ಬ್ರೇಕಿಂಗ್ ನ್ಯೂಸ್
01-05-26 07:18 pm HK News Staffer ಕ್ರೈಂ
ಉಡುಪಿ, ಮೇ 1: ಕೆಲಸದ ಸ್ಥಳದಲ್ಲಿ ನಡೆದ ಸಣ್ಣ ವಿವಾದವೊಂದು ಗಂಭೀರ ಹಿಂಸಾತ್ಮಕ ಘಟನೆಯಾಗಿ ರೂಪುಗೊಂಡ ಪ್ರಕರಣದಲ್ಲಿ ಕೋರ್ಟ್ ಕಠಿಣ ತೀರ್ಪು ನೀಡಿದೆ. ಕೇರಳ ಮೂಲದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ಆದೇಶ ಹೊರಡಿಸಿದೆ.
ಕೇರಳ ಮೂಲದ ರತೀಶ್ ಕೆ.ಟಿ (42) ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ. 2022 ಫೆಬ್ರವರಿ 28 ರಂದು ಕೇರಳ ಮೂಲದ ಸುಧೀರ್ ಮತ್ತು ರತೀಶ ಕೆ.ಟಿ. ಅವರು ಚಾರ ಗ್ರಾಮದ ಮ೦ಡಾಡಿಜಡ್ಡುವಿನಲ್ಲಿರುವ ಅಜಿತ್ ಅಗಸ್ಟಿನ್ ಎಂಬುವವರ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿರುವ ಸಂಜೀವ್ ಕುಮಾರ್ ಎಂಬಾತನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಾರ್ಟಿಯಲ್ಲಿ ಸಾಕಷ್ಟು ಮದ್ಯಪಾನ ಮಾಡಿದ್ದು ಇದೇ ವೇಳೆ ಕೆಲಸದ ವಿಚಾರದಲ್ಲಿ ರತೀಶನನ್ನು ಸುಧೀರ್ ನಿಂದಿಸಿದ್ದು, ಬಳಿಕ ಇಬ್ಬರ ಮಧ್ಯೆ ಜಗಳ ನಡೆದಿತ್ತು.
ಆ ಜಗಳವನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಆರೋಪಿ, ಎರಡು ದಿನಗಳ ನಂತರ ಅಂದರೆ 2022 ಮಾರ್ಚ್ 2ರಂದು ರಾತ್ರಿ ಸುಮಾರು 1 ಗಂಟೆ ವೇಳೆಗೆ ನಿದ್ದೆಯಲ್ಲಿದ್ದ ಸುಧೀರ್ ಮೇಲೆ ಬಿಸಿ ರಾಸಾಯನಿಕ ಆಸಿಡ್ ಎರಚಿ ಪರಾರಿಯಾಗಿದ್ದನು. ಘಟನೆಯಲ್ಲಿ ಸುಧೀರ್ ಗಂಭೀರವಾಗಿ ಗಾಯಗೊಂಡಿದ್ದನ್ನು.
ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಗಳನ್ನು ಪರಿಶೀಲಿಸಿದ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಸರ್ಕ್ಯೂಟ್ ಬೆಂಚ್, ಕಾರ್ಕಳ) ಆರೋಪಿಯನ್ನು ದೋಷಿಯಾಗಿ ಘೋಷಿಸಿ ಶಿಕ್ಷೆ ವಿಧಿಸಿದೆ. ಪ್ರಸ್ತುತ ರತೀಶ್ ಹಿರಿಯಡ್ಕ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am