ಬ್ರೇಕಿಂಗ್ ನ್ಯೂಸ್
30-04-26 10:14 am HK News Staffer ಕ್ರೈಂ
ಬೆಂಗಳೂರು, ಏ 29: ಅಮ್ಮನ ಜೊತೆ ಬಟ್ಟೆ ಖರೀದಿಸಲು ಶಿವಾಜಿನಗರಕ್ಕೆ ಬಂದಿದ್ದ ಬಾಲಕ ದ್ವಿಚಕ್ರ ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು, ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ಮಗನ ಸಾವು ಕಣ್ಣಾರೆ ಕಂಡ ತಾಯಿ ಕುಸಿದು ಬಿದ್ದು ಆಸ್ಪತ್ರೆ ಪಾಲಾಗಿದ್ದಾರೆ.
ಸಯ್ಯದ್ ಸುಫಿಯಾನ್ (17) ಪ್ರಾಣ ಕಳೆದುಕೊಂಡ ಮಗ. ತಾಯಿ ಉಮೇ ಸಲ್ಮಾ ಆರೋಗ್ಯದಲ್ಲಿ ಏರುಪೇರಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯಮ ವರ್ಗದ ಸಯ್ಯದ್ ಕಾಡುಗೊಂಡನಹಳ್ಳಿ ವೆಂಕಟಾಪುರದಲ್ಲಿ ನೆಲೆಸಿದ್ದ. ಪ್ರಥಮ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ದ್ವಿತೀಯ ಪಿಯುಸಿ ವ್ಯಾಸಂಗಕ್ಕಾಗಿ ಸನ್ನದ್ಧನಾಗಿದ್ದ. ಕಾಲೇಜಿಗೆ ಹೋಗಲು ಬಟ್ಟೆ ಖರೀದಿಸಲು ಆಕ್ಟಿವಾ ಹೊಂಡಾ ವಾಹನದಲ್ಲಿ ಅಮ್ಮ ಹಾಗೂ ಸೋದರ ಸಂಬಂಧಿ ಜೊತೆ ಶಿವಾಜಿನಗರಕ್ಕೆ ಬಂದಿದ್ದ. ಬಟ್ಟೆ ಖರೀದಿಗಾಗಿ ಜನಜಂಗುಳಿ ಪ್ರದೇಶದಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ಗೆ ಮುಂದಾಗಿದ್ದ. ಇದೇ ವೇಳೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿಯಿತು.
ಕಣ್ಣೆದುರೇ ಮಗನ ಸಾವು ಕಂಡ ತಾಯಿಗೆ ಆಘಾತ: ಈ ವೇಳೆ ವಿದ್ಯುತ್ ಕಂಬಕ್ಕೆ ತಾಗಿಕೊಂಡಿದ್ದ ವೈರ್ ನೇರವಾಗಿ ಸೈಯದ್ಗೆ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕ್ಷರ್ಣಾಧದಲ್ಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳೀಯರ ನೆರವಿನಿಂದ ಬಾಲಕನನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಹೇಳುತ್ತಿದ್ದಂತೆ ತಾಯಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಂಬಂಧಿಗಳು ತಿಳಿಸಿದ್ದಾರೆ.
ಸಯ್ಯದ್ ತಂದೆ ಶಫಿವುಲ್ಲಾ ಅವರು ಆಟೋ ಮೊಬೈಲ್ ಶಾಪ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಉಮೇ ಸಲ್ಮಾ ಗೃಹಿಣಿಯಾಗಿದ್ದಾರೆ. ಅವರಿಗೆ ಆರು ವರ್ಷದ ಪುತ್ರಿಯೂ ಇದ್ದಾಳೆ. ಪೋಷಕರಿಗೆ ಸಯ್ಯದ್ನನ್ನು ಚೆನ್ನಾಗಿ ಓದಿಸಿ ಇಂಜಿನಿಯರಿಂಗ್ ಓದಿಸುವ ಆಸೆ ಇತ್ತು. ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿಯುವ ಕೆಲ ಕ್ಷಣಗಳ ಹಿಂದೆ ಈ ದುರಂತ ಸಂಭವಿಸಿದೆ. ಸುಮಾರು 50 ಮೀಟರ್ ಅಂತರದಲ್ಲಿ ಈ ಘಟನೆ ನಡೆದಿದೆ ಎಂದು ಸಂಬಂಧಿ ಅಯಾನ್ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am