ಬ್ರೇಕಿಂಗ್ ನ್ಯೂಸ್
25-04-26 10:43 pm Mangalore Correspondent ಕ್ರೈಂ
ಮಂಗಳೂರು, ಎಪ್ರಿಲ್ 25: ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳೆಂದು ಫೋನ್ ಕರೆ ಮಾಡಿದ ಸೈಬರ್ ವಂಚಕರು ಮಂಗಳೂರಿನ 61 ವರ್ಷದ ವ್ಯಕ್ತಿಯೊಬ್ಬರಿಗೆ 2.07 ಕೋಟಿ ರೂಪಾಯಿ ವಂಚಿಸಿದ ಘಟನೆ ನಡೆದಿದೆ.
ಮಾರ್ಚ್ 31ರಂದು ಸಂತ್ರಸ್ತರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ‘ನ್ಯಾಷನಲ್ ಡೇಟಾ ಪ್ರೊಟೆಕ್ಷನ್ ಸೆಂಟರ್’ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದಾನೆ. “ನಿಮ್ಮ ಗುರುತಿನ ಚೀಟಿ ಬಳಸಿ ಮುಂಬೈನಲ್ಲಿ ಸಿಮ್ ಕಾರ್ಡ್ ಖರೀದಿಸಲಾಗಿದೆ. ಅದರ ಮೂಲಕ ಅಶ್ಲೀಲ ವೀಡಿಯೊ ರವಾನೆ ಹಾಗೂ ಡ್ರಗ್ಸ್ ದಂಧೆ ನಡೆಸಲಾಗುತ್ತಿದೆ. ನಿಮ್ಮ ಮೇಲೆ ಮುಂಬೈನ ಕೊಲಾಬಾ ಠಾಣೆಯಲ್ಲಿ 50ಕ್ಕೂ ಹೆಚ್ಚು ಎಫ್ಐಆರ್ ದಾಖಲಾಗಿವೆ ಎಂದು ಹೇಳಿ ಬೆದರಿಸಿದ್ದಾನೆ.
ಬಳಿಕ ಎನ್ಐಎ ಅಧಿಕಾರಿ ಸಂದೀಪ್ ರಾವ್, ಎಡಿಜಿಪಿ ಮ್ಯಾಥ್ಯೂ ಮತ್ತು ಇಡಿ ಅಧಿಕಾರಿ ವಿಲಾಸ್ ರಾವ್ ಪಟೇಲ್ ಎಂಬ ಹೆಸರಿನಲ್ಲಿ ವಂಚಕರು ವಾಟ್ಸಪ್ ಕರೆ ಮಾಡಿದ್ದು ಸಂತ್ರಸ್ತ ವ್ಯಕ್ತಿಯನ್ನು ಭಯಭೀತರನ್ನಾಗಿಸಿದ್ದಾರೆ. ನೀವು ದೊಡ್ಡ ಕ್ರಿಮಿನಲ್, ಭಯೋತ್ಪಾದಕ ಚಟುವಟಿಕೆಯಲ್ಲಿ ನಿಮ್ಮ ಹೆಸರಿದೆ ಎಂದು ಹೆದರಿಸಿ ಪ್ರಕರಣದಿಂದ ಮುಕ್ತನಾಗಲು ಹಣವನ್ನು ಬೇರೆ ಖಾತೆಗಳಲ್ಲಿ ಡಿಪಾಸಿಟ್ ಇಡುವಂತೆ ಬೇಡಿಕೆ ಇಟ್ಟಿದ್ದಾರೆ.
ಇದರಿಂದ ಹೆದರಿದ ಸಂತ್ರಸ್ತ ವ್ಯಕ್ತಿ ಹಣ ಡಿಪಾಸಿಟ್ ಮಾಡಲು ಮುಂದಾಗಿದ್ದು ಏಪ್ರಿಲ್ 7ರಿಂದ 18ರ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಹಣ ರವಾನಿಸಿದ್ದಾರೆ. ಒಟ್ಟು ₹2,07,04,600 ಹಣವನ್ನು ಆನ್ಲೈನ್ ಮೂಲಕ ವರ್ಗಾಯಿಸಿದ್ದು ಆನಂತರ ಹಣ ಕೇಳಿದಾಗ, ಹಣ ಹಿಂತಿರುಗಿ ಬರಲಿಲ್ಲ. ಕೊನೆಗೆ ತಾನು ಮೋಸ ಹೋಗಿರುವ ಸಂಶಯದಲ್ಲಿ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm