರ ಮಗನಾಗಿರುವ ಈತ ಮನೆಯಲ್ಲಿ ಜಗಳ ಮಾಡಿಕೊಂಡು ಕೆಲವೊಮ್ಮೆ ದೇವಸ್ಥಾನದಲ್ಲೇ ಇರುತ್ತಿದ್ದನಂತೆ. ತಡರಾತ್ರಿ ಏಕಾಏಕಿ ಕಪ್ಪು ಬಣ್ಣದ ಥಾರ್ ಜೀಪ್ ನಲ್ಲಿ ಬಂದಿದ್ದು ವಾಹನವನ್ನು ದೇವಸ್ಥಾನ ಪಕ್ಕದ ಸುಬ್ರಹ್ಮಣ್ಯ ಭಟ್ ಎಂಬವರ ಮನೆಯ ಮುಂದೆ ನಿಲ್ಲಿಸಿದ್ದ.
ಬಳಿಕ 'ಎನನ್ ಬಚಾವ್ ಮಲ್ಪಿ' (ನನ್ನನ್ನು ರಕ್ಷಿಸಿ) ಎಂದು ತುಳುವಿನಲ್ಲಿ ಜೋರಾಗಿ ಕೂಗಾಡುತ್ತ ಅವರ ಮನೆಗೆ ನುಗ್ಗಲು ಯತ್ನಿಸಿದ್ದು ಆನಂತರ ಬಳಂಜ ದೇವಸ್ಥಾನಕ್ಕೆ ಸೇರಿದ ದೇವರ ಜಲಕದ ಕೆರೆಗೆ ಹಾರಿದ್ದ. ಅಲ್ಲಿಂದ ದೇವಸ್ಥಾನದ ಕಂಬದ ಮೂಲಕ ಮೇಲೆ ಹತ್ತಿ ಹಂಚು ತೆಗೆದು ದೇಗುಲದ ಒಳನುಗ್ಗಿದ್ದ. ಆನಂತರ, ಕೊಡಮಣಿತ್ತಾಯ ದೈವದ ಗುಡಿಗೆ ಇಳಿದು ಮಣೆ ಮಂಚದಲ್ಲಿದ್ದ ಘಂಟಾಮಣಿಯನ್ನು ತೆಗೆದು ಹೊರಗೆ ಎಸೆದಿದ್ದಾನೆ.


ಅಲ್ಲಿಂದ ದೇವಸ್ಥಾನದ ಗೋಪಾಲಕೃಷ್ಣ ದೇವರ ಗುಡಿಯೊಳಗೆ ನುಗ್ಗಿ ದೇವರ ವಿಗ್ರಹವನ್ನೂ ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾನೆ. ಗುಡಿಯೊಳಗಿದ್ದ ದೇವರ ಪರಿಕರಗಳನ್ನು ಎಸೆದು ವಿಕೃತವಾಗಿ ವರ್ತಿಸಿದ್ದಾನೆ. ಆಬಳಿಕ ವಾಹನವನ್ನು ಸುಬ್ರಹ್ಮಣ್ಯ ಭಟ್ ಅವರ ಮನೆಯಂಗಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಘಟನೆಯ ಬಗ್ಗೆ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಬಿ.ಶೀತಲ್ ಪಡಿವಾಳ್ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೇವಸ್ಥಾನಕ್ಕೆ ಸಂಬಂಧಪಟ್ಟವರು ಆತನಿಗೆ ಸ್ವಲ್ಪ ಮಾನಸಿಕ ಅಸ್ವಸ್ಥತೆ ಇದೆಯೆಂದು ಹೇಳುತ್ತಿದ್ದಾರೆ. ಇಂಜಿನಿಯರಿಂಗ್ ಮುಗಿಸಿ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದ ಯಶಸ್ ದಿಢೀರ್ ಆಗಿ ವಿಕೃತವಾಗಿ ವರ್ತಿಸಿದ್ದು ಸ್ಥಳೀಯರಲ್ಲಿ ಅಚ್ಚರಿ ಸೃಷ್ಟಿಸಿದೆ. ವೇಣೂರು ಪೊಲೀಸರು ತನಿಖೆ ಆರಂಭಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm