ಬ್ರೇಕಿಂಗ್ ನ್ಯೂಸ್
28-04-26 02:36 pm Mangaluru Staffer ಕ್ರೈಂ
ಮಂಗಳೂರು, ಎಪ್ರಿಲ್ 28: ಉಳ್ಳಾಲ ಮುಕ್ಕಚ್ಚೇರಿ ನಿವಾಸಿ, ಬಿಜೆಪಿ ಕಾರ್ಯಕರ್ತನಾಗಿದ್ದ ಜುಬೇರ್ ಎಂಬವರನ್ನು ಕಡಿದು ಕೊಲೆಗೈದ ಪ್ರಕರಣದಲ್ಲಿ ಆರೋಪಿಗಳ ಪಾತ್ರ ಸಾಬೀತಾಗಿದ್ದು, ಪ್ರಧಾನ ಅಪರಾಧಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅಬ್ದುಲ್ ರಹಿಮಾನ್ ಸುಹೇಲ್ (23) ಶಿಕ್ಷೆಗೊಳಗಾದ ಅಪರಾಧಿ. ಇನ್ನುಳಿದ ಆರೋಪಿಗಳಿಗೆ 2022ರಲ್ಲಿ ಶಿಕ್ಷೆ ಪ್ರಕಟವಾಗಿತ್ತು.
2017ರ ಅಕ್ಟೋಬರ್ 4ರಂದು ರಾತ್ರಿ 7.55ಕ್ಕೆ ಮುಕ್ಕಚ್ಚೇರಿ ಮಸೀದಿ ಎದುರು ಜುಬೇರ್ ಎಂಬವರು ಗೆಳೆಯ ಇಲಿಯಾಸ್ ಎಂಬವರ ಜತೆ ನಿಂತು ಮಾತನಾಡುತ್ತಿದ್ದಾಗ ಆರೋಪಿಗಳಾದ ಸುಹೇಲ್, ನಿಜಾಮ್, ಮುಸ್ತಾಫ, ಅಲ್ತಾಫ್, ಆಸಿಫ್, ನಾಸೀರ್ ತಲ್ವಾರ್ ಕತ್ತಿ ಹಿಡಿದು ಬಂದು ಜುಬೇರ್ಗೆ ಕಡಿದು ಕೊಲೆ ಮಾಡಿದ್ದರು. ತಡೆಯಲು ಬಂದ ಇಲಿಯಾಸ್ ಅವರಿಗೂ ತಲವಾರಿನಿಂದ ಕಡಿದು ತೀವ್ರ ಗಾಯ ಮಾಡಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
2022ರ ಎಪ್ರಿಲ್ 20ರಂದು ಜುಬೇರ್ ಕೊಲೆ ಪ್ರಕರಣವನ್ನು ಸಮಗ್ರ ವಿಚಾರಣೆ ನಡೆಸಿದ್ದ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ ಜಕಾತಿ ಅವರು ಅಪರಾಧ ಸಾಬೀತುಪಡಿಸಿ ತೀರ್ಪು ನೀಡಿದ್ದರು. 2ರಿಂದ 4ನೇ ಆರೋಪಿಗಳಾದ ನಿಜಾಮ್, ತಾಜುದ್ದೀನ್, ಮುಸ್ತಾಫ ಎಂಬವರಿಗೆ ಜೀವಾವಧಿ ಶಿಕ್ಷೆ ನೀಡಿದ್ದರೆ, 6ನೇ ಆರೋಪಿ ಅಸಿಫ್ ಮತ್ತು 7ನೇ ಆರೋಪಿ ನಾಸೀರ್ ಖುಲಾಸೆಗೊಂಡಿದ್ದಾಗಿ ತೀರ್ಪು ಪ್ರಕಟಿಸಿದ್ದರು. 5ನೇ ಆರೋಪಿ ಅಲ್ತಾಫ್ ಈ ನಡುವೆ ಮೃತಪಟ್ಟಿದ್ದ.
ತಲೆಮರೆಸಿಕೊಂಡಿದ್ದ ಆರೋಪಿ ಸುಹೇಲ್
ಆದರೆ ಪ್ರಕರಣದಲ್ಲಿ ಜಾಮೀನು ಪಡೆದು ವಿಚಾರಣೆಯ ಅಂತಿಮ ಹಂತದಲ್ಲಿ ಪ್ರಮುಖ ಆರೋಪಿ ಮುಕ್ಕಚ್ಚೇರಿ ನಿವಾಸಿ ಅಬ್ದುಲ್ ರಹಿಮಾನ್ ಸುಹೇಲ್ ತಲೆಮರೆಸಿಕೊಂಡಿದ್ದ. ನಾಲ್ಕು ತಿಂಗಳ ಹಿಂದೆ ಆತನನ್ನು ಬಂಧಿಸಿದ್ದು ಇದೀಗ ವಿಚಾರಣೆ ನಡೆಸಿದೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಸುನೀತಾ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಮೋಹನ್ ವಾದ ಮಂಡಿಸಿರುತ್ತಾರೆ. ಪ್ರಕರಣದಲ್ಲಿ ಉಳ್ಳಾಲರ ಆಗಿನ ಇನ್ಸ್ ಪೆಕ್ಟರ್ ಕೆ.ಆರ್. ಗೋಪಿಕೃಷ್ಣ ತನಿಖಾಧಿಕಾರಿಯಾಗಿ ಆರೋಪ ಪಟ್ಟಿ ಸಲ್ಲಿಸಿದ್ದರು.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm