ಬ್ರೇಕಿಂಗ್ ನ್ಯೂಸ್
30-04-26 04:30 pm HK News Staffer ಕ್ರೈಂ
ನವದೆಹಲಿ, ಎಪ್ರಿಲ್ 30: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಮರು ತನಿಖೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಎಪ್ರಿಲ್ 29ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಹೇಳಿದ್ದಲ್ಲದೆ, ರಾಜ್ಯ ಸರ್ಕಾರ ಮತ್ತು ಸಿಬಿಐ ತನಿಖಾ ತಂಡಕ್ಕೆ ನೋಟಿಸ್ ಜಾರಿ ಮಾಡಿದೆ.
ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿತು. ಕುಸುಮಾವತಿ ಗೌಡ ಪರ ವಾದ ಮಂಡಿಸಿದ ವಕೀಲರು ಪ್ರಕರಣದಲ್ಲಿ ಹಲವು ಸಾಕ್ಷಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ರಾಜ್ಯ ಸರ್ಕಾರ ಮತ್ತು ಸಿಬಿಐ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿ, ಗಂಭೀರ ಪ್ರಕರಣದಲ್ಲಿ ಇಷ್ಟೊಂದು ನಿರಾಸಕ್ತಿ ವಹಿಸುವುದು ಸರಿಯಲ್ಲ ಎಂದು ಹೇಳಿದ್ದಲ್ಲದೆ, ರಾಜ್ಯ ಸರ್ಕಾರದ ಪರವಾಗಿ ಮತ್ತು ಸಿಬಿಐ ವಕೀಲರು ಜುಲೈ 14ರೊಳಗೆ ಲಿಖಿತ ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರ ಮತ್ತು ಸಿಬಿಐ ಪರ ವಕೀಲರು ಹಾಜರಿರಲಿಲ್ಲ. ಇದೇ ವೇಳೆ, ಸೌಜನ್ಯಾ ಪರ ವಕೀಲರು ಪ್ರಕರಣದ ಪ್ರಮುಖ ಸಾಕ್ಷ್ಯಗಳು ಮತ್ತು ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟಿನ ಗಮನಕ್ಕೆ ತಂದಿದ್ದಾರೆ.
ಇದರಂತೆ, ಪ್ರಕರಣದ ಎಲ್ಲ ಸಾಕ್ಷಿಗಳಿಗೆ ತಕ್ಷಣದಿಂದಲೇ ರಕ್ಷಣೆ ನೀಡಬೇಕು, ರಾಜ್ಯ ಸರ್ಕಾರ ಮತ್ತು ಸಿಬಿಐ ಎರಡು ವಾರಗಳಲ್ಲಿ ಲಿಖಿತ ರೂಪದಲ್ಲಿ ತಮ್ಮ ನಿಲುವು ಸ್ಪಷ್ಟಪಡಿಸಬೇಕು. ಮರು ತನಿಖೆಯನ್ನು ಯಾವ ಸಂಸ್ಥೆಯಿಂದ ನಡೆಸಬಹುದು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿತು.
ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಶೋಭಾ ಗುಪ್ತಾ, ಶೇಖರ ದೇವಸ್, ಸಂಜಯ್ ನೂಲವಿ, ಆಶುತೋಷ್ ದುಬೇ ಹಾಜರಿದ್ದರು. ಸಂತೋಷ್ ರಾವ್ ಪರವಾಗಿ ಹಿರಿಯ ವಕೀಲ ಗುರುರಾಜ್ ವಾದ ಮಂಡಿಸಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am