ಬ್ರೇಕಿಂಗ್ ನ್ಯೂಸ್
25-04-26 10:43 pm Mangalore Correspondent ಕ್ರೈಂ
ಮಂಗಳೂರು, ಎಪ್ರಿಲ್ 25: ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳೆಂದು ಫೋನ್ ಕರೆ ಮಾಡಿದ ಸೈಬರ್ ವಂಚಕರು ಮಂಗಳೂರಿನ 61 ವರ್ಷದ ವ್ಯಕ್ತಿಯೊಬ್ಬರಿಗೆ 2.07 ಕೋಟಿ ರೂಪಾಯಿ ವಂಚಿಸಿದ ಘಟನೆ ನಡೆದಿದೆ.
ಮಾರ್ಚ್ 31ರಂದು ಸಂತ್ರಸ್ತರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ‘ನ್ಯಾಷನಲ್ ಡೇಟಾ ಪ್ರೊಟೆಕ್ಷನ್ ಸೆಂಟರ್’ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. “ನಿಮ್ಮ ಗುರುತಿನ ಚೀಟಿ ಬಳಸಿ ಮುಂಬೈನಲ್ಲಿ ಸಿಮ್ ಕಾರ್ಡ್ ಖರೀದಿಸಲಾಗಿದೆ. ಅದರ ಮೂಲಕ ಅಶ್ಲೀಲ ವೀಡಿಯೊ ರವಾನೆ ಹಾಗೂ ಡ್ರಗ್ಸ್ ದಂಧೆ ನಡೆಸಲಾಗುತ್ತಿದೆ. ನಿಮ್ಮ ಮೇಲೆ ಮುಂಬೈನ ಕೊಲಾಬಾ ಠಾಣೆಯಲ್ಲಿ 50ಕ್ಕೂ ಹೆಚ್ಚು ಎಫ್ಐಆರ್ ದಾಖಲಾಗಿವೆ ಎಂದು ಹೇಳಿ ಬೆದರಿಸಿದ್ದಾನೆ.
ಬಳಿಕ ಎನ್ಐಎ ಅಧಿಕಾರಿ ಸಂದೀಪ್ ರಾವ್, ಎಡಿಜಿಪಿ ಮ್ಯಾಥ್ಯೂ ಮತ್ತು ಇಡಿ ಅಧಿಕಾರಿ ವಿಲಾಸ್ ರಾವ್ ಪಟೇಲ್ ಎಂಬ ಹೆಸರಿನಲ್ಲಿ ವಂಚಕರು ವಾಟ್ಸಪ್ ಕರೆ ಮಾಡಿದ್ದು ಸಂತ್ರಸ್ತ ವ್ಯಕ್ತಿಯನ್ನು ಭಯಭೀತರನ್ನಾಗಿಸಿದ್ದಾರೆ. ನೀವು ದೊಡ್ಡ ಕ್ರಿಮಿನಲ್, ಭಯೋತ್ಪಾದಕ ಚಟುವಟಿಕೆಯಲ್ಲಿ ನಿಮ್ಮ ಹೆಸರಿದೆ ಎಂದು ಹೆದರಿಸಿ ಪ್ರಕರಣದಿಂದ ಮುಕ್ತನಾಗಲು ಹಣವನ್ನು ಬೇರೆ ಖಾತೆಗಳಲ್ಲಿ ಡಿಪಾಸಿಟ್ ಇಡುವಂತೆ ಬೇಡಿಕೆ ಇಟ್ಟಿದ್ದಾರೆ.
ಇದರಿಂದ ಹೆದರಿದ ಸಂತ್ರಸ್ತ ವ್ಯಕ್ತಿ ಹಣ ಡಿಪಾಸಿಟ್ ಮಾಡಲು ಮುಂದಾಗಿದ್ದು ಏಪ್ರಿಲ್ 7ರಿಂದ 18ರ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಹಣ ರವಾನಿಸಿದ್ದಾರೆ. ಒಟ್ಟು ₹2,07,04,600 ಹಣವನ್ನು ಆನ್ಲೈನ್ ಮೂಲಕ ವರ್ಗಾಯಿಸಿದ್ದು ಆನಂತರ ಹಣ ಕೇಳಿದಾಗ, ಹಣ ಹಿಂತಿರುಗಿ ಬರಲಿಲ್ಲ. ಕೊನೆಗೆ ತಾನು ಮೋಸ ಹೋಗಿರುವ ಸಂಶಯದಲ್ಲಿ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm