ಬ್ರೇಕಿಂಗ್ ನ್ಯೂಸ್
01-05-26 09:24 pm HK News Staffer ಕ್ರೈಂ
ಮಂಗಳೂರು, ಮೇ 1: ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯಲ್ಲಿ ಉಂಟಾಗಿದ್ದ ಗೊಂದಲಕ್ಕೆ ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಅಂತಿಮ ಪರಿಹಾರ ದೊರೆತಿದೆ. ಇದೀಗ ಅಖಿಲ ಭಾರತ ಬಿಲ್ಲವರ ಯೂನಿಯನ್ ಸಭೆ ನಡೆಸಿ ಕುದ್ರೋಳಿ ದೇವಸ್ಥಾನಕ್ಕೆ ಹೊಸ ಆಡಳಿತ ಕಮಿಟಿಯನ್ನು ನೇಮಕ ಮಾಡಿದೆ.
ಅಧ್ಯಕ್ಷರ ಅನುಮತಿ ಇಲ್ಲದೆ ಕೆಲವು ಆಡಳಿತ ಸಮಿತಿ ಸದಸ್ಯರು ಸಭೆ ನಡೆಸಿ, ನಿಯಮಬಾಹಿರ ರೀತಿಯಲ್ಲಿ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿದ್ದರು. ಒಟ್ಟು 8 ಸದಸ್ಯರ ಸಮಿತಿಯಲ್ಲಿ 5 ಮಂದಿ ಗೈರಾಗಿದ್ದ ವೇಳೆ ನಡೆದ ಈ ಸಭೆಯೇ ಅಸಂವಿಧಾನಿಕ ಎಂದು ಹಿಂದಿನ ಪದಾಧಿಕಾರಿಗಳ ಸಮಿತಿ ಕೋರ್ಟ್ ಮೊರೆ ಹೋಗಿತ್ತು. ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ನ್ಯಾಯಾಲಯ, ಹಿಂದಿನ ಸಮಿತಿಯ ಪರವಾಗಿ ಆದೇಶ ನೀಡಿದೆ ಎಂದು ರವಿಶಂಕರ್ ಮಿಜಾರ್ ತಿಳಿಸಿದ್ದಾರೆ.

ಈ ಕುರಿತು ನೀಡಿರುವ ಹೇಳಿಕೆಯಲ್ಲಿ, 20-06-2025 ರಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಕಾರ್ಯದರ್ಶಿಗಳಾಗಿದ್ದ ಮಾಧವ ಸುವರ್ಣ ಅವರು ವಾಟ್ಸಾಪ್ ಮುಖಾಂತರ ಸಮಿತಿಯ ಸದಸ್ಯರು ಸೇರಿದಂತೆ ಕೆಲವರನ್ನು ಸಭೆಗೆ ಆಹ್ವಾನಿಸಿ ಇದರಲ್ಲಿ ಜನಾರ್ದನ ಪೂಜಾರಿಯವರು ಸಹ ಉಪಸ್ಥಿತಿಯಿರಲಿದ್ದಾರೆ ಎಂದು ಹೇಳಿ ಅಕ್ರಮವಾಗಿ ಸಭೆ ನಡೆಸಿದ್ದರು. ಆದರೆ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕರೆಯಲಾಗಿದ್ದ ಈ ಸಭೆಯು ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರ ಅನುಮತಿ ಇಲ್ಲದೇ ನಡೆದಿರುವುದರಿಂದ ಇಲ್ಲಿನ ಯಾವುದೇ ಚರ್ಚೆಯೂ ಸಹ ಅಸಂವಿಧಾನಿಕ ಆಗಿರುತ್ತದೆ. ಅಲ್ಲದೇ ಈ ಸಭೆಯಲ್ಲಿ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಎಂಟು ಜನ ಸದಸ್ಯರುಗಳಲ್ಲಿ ಐದು ಜನ ಸದಸ್ಯರು ಗೈರು ಹಾಜರಾಗಿದ್ದರಿಂದ ಇದಕ್ಕೆ ಅಗತ್ಯ ಬಹುಮತವೂ ಇರಲಿಲ್ಲ. ಇಂತಹ ಅನಧಿಕೃತ ಗುಂಪು ಚರ್ಚೆಯಲ್ಲಿ ಕ್ಷೇತ್ರದ ಆಡಳಿತ ಸಮಿತಿಗೆ ಬದಲಾಗಿ ಏಕಪಕ್ಷೀಯವಾಗಿ ನೂತನ ಸಮಿತಿಯ ಘೋಷಣೆ ಮಾಡಿರುವುದು ಕ್ಷೇತ್ರದ ಘನತೆಗೆ ಧಕ್ಕೆ ತರುವಂತಾಗಿತ್ತು.
ಆನಂತರ, ಆಡಳಿತ ಸಮಿತಿಯಲ್ಲಿದ್ದ ನಾವು ಐದು ಜನರು, ಕ್ಷೇತ್ರದಲ್ಲಿ ಅನಧಿಕೃತವಾಗಿ ಆಡಳಿತ ನಡೆಸುತ್ತಿದ್ದ ಸಮಿತಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದೆವು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಅಂತಿಮವಾಗಿ ನಮ್ಮ ಪರವಾಗಿ ಆದೇಶ ಬಂದಿರುವುದು ನ್ಯಾಯಕ್ಕೆ ದೊರೆತ ಮನ್ನಣೆಯಾಗಿದೆ. ಇದೀಗ 16.2.2026 ರಂದು ಶ್ರೀ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದ ವಠಾರದಲ್ಲಿರುವ ನಾರಾಯಣ ಗುರು ಕಾಲೇಜಿನ ಸಭಾಂಗಣದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.) ವಾರ್ಷಿಕ ಪ್ರತಿನಿಧಿ ಸಭೆ ಜರುಗಿದ್ದು, ಆ ಸಭೆಯ ನಿರ್ಣಯದಂತೆ 50 ಜನ ಸದಸ್ಯರ ಎಕ್ಸಿಕ್ಯೂಟಿವ್ ಸಮಿತಿಯನ್ನು ರಚಿಸಿ ಅದರಲ್ಲಿ, ಎಚ್.ಎಸ್ ಸಾಯಿರಾಮ್, ಶ್ರೀಮತಿ ಉರ್ಮಿಳಾ ರಮೇಶ್ ಕುಮಾರ್, ಕೆ.ಟಿ ಸುವರ್ಣ, ಜಗದೀಪ್ ಸುವರ್ಣ, ರವಿಶಂಕರ್ ಮಿಜಾರ್, ಶೇಖರ್ ಪೂಜಾರಿ, ಎಚ್.ರತಿಂದ್ರನಾಥ, ಸದಾನಂದ ಪೂಜಾರಿ, ಮತ್ತು ಶರತ್ ಸುವರ್ಣ ಬಜ್ಪೆ ಎಂಬ ಒಟ್ಟು 9 ಜನರನ್ನು ಶ್ರೀ ಗೋಕರ್ಣನಾಥ ಕ್ಷೇತ್ರದ 2026-27 ನೇ ಸಾಲಿನ ಆಡಳಿತ ಸಮಿತಿಗೆ ಅಧಿಕೃತವಾಗಿ ಘೋಷಿಸಲಾಯಿತು.
ಇದರಂತೆ, ಅಧ್ಯಕ್ಷರಾಗಿ ಎಚ್.ಎಸ್ ಸಾಯಿರಾಮ್, ಉಪಾಧ್ಯಕ್ಷರಾಗಿ ಶ್ರೀಮತಿ ಉರ್ಮಿಳಾ ರಮೇಶ್ ಕುಮಾರ್, ಕಾರ್ಯದರ್ಶಿಯಾಗಿ ರವಿಶಂಕರ್ ಮಿಜಾರ್, ಖಜಾಂಚಿ- ಶೇಖರ್ ಪೂಜಾರಿ, ಸದಸ್ಯರಾಗಿ ಜಗದೀಪ್ ಸುವರ್ಣ, ಕೆ.ಟಿ ಸುವರ್ಣ, ಎಚ್. ಎಚ್.ರತಿಂದ್ರನಾಥ, ಸದಾನಂದ ಪೂಜಾರಿ, ಮತ್ತು ಶರತ್ ಸುವರ್ಣ ಬಜ್ಪೆ ಅವರನ್ನು ಆಯ್ಕೆ ಮಾಡಲಾಗಿದೆ. ಅಖಿಲ ಭಾರತ ಬಿಲ್ಲವ ಯೂನಿಯನ್ ಮುಖಾಂತರ ಕ್ಷೇತ್ರದ ಆಡಳಿತಕ್ಕೆ ಹೊಸ ಸಮಿತಿ ಘೋಷಣೆಯಾಗಿದ್ದು, ಇದರ ಬೈಲಾ ಪ್ರಕಾರವೇ ಕ್ಷೇತ್ರವನ್ನು ಮುನ್ನಡೆಸಲು ಈ ಸಮಿತಿಯು ಅಧಿಕೃತವಾಗಿದೆ ಎಂದು ಈ ಮೂಲಕ ಸಮಾಜಕ್ಕೆ, ಶ್ರೀ ಕ್ಷೇತ್ರದ ಸರ್ವ ಭಕ್ತರಿಗೆ ಮನವರಿಕೆ ಮಾಡಲು ಬಯಸುತ್ತೇವೆ ಎಂದು ರವಿಶಂಕರ್ ಮಿಜಾರ್ ಮತ್ತು ಎಚ್.ಎಸ್ ಸಾಯಿರಾಂ ಮತ್ತಿತರರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am