ಬ್ರೇಕಿಂಗ್ ನ್ಯೂಸ್
30-04-26 10:14 am HK News Staffer ಕ್ರೈಂ
ಬೆಂಗಳೂರು, ಏ 29: ಅಮ್ಮನ ಜೊತೆ ಬಟ್ಟೆ ಖರೀದಿಸಲು ಶಿವಾಜಿನಗರಕ್ಕೆ ಬಂದಿದ್ದ ಬಾಲಕ ದ್ವಿಚಕ್ರ ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು, ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ಮಗನ ಸಾವು ಕಣ್ಣಾರೆ ಕಂಡ ತಾಯಿ ಕುಸಿದು ಬಿದ್ದು ಆಸ್ಪತ್ರೆ ಪಾಲಾಗಿದ್ದಾರೆ.
ಸಯ್ಯದ್ ಸುಫಿಯಾನ್ (17) ಪ್ರಾಣ ಕಳೆದುಕೊಂಡ ಮಗ. ತಾಯಿ ಉಮೇ ಸಲ್ಮಾ ಆರೋಗ್ಯದಲ್ಲಿ ಏರುಪೇರಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯಮ ವರ್ಗದ ಸಯ್ಯದ್ ಕಾಡುಗೊಂಡನಹಳ್ಳಿ ವೆಂಕಟಾಪುರದಲ್ಲಿ ನೆಲೆಸಿದ್ದ. ಪ್ರಥಮ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ದ್ವಿತೀಯ ಪಿಯುಸಿ ವ್ಯಾಸಂಗಕ್ಕಾಗಿ ಸನ್ನದ್ಧನಾಗಿದ್ದ. ಕಾಲೇಜಿಗೆ ಹೋಗಲು ಬಟ್ಟೆ ಖರೀದಿಸಲು ಆಕ್ಟಿವಾ ಹೊಂಡಾ ವಾಹನದಲ್ಲಿ ಅಮ್ಮ ಹಾಗೂ ಸೋದರ ಸಂಬಂಧಿ ಜೊತೆ ಶಿವಾಜಿನಗರಕ್ಕೆ ಬಂದಿದ್ದ. ಬಟ್ಟೆ ಖರೀದಿಗಾಗಿ ಜನಜಂಗುಳಿ ಪ್ರದೇಶದಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ಗೆ ಮುಂದಾಗಿದ್ದ. ಇದೇ ವೇಳೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿಯಿತು.
ಕಣ್ಣೆದುರೇ ಮಗನ ಸಾವು ಕಂಡ ತಾಯಿಗೆ ಆಘಾತ: ಈ ವೇಳೆ ವಿದ್ಯುತ್ ಕಂಬಕ್ಕೆ ತಾಗಿಕೊಂಡಿದ್ದ ವೈರ್ ನೇರವಾಗಿ ಸೈಯದ್ಗೆ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕ್ಷರ್ಣಾಧದಲ್ಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳೀಯರ ನೆರವಿನಿಂದ ಬಾಲಕನನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಹೇಳುತ್ತಿದ್ದಂತೆ ತಾಯಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಂಬಂಧಿಗಳು ತಿಳಿಸಿದ್ದಾರೆ.
ಸಯ್ಯದ್ ತಂದೆ ಶಫಿವುಲ್ಲಾ ಅವರು ಆಟೋ ಮೊಬೈಲ್ ಶಾಪ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಉಮೇ ಸಲ್ಮಾ ಗೃಹಿಣಿಯಾಗಿದ್ದಾರೆ. ಅವರಿಗೆ ಆರು ವರ್ಷದ ಪುತ್ರಿಯೂ ಇದ್ದಾಳೆ. ಪೋಷಕರಿಗೆ ಸಯ್ಯದ್ನನ್ನು ಚೆನ್ನಾಗಿ ಓದಿಸಿ ಇಂಜಿನಿಯರಿಂಗ್ ಓದಿಸುವ ಆಸೆ ಇತ್ತು. ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿಯುವ ಕೆಲ ಕ್ಷಣಗಳ ಹಿಂದೆ ಈ ದುರಂತ ಸಂಭವಿಸಿದೆ. ಸುಮಾರು 50 ಮೀಟರ್ ಅಂತರದಲ್ಲಿ ಈ ಘಟನೆ ನಡೆದಿದೆ ಎಂದು ಸಂಬಂಧಿ ಅಯಾನ್ ತಿಳಿಸಿದ್ದಾರೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am