ಬ್ರೇಕಿಂಗ್ ನ್ಯೂಸ್
01-05-26 10:30 am HK News Staffer ಕ್ರೈಂ
ರಾಮನಗರ, ಮೇ 01: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೆಟ್ರೋಲ್ ಬಾಂಬ್ ಮಾದರಿಯ ವಸ್ತು ಬ್ಲಾಸ್ಟ್ ಆಗುವ ದೃಶ್ಯ ಹೊಂದಿರುವ ರೀಲ್ಸ್ ಮಾಡಿರುವ ಬಗ್ಗೆ ರಜತ್ ವಿರುದ್ಧ ಕನಕಪುರದ ಕಗ್ಗಲೀಪುರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ರಜತ್, ಇತ್ತೀಚೆಗೆ ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಈ ರೀಲ್ಸ್ ಅಪ್ಲೋಡ್ ಮಾಡಿದ್ದರು. ಬೈಕ್ನಲ್ಲಿ ಸ್ಟೈಲ್ ಆಗಿ ಬರುವ ರಜತ್ ಹಿಂದೆ ಪೆಟ್ರೋಲ್ ಬಾಂಬ್ ಮಾದರಿಯ ವಸ್ತು ಸ್ಫೋಟವಾಗುವ ದೃಶ್ಯ ಇದಾಗಿತ್ತು. ಆ ರೀಲ್ಸ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ತಮ್ಮ ತಪ್ಪು ಅರಿತು ರಜತ್ ಕ್ಷಮೆ ಸಹ ಕೇಳಿದ್ದರು. ಆದರೀಗ, ಬಿಗ್ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ:
ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ರಸ್ತೆಯ ವಡೇರಹಳ್ಳಿಯ ಸಾರ್ವಜನಿಕ ರಸ್ತೆಯಲ್ಲಿ ರಜತ್ ಹಾಗೂ ತಂಡ ರೀಲ್ಸ್ ಶೂಟ್ ಮಾಡಿದ್ದರು. ರೀಲ್ಸ್ ಆಕರ್ಷಕವಾಗಿ ಮೂಡಿ ಬರಲೆಂದು ಬ್ಲಾಸ್ಟ್ ಸಹ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಗ್ಗಲೀಪುರ ಪೊಲೀಸರು ರಜತ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಇದೇ ದಿನ ರಜತ್, ರೀಲ್ಸ್ ಶೂಟಿಂಗ್ ಮಾಡಿದ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ತನಿಖೆಯನ್ನು ಸಹ ನಡೆಸಿದ್ದಾರೆ. ರಜತ್ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ.
ಡಿವೈಎಸ್ಪಿ ಪ್ರತಿಕ್ರಿಯೆ:
ಈ ಘಟನೆ ಕುರಿತು ಡಿವೈಎಸ್ಪಿ ಶ್ರೀನಿವಾಸ್ ಅವರು ಮಾಧ್ಯಮದೊಂದಿಗೆ ಮಾತನಾಡಿ, ರಜತ್ ಅವರು ಸಾರ್ವಜನಿಕ ಶಾಂತಿಗೆ ಭಂಗ, ಅನುಚಿತ ವರ್ತನೆ, ರಸ್ತೆ ನಿಯಮ ಉಲ್ಲಂಘನೆ, ಸಾರ್ವಜನಿಕ ಆಸ್ತಿಗೆ ನಷ್ಟ ಮಾಡಿದ್ದಾರೆ. ಬಿಎನ್ಎಸ್ನ ವಿವಿಧ ಕಲಂಗಳ ಅಡಿಯಲ್ಲಿ ರಜತ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಿದ್ದೇವೆ. ರಜತ್ ಅವರಿಗೆ ನೋಟಿಸ್ ನೀಡಿ, ವಿಚಾರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಹಿಂದಿನ ಪ್ರಕರಣ:
ರಜತ್ ಈ ಹಿಂದೊಮ್ಮೆ ಮಚ್ಚು ಹಿಡಿದು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದರು. ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ವಿಡಿಯೋ ಮಾಡಿದ್ದ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇಬ್ಬರ ವಿರುದ್ಧ ಕಳೆದ ಮಾರ್ಚ್ ತಿಂಗಳಿನಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಬಸವೇಶ್ವರ ನಗರ ಠಾಣೆ ಪೊಲೀಸರು, ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದರು. ಬಳಿಕ ಇಬ್ಬರಿಗೂ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ಸಾಕ್ಷ್ಯನಾಶಕ್ಕೆ ಯತ್ನಿಸಬಾರದು ಮತ್ತು ಇದೇ ರೀತಿಯಾಗಿ ಮತ್ತೆ ಘಟನೆ ಮರುಕಳಿಸಬಾರದೆಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿತ್ತು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am